ಬ್ರೇಕಿಂಗ್ ನ್ಯೂಸ್
26-02-25 05:38 pm HK News Desk ದೇಶ - ವಿದೇಶ
ನವದೆಹಲಿ, ಫೆ.26 : ಸುಡಾನ್ ಮಿಲಿಟರಿ ವಿಮಾನವೊಂದು ಜನವಸತಿ ಪ್ರದೇಶದಲ್ಲಿ ಪತನಗೊಂಡಿದ್ದು ಸ್ಥಳೀಯ ನಾಗರಿಕರು, ಅಧಿಕಾರಿಗಳು ಸೇರಿದಂತೆ 46 ಜನರು ಸಾವನ್ನಪ್ಪಿದ್ದಾರೆ. ಸುಡಾನ್ ರಾಜಧಾನಿ ಖಾರ್ಟೂಮ್ ನಗರ ಸಮೀಪದ ಓಮ್ದುರ್ಮನ್ ಎಂಬಲ್ಲಿ ಮಿಲಿಟರಿ ವಿಮಾನ ಅಪಘಾತಕ್ಕೀಡಾಗಿದೆ.
ಸುಡಾನ್ ಮಿಲಿಟರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಅಪಘಾತದಲ್ಲಿ ಮಿಲಿಟರಿ ಸಿಬ್ಬಂದಿ ಮತ್ತು ಸ್ಥಳೀಯ ನಾಗರಿಕರು ಸಾವನ್ನಪ್ಪಿದ್ದಾರೆ. ಅಪಘಾತದ ಕಾರಣದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸುಡಾನ್ ಸೇನಾ ವರದಿಯ ಪ್ರಕಾರ, ಸೇನೆಯ ಆಂಟೊನೊವ್ ವಿಮಾನ ವಾಡಿ ಸಯೆದ್ನಾ ವಾಯುನೆಲೆಯಿಂದ ಟೇಕಾಫ್ ಆಗುವಾಗ ಅಪಘಾತಕ್ಕೀಡಾಗಿದೆ. ಮನೆಗಳು ಇದ್ದ ಜಾಗಕ್ಕೆ ವಿಮಾನ ಬಿದ್ದಿರುವುದರಿಂದ ಸ್ಥಳೀಯ ಹಲವರು ಗಾಯಗೊಂಡಿದ್ದಾರೆ.
ಸುಡಾನ್ ಆರೋಗ್ಯ ಸಚಿವಾಲಯವು ಸಾವಿನ ಸಂಖ್ಯೆ ಕನಿಷ್ಠ 46 ಎಂದು ತಿಳಿಸಿದೆ. ಘಟನೆ ವೇಳೆ, ಹತ್ತು ಮಂದಿ ನಾಗರಿಕರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಾಂತ್ರಿಕ ತೊಂದರೆಯಿಂದ ವಿಮಾನ ಪತನಗೊಂಡಿದೆ ಎಂದು ಸೇನೆ ಹೇಳಿಕೊಂಡಿದೆ.
ಹೆಚ್ಚುತ್ತಿರುವ ಅಂತರ್ಯುದ್ಧ
ಸುಡಾನ್ 2023ರಿಂದ ನಿರಂತರವಾಗಿ ಅಂತರ್ಯುದ್ಧ ನಡೆಯುತ್ತಿದ್ದು ದೇಶದ ಮಿಲಿಟರಿ ಮತ್ತು ಕುಖ್ಯಾತ ಅರೆಸೈನಿಕ ಗುಂಪು, ರಾಪಿಡ್ ಸಪೋರ್ಟ್ ಫೋರ್ಸಸ್ (ಆರ್ಎಸ್ಎಫ್) ನಡುವಿನ ಉದ್ವಿಗ್ನ ಸ್ಥಿತಿ ಯುದ್ಧ ರೂಪ ಪಡೆದಿದೆ. ಜನಾಂಗೀಯ ಹಿಂಸಾಚಾರ ಮತ್ತು ಸಾಮೂಹಿಕ ಅತ್ಯಾಚಾರದಂತಹ ಭಯಾನಕ ಘಟನೆಗಳಿಗೆ ಕಾರಣವಾಗುತ್ತಿದೆ. ವಿಶ್ವಸಂಸ್ಥೆ ಮತ್ತು ಅಂತರರಾಷ್ಟ್ರೀಯ ಮಾನವ ಹಕ್ಕು ಸಂಸ್ಥೆಗಳು ಈ ಘಟನೆಗಳನ್ನು ಮಾನವೀಯತೆಯ ವಿರುದ್ಧದ ಕ್ರೌರ್ಯಗಳು ಎಂದು ಕರೆದಿವೆ. ಇತ್ತೀಚಿಗೆ ಖಾರ್ಟೌಮ್ ಮತ್ತು ಇತರ ಪ್ರದೇಶಗಳಲ್ಲಿ ಆರ್ಎಸ್ಎಫ್ ಬಂಡುಕೋರರ ವಿರುದ್ಧ ಸೇನಾ ಕಾರ್ಯಾಚರಣೆ ತೀವ್ರಗೊಂಡಿದೆ. ಇದಕ್ಕೆ ಪ್ರತೀಕಾರ ಎನ್ನುವಂತೆ ಸುಡಾನ್ ಮಿಲಿಟರಿ ವಿಮಾನವನ್ನು ಹೊಡೆದುರುಳಿಸಿದ್ದಾಗಿ ಹೇಳಳಲಾಗುತ್ತಿದೆ.
Forty-six people were killed when a Sudanese military transport plane crashed into a residential neighbourhood on the outskirts of Khartoum, the regional government said Wednesday.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm