ಬ್ರೇಕಿಂಗ್ ನ್ಯೂಸ್
26-02-25 05:38 pm HK News Desk ದೇಶ - ವಿದೇಶ
ನವದೆಹಲಿ, ಫೆ.26 : ಸುಡಾನ್ ಮಿಲಿಟರಿ ವಿಮಾನವೊಂದು ಜನವಸತಿ ಪ್ರದೇಶದಲ್ಲಿ ಪತನಗೊಂಡಿದ್ದು ಸ್ಥಳೀಯ ನಾಗರಿಕರು, ಅಧಿಕಾರಿಗಳು ಸೇರಿದಂತೆ 46 ಜನರು ಸಾವನ್ನಪ್ಪಿದ್ದಾರೆ. ಸುಡಾನ್ ರಾಜಧಾನಿ ಖಾರ್ಟೂಮ್ ನಗರ ಸಮೀಪದ ಓಮ್ದುರ್ಮನ್ ಎಂಬಲ್ಲಿ ಮಿಲಿಟರಿ ವಿಮಾನ ಅಪಘಾತಕ್ಕೀಡಾಗಿದೆ.
ಸುಡಾನ್ ಮಿಲಿಟರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಅಪಘಾತದಲ್ಲಿ ಮಿಲಿಟರಿ ಸಿಬ್ಬಂದಿ ಮತ್ತು ಸ್ಥಳೀಯ ನಾಗರಿಕರು ಸಾವನ್ನಪ್ಪಿದ್ದಾರೆ. ಅಪಘಾತದ ಕಾರಣದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸುಡಾನ್ ಸೇನಾ ವರದಿಯ ಪ್ರಕಾರ, ಸೇನೆಯ ಆಂಟೊನೊವ್ ವಿಮಾನ ವಾಡಿ ಸಯೆದ್ನಾ ವಾಯುನೆಲೆಯಿಂದ ಟೇಕಾಫ್ ಆಗುವಾಗ ಅಪಘಾತಕ್ಕೀಡಾಗಿದೆ. ಮನೆಗಳು ಇದ್ದ ಜಾಗಕ್ಕೆ ವಿಮಾನ ಬಿದ್ದಿರುವುದರಿಂದ ಸ್ಥಳೀಯ ಹಲವರು ಗಾಯಗೊಂಡಿದ್ದಾರೆ.



ಸುಡಾನ್ ಆರೋಗ್ಯ ಸಚಿವಾಲಯವು ಸಾವಿನ ಸಂಖ್ಯೆ ಕನಿಷ್ಠ 46 ಎಂದು ತಿಳಿಸಿದೆ. ಘಟನೆ ವೇಳೆ, ಹತ್ತು ಮಂದಿ ನಾಗರಿಕರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಾಂತ್ರಿಕ ತೊಂದರೆಯಿಂದ ವಿಮಾನ ಪತನಗೊಂಡಿದೆ ಎಂದು ಸೇನೆ ಹೇಳಿಕೊಂಡಿದೆ.
ಹೆಚ್ಚುತ್ತಿರುವ ಅಂತರ್ಯುದ್ಧ
ಸುಡಾನ್ 2023ರಿಂದ ನಿರಂತರವಾಗಿ ಅಂತರ್ಯುದ್ಧ ನಡೆಯುತ್ತಿದ್ದು ದೇಶದ ಮಿಲಿಟರಿ ಮತ್ತು ಕುಖ್ಯಾತ ಅರೆಸೈನಿಕ ಗುಂಪು, ರಾಪಿಡ್ ಸಪೋರ್ಟ್ ಫೋರ್ಸಸ್ (ಆರ್ಎಸ್ಎಫ್) ನಡುವಿನ ಉದ್ವಿಗ್ನ ಸ್ಥಿತಿ ಯುದ್ಧ ರೂಪ ಪಡೆದಿದೆ. ಜನಾಂಗೀಯ ಹಿಂಸಾಚಾರ ಮತ್ತು ಸಾಮೂಹಿಕ ಅತ್ಯಾಚಾರದಂತಹ ಭಯಾನಕ ಘಟನೆಗಳಿಗೆ ಕಾರಣವಾಗುತ್ತಿದೆ. ವಿಶ್ವಸಂಸ್ಥೆ ಮತ್ತು ಅಂತರರಾಷ್ಟ್ರೀಯ ಮಾನವ ಹಕ್ಕು ಸಂಸ್ಥೆಗಳು ಈ ಘಟನೆಗಳನ್ನು ಮಾನವೀಯತೆಯ ವಿರುದ್ಧದ ಕ್ರೌರ್ಯಗಳು ಎಂದು ಕರೆದಿವೆ. ಇತ್ತೀಚಿಗೆ ಖಾರ್ಟೌಮ್ ಮತ್ತು ಇತರ ಪ್ರದೇಶಗಳಲ್ಲಿ ಆರ್ಎಸ್ಎಫ್ ಬಂಡುಕೋರರ ವಿರುದ್ಧ ಸೇನಾ ಕಾರ್ಯಾಚರಣೆ ತೀವ್ರಗೊಂಡಿದೆ. ಇದಕ್ಕೆ ಪ್ರತೀಕಾರ ಎನ್ನುವಂತೆ ಸುಡಾನ್ ಮಿಲಿಟರಿ ವಿಮಾನವನ್ನು ಹೊಡೆದುರುಳಿಸಿದ್ದಾಗಿ ಹೇಳಳಲಾಗುತ್ತಿದೆ.
Forty-six people were killed when a Sudanese military transport plane crashed into a residential neighbourhood on the outskirts of Khartoum, the regional government said Wednesday.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am