ಬ್ರೇಕಿಂಗ್ ನ್ಯೂಸ್
26-02-25 05:38 pm HK News Desk ದೇಶ - ವಿದೇಶ
ನವದೆಹಲಿ, ಫೆ.26 : ಸುಡಾನ್ ಮಿಲಿಟರಿ ವಿಮಾನವೊಂದು ಜನವಸತಿ ಪ್ರದೇಶದಲ್ಲಿ ಪತನಗೊಂಡಿದ್ದು ಸ್ಥಳೀಯ ನಾಗರಿಕರು, ಅಧಿಕಾರಿಗಳು ಸೇರಿದಂತೆ 46 ಜನರು ಸಾವನ್ನಪ್ಪಿದ್ದಾರೆ. ಸುಡಾನ್ ರಾಜಧಾನಿ ಖಾರ್ಟೂಮ್ ನಗರ ಸಮೀಪದ ಓಮ್ದುರ್ಮನ್ ಎಂಬಲ್ಲಿ ಮಿಲಿಟರಿ ವಿಮಾನ ಅಪಘಾತಕ್ಕೀಡಾಗಿದೆ.
ಸುಡಾನ್ ಮಿಲಿಟರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಅಪಘಾತದಲ್ಲಿ ಮಿಲಿಟರಿ ಸಿಬ್ಬಂದಿ ಮತ್ತು ಸ್ಥಳೀಯ ನಾಗರಿಕರು ಸಾವನ್ನಪ್ಪಿದ್ದಾರೆ. ಅಪಘಾತದ ಕಾರಣದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸುಡಾನ್ ಸೇನಾ ವರದಿಯ ಪ್ರಕಾರ, ಸೇನೆಯ ಆಂಟೊನೊವ್ ವಿಮಾನ ವಾಡಿ ಸಯೆದ್ನಾ ವಾಯುನೆಲೆಯಿಂದ ಟೇಕಾಫ್ ಆಗುವಾಗ ಅಪಘಾತಕ್ಕೀಡಾಗಿದೆ. ಮನೆಗಳು ಇದ್ದ ಜಾಗಕ್ಕೆ ವಿಮಾನ ಬಿದ್ದಿರುವುದರಿಂದ ಸ್ಥಳೀಯ ಹಲವರು ಗಾಯಗೊಂಡಿದ್ದಾರೆ.



ಸುಡಾನ್ ಆರೋಗ್ಯ ಸಚಿವಾಲಯವು ಸಾವಿನ ಸಂಖ್ಯೆ ಕನಿಷ್ಠ 46 ಎಂದು ತಿಳಿಸಿದೆ. ಘಟನೆ ವೇಳೆ, ಹತ್ತು ಮಂದಿ ನಾಗರಿಕರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಾಂತ್ರಿಕ ತೊಂದರೆಯಿಂದ ವಿಮಾನ ಪತನಗೊಂಡಿದೆ ಎಂದು ಸೇನೆ ಹೇಳಿಕೊಂಡಿದೆ.
ಹೆಚ್ಚುತ್ತಿರುವ ಅಂತರ್ಯುದ್ಧ
ಸುಡಾನ್ 2023ರಿಂದ ನಿರಂತರವಾಗಿ ಅಂತರ್ಯುದ್ಧ ನಡೆಯುತ್ತಿದ್ದು ದೇಶದ ಮಿಲಿಟರಿ ಮತ್ತು ಕುಖ್ಯಾತ ಅರೆಸೈನಿಕ ಗುಂಪು, ರಾಪಿಡ್ ಸಪೋರ್ಟ್ ಫೋರ್ಸಸ್ (ಆರ್ಎಸ್ಎಫ್) ನಡುವಿನ ಉದ್ವಿಗ್ನ ಸ್ಥಿತಿ ಯುದ್ಧ ರೂಪ ಪಡೆದಿದೆ. ಜನಾಂಗೀಯ ಹಿಂಸಾಚಾರ ಮತ್ತು ಸಾಮೂಹಿಕ ಅತ್ಯಾಚಾರದಂತಹ ಭಯಾನಕ ಘಟನೆಗಳಿಗೆ ಕಾರಣವಾಗುತ್ತಿದೆ. ವಿಶ್ವಸಂಸ್ಥೆ ಮತ್ತು ಅಂತರರಾಷ್ಟ್ರೀಯ ಮಾನವ ಹಕ್ಕು ಸಂಸ್ಥೆಗಳು ಈ ಘಟನೆಗಳನ್ನು ಮಾನವೀಯತೆಯ ವಿರುದ್ಧದ ಕ್ರೌರ್ಯಗಳು ಎಂದು ಕರೆದಿವೆ. ಇತ್ತೀಚಿಗೆ ಖಾರ್ಟೌಮ್ ಮತ್ತು ಇತರ ಪ್ರದೇಶಗಳಲ್ಲಿ ಆರ್ಎಸ್ಎಫ್ ಬಂಡುಕೋರರ ವಿರುದ್ಧ ಸೇನಾ ಕಾರ್ಯಾಚರಣೆ ತೀವ್ರಗೊಂಡಿದೆ. ಇದಕ್ಕೆ ಪ್ರತೀಕಾರ ಎನ್ನುವಂತೆ ಸುಡಾನ್ ಮಿಲಿಟರಿ ವಿಮಾನವನ್ನು ಹೊಡೆದುರುಳಿಸಿದ್ದಾಗಿ ಹೇಳಳಲಾಗುತ್ತಿದೆ.
Forty-six people were killed when a Sudanese military transport plane crashed into a residential neighbourhood on the outskirts of Khartoum, the regional government said Wednesday.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm