ಬ್ರೇಕಿಂಗ್ ನ್ಯೂಸ್
26-02-25 05:38 pm HK News Desk ದೇಶ - ವಿದೇಶ
ನವದೆಹಲಿ, ಫೆ.26 : ಸುಡಾನ್ ಮಿಲಿಟರಿ ವಿಮಾನವೊಂದು ಜನವಸತಿ ಪ್ರದೇಶದಲ್ಲಿ ಪತನಗೊಂಡಿದ್ದು ಸ್ಥಳೀಯ ನಾಗರಿಕರು, ಅಧಿಕಾರಿಗಳು ಸೇರಿದಂತೆ 46 ಜನರು ಸಾವನ್ನಪ್ಪಿದ್ದಾರೆ. ಸುಡಾನ್ ರಾಜಧಾನಿ ಖಾರ್ಟೂಮ್ ನಗರ ಸಮೀಪದ ಓಮ್ದುರ್ಮನ್ ಎಂಬಲ್ಲಿ ಮಿಲಿಟರಿ ವಿಮಾನ ಅಪಘಾತಕ್ಕೀಡಾಗಿದೆ.
ಸುಡಾನ್ ಮಿಲಿಟರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಅಪಘಾತದಲ್ಲಿ ಮಿಲಿಟರಿ ಸಿಬ್ಬಂದಿ ಮತ್ತು ಸ್ಥಳೀಯ ನಾಗರಿಕರು ಸಾವನ್ನಪ್ಪಿದ್ದಾರೆ. ಅಪಘಾತದ ಕಾರಣದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸುಡಾನ್ ಸೇನಾ ವರದಿಯ ಪ್ರಕಾರ, ಸೇನೆಯ ಆಂಟೊನೊವ್ ವಿಮಾನ ವಾಡಿ ಸಯೆದ್ನಾ ವಾಯುನೆಲೆಯಿಂದ ಟೇಕಾಫ್ ಆಗುವಾಗ ಅಪಘಾತಕ್ಕೀಡಾಗಿದೆ. ಮನೆಗಳು ಇದ್ದ ಜಾಗಕ್ಕೆ ವಿಮಾನ ಬಿದ್ದಿರುವುದರಿಂದ ಸ್ಥಳೀಯ ಹಲವರು ಗಾಯಗೊಂಡಿದ್ದಾರೆ.



ಸುಡಾನ್ ಆರೋಗ್ಯ ಸಚಿವಾಲಯವು ಸಾವಿನ ಸಂಖ್ಯೆ ಕನಿಷ್ಠ 46 ಎಂದು ತಿಳಿಸಿದೆ. ಘಟನೆ ವೇಳೆ, ಹತ್ತು ಮಂದಿ ನಾಗರಿಕರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಾಂತ್ರಿಕ ತೊಂದರೆಯಿಂದ ವಿಮಾನ ಪತನಗೊಂಡಿದೆ ಎಂದು ಸೇನೆ ಹೇಳಿಕೊಂಡಿದೆ.
ಹೆಚ್ಚುತ್ತಿರುವ ಅಂತರ್ಯುದ್ಧ
ಸುಡಾನ್ 2023ರಿಂದ ನಿರಂತರವಾಗಿ ಅಂತರ್ಯುದ್ಧ ನಡೆಯುತ್ತಿದ್ದು ದೇಶದ ಮಿಲಿಟರಿ ಮತ್ತು ಕುಖ್ಯಾತ ಅರೆಸೈನಿಕ ಗುಂಪು, ರಾಪಿಡ್ ಸಪೋರ್ಟ್ ಫೋರ್ಸಸ್ (ಆರ್ಎಸ್ಎಫ್) ನಡುವಿನ ಉದ್ವಿಗ್ನ ಸ್ಥಿತಿ ಯುದ್ಧ ರೂಪ ಪಡೆದಿದೆ. ಜನಾಂಗೀಯ ಹಿಂಸಾಚಾರ ಮತ್ತು ಸಾಮೂಹಿಕ ಅತ್ಯಾಚಾರದಂತಹ ಭಯಾನಕ ಘಟನೆಗಳಿಗೆ ಕಾರಣವಾಗುತ್ತಿದೆ. ವಿಶ್ವಸಂಸ್ಥೆ ಮತ್ತು ಅಂತರರಾಷ್ಟ್ರೀಯ ಮಾನವ ಹಕ್ಕು ಸಂಸ್ಥೆಗಳು ಈ ಘಟನೆಗಳನ್ನು ಮಾನವೀಯತೆಯ ವಿರುದ್ಧದ ಕ್ರೌರ್ಯಗಳು ಎಂದು ಕರೆದಿವೆ. ಇತ್ತೀಚಿಗೆ ಖಾರ್ಟೌಮ್ ಮತ್ತು ಇತರ ಪ್ರದೇಶಗಳಲ್ಲಿ ಆರ್ಎಸ್ಎಫ್ ಬಂಡುಕೋರರ ವಿರುದ್ಧ ಸೇನಾ ಕಾರ್ಯಾಚರಣೆ ತೀವ್ರಗೊಂಡಿದೆ. ಇದಕ್ಕೆ ಪ್ರತೀಕಾರ ಎನ್ನುವಂತೆ ಸುಡಾನ್ ಮಿಲಿಟರಿ ವಿಮಾನವನ್ನು ಹೊಡೆದುರುಳಿಸಿದ್ದಾಗಿ ಹೇಳಳಲಾಗುತ್ತಿದೆ.
Forty-six people were killed when a Sudanese military transport plane crashed into a residential neighbourhood on the outskirts of Khartoum, the regional government said Wednesday.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am