ಬ್ರೇಕಿಂಗ್ ನ್ಯೂಸ್
26-02-25 05:38 pm HK News Desk ದೇಶ - ವಿದೇಶ
ನವದೆಹಲಿ, ಫೆ.26 : ಸುಡಾನ್ ಮಿಲಿಟರಿ ವಿಮಾನವೊಂದು ಜನವಸತಿ ಪ್ರದೇಶದಲ್ಲಿ ಪತನಗೊಂಡಿದ್ದು ಸ್ಥಳೀಯ ನಾಗರಿಕರು, ಅಧಿಕಾರಿಗಳು ಸೇರಿದಂತೆ 46 ಜನರು ಸಾವನ್ನಪ್ಪಿದ್ದಾರೆ. ಸುಡಾನ್ ರಾಜಧಾನಿ ಖಾರ್ಟೂಮ್ ನಗರ ಸಮೀಪದ ಓಮ್ದುರ್ಮನ್ ಎಂಬಲ್ಲಿ ಮಿಲಿಟರಿ ವಿಮಾನ ಅಪಘಾತಕ್ಕೀಡಾಗಿದೆ.
ಸುಡಾನ್ ಮಿಲಿಟರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಅಪಘಾತದಲ್ಲಿ ಮಿಲಿಟರಿ ಸಿಬ್ಬಂದಿ ಮತ್ತು ಸ್ಥಳೀಯ ನಾಗರಿಕರು ಸಾವನ್ನಪ್ಪಿದ್ದಾರೆ. ಅಪಘಾತದ ಕಾರಣದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸುಡಾನ್ ಸೇನಾ ವರದಿಯ ಪ್ರಕಾರ, ಸೇನೆಯ ಆಂಟೊನೊವ್ ವಿಮಾನ ವಾಡಿ ಸಯೆದ್ನಾ ವಾಯುನೆಲೆಯಿಂದ ಟೇಕಾಫ್ ಆಗುವಾಗ ಅಪಘಾತಕ್ಕೀಡಾಗಿದೆ. ಮನೆಗಳು ಇದ್ದ ಜಾಗಕ್ಕೆ ವಿಮಾನ ಬಿದ್ದಿರುವುದರಿಂದ ಸ್ಥಳೀಯ ಹಲವರು ಗಾಯಗೊಂಡಿದ್ದಾರೆ.



ಸುಡಾನ್ ಆರೋಗ್ಯ ಸಚಿವಾಲಯವು ಸಾವಿನ ಸಂಖ್ಯೆ ಕನಿಷ್ಠ 46 ಎಂದು ತಿಳಿಸಿದೆ. ಘಟನೆ ವೇಳೆ, ಹತ್ತು ಮಂದಿ ನಾಗರಿಕರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಾಂತ್ರಿಕ ತೊಂದರೆಯಿಂದ ವಿಮಾನ ಪತನಗೊಂಡಿದೆ ಎಂದು ಸೇನೆ ಹೇಳಿಕೊಂಡಿದೆ.
ಹೆಚ್ಚುತ್ತಿರುವ ಅಂತರ್ಯುದ್ಧ
ಸುಡಾನ್ 2023ರಿಂದ ನಿರಂತರವಾಗಿ ಅಂತರ್ಯುದ್ಧ ನಡೆಯುತ್ತಿದ್ದು ದೇಶದ ಮಿಲಿಟರಿ ಮತ್ತು ಕುಖ್ಯಾತ ಅರೆಸೈನಿಕ ಗುಂಪು, ರಾಪಿಡ್ ಸಪೋರ್ಟ್ ಫೋರ್ಸಸ್ (ಆರ್ಎಸ್ಎಫ್) ನಡುವಿನ ಉದ್ವಿಗ್ನ ಸ್ಥಿತಿ ಯುದ್ಧ ರೂಪ ಪಡೆದಿದೆ. ಜನಾಂಗೀಯ ಹಿಂಸಾಚಾರ ಮತ್ತು ಸಾಮೂಹಿಕ ಅತ್ಯಾಚಾರದಂತಹ ಭಯಾನಕ ಘಟನೆಗಳಿಗೆ ಕಾರಣವಾಗುತ್ತಿದೆ. ವಿಶ್ವಸಂಸ್ಥೆ ಮತ್ತು ಅಂತರರಾಷ್ಟ್ರೀಯ ಮಾನವ ಹಕ್ಕು ಸಂಸ್ಥೆಗಳು ಈ ಘಟನೆಗಳನ್ನು ಮಾನವೀಯತೆಯ ವಿರುದ್ಧದ ಕ್ರೌರ್ಯಗಳು ಎಂದು ಕರೆದಿವೆ. ಇತ್ತೀಚಿಗೆ ಖಾರ್ಟೌಮ್ ಮತ್ತು ಇತರ ಪ್ರದೇಶಗಳಲ್ಲಿ ಆರ್ಎಸ್ಎಫ್ ಬಂಡುಕೋರರ ವಿರುದ್ಧ ಸೇನಾ ಕಾರ್ಯಾಚರಣೆ ತೀವ್ರಗೊಂಡಿದೆ. ಇದಕ್ಕೆ ಪ್ರತೀಕಾರ ಎನ್ನುವಂತೆ ಸುಡಾನ್ ಮಿಲಿಟರಿ ವಿಮಾನವನ್ನು ಹೊಡೆದುರುಳಿಸಿದ್ದಾಗಿ ಹೇಳಳಲಾಗುತ್ತಿದೆ.
Forty-six people were killed when a Sudanese military transport plane crashed into a residential neighbourhood on the outskirts of Khartoum, the regional government said Wednesday.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm