ಬ್ರೇಕಿಂಗ್ ನ್ಯೂಸ್
17-12-20 04:36 pm Headline Karnataka News Network ದೇಶ - ವಿದೇಶ
ವಾರಣಾಸಿ, ಡಿ.17: ಮದುವೆ ಫಿಕ್ಸ್ ಆದಬಳಿಕ ಹುಡುಗ ಕೈಕೊಡುವುದನ್ನು ಕೇಳಿದ್ದೇವೆ. ಮದುವೆ ನಿರಾಕರಿಸಿ, ಹುಡುಗಿ ಬೇರೆ ಹುಡುಗನ ಜೊತೆ ಓಡಿ ಹೋಗಿದ್ದನ್ನೂ ಕೇಳಿದ್ದೇವೆ. ಆದರೆ, ಇಲ್ಲಿ ಮಾತ್ರ ಬೇರೆಯದ್ದೇ ಕತೆ ಆಗಿದೆ. ಹುಡುಗನ ಕಡೆಯವರು ಸಂಜೆ ಹೊತ್ತಿಗೆ ಹುಡುಗಿ ಮನೆಗೆಂದು ದಿಬ್ಬಣ ತೆರಳಿದ್ದಾರೆ. ಆದರೆ, ಹುಡುಗಿ ಮನೆಯನ್ನು ಪತ್ತೆ ಮಾಡಲಾಗದೆ ಇಡೀ ರಾತ್ರಿ ಬಸವಳಿದಿದ್ದಾರೆ.
ಹೌದು.. ಹುಡುಗನ ಮನೆಯವರು, ಸಂಬಂಧಿಕರೆಲ್ಲ ಸೇರಿ ಹುಡುಕಿದ್ರೂ ಹುಡುಗಿಯ ಮನೆ ಪತ್ತೆ ಮಾಡಲಾಗದೆ ಹೈರಾಣಾದ ಪ್ರಸಂಗ ಉತ್ತರ ಪ್ರದೇಶದಲ್ಲಿ ನಡೆದಿದೆ. ಮಾವೋ ಜಿಲ್ಲೆಯ ರಾಣಿಪುರ ಎಂಬಲ್ಲಿ ಘಟನೆ ನಡೆದಿದ್ದು, ಇಡೀ ರಾತ್ರಿ ಊರಲ್ಲಿ ಅಲೆದಾಡಿದ ಮಂದಿ ಬೆಳಗ್ಗಿನ ಹೊತ್ತಿಗೆ ತಮ್ಮೂರಿಗೆ ಮರಳಿದ್ದಾರೆ.
ವಿಷ್ಯ ಆಗಿದ್ದು ಏನಪ್ಪಾಂದ್ರೆ, ಹುಡುಗನ ಕಡೆಯವರಿಗೆ ಸಂಬಂಧ ಮಾಡಿದ್ದು ಒಬ್ಬ ಮಧ್ಯವರ್ತಿ ಮಹಿಳೆ. ಹುಡುಗನಿಗೆ ಈ ಹಿಂದೆ ಮದುವೆಯಾಗಿದ್ದು, ಪತ್ನಿಯನ್ನು ಬಿಟ್ಟಿದ್ದ. ಆತನ ಪತ್ನಿ ಒಬ್ಬಂಟಿಯಾಗಿ ಬಿಹಾರದ ಸಮಸ್ತಿಪುರದ ತನ್ನ ಮನೆಯಲ್ಲಿ ವಾಸ ಇದ್ದಾಳೆ. ಈ ನಡುವೆ, ಬೇರೆ ಮದುವೆಯಾಗಲು ಹುಡುಗ ಮತ್ತು ಆತನ ತಾಯಿ ರೆಡಿ ಮಾಡಿಕೊಂಡಿದ್ದಾರೆ. ಹೊಸ ಸಂಬಂಧದ ಬಗ್ಗೆ ಹೇಳಿಕೊಂಡು ಬಂದಿದ್ದ ಮಹಿಳೆಯೊಬ್ಬಳು ಹೊಟೇಲ್ ಒಂದರಲ್ಲಿ ಹುಡುಗ ಮತ್ತು ಆತನ ತಾಯಿ ಜೊತೆ ಮಾತುಕತೆ ನಡೆಸಿದ್ದಾಳೆ. ಆದರೆ, ಹುಡುಗನ ಕಡೆಯವರು ಹುಡುಗಿ ಮನೆಗೆ ಹೋಗಲಿಲ್ಲ. ನೀವು ದಿಬ್ಬಣ ತಗೊಂಡು ಬನ್ನಿ. ಅಲ್ಲಿ ಅರೇಂಜ್ ಮಾಡಿಸ್ತೀನಿ ಎಂದು 20 ಸಾವಿರ ಹಣವನ್ನೂ ಮಹಿಳೆ ಪಡೆದಿದ್ದಳು. ಹುಡುಗಿ ಮನೆಯವರಿಗೆ ಹಣ ಕೊಟ್ಟು ಅಲ್ಲಿ ವ್ಯವಸ್ಥೆ ಮಾಡಬೇಕು ಎಂದಿದ್ದಳು.

ಡಿ.10ರಂದು ಮದುವೆಗೆ ದಿನ ನಿಶ್ಚಯ ಆಗಿದ್ದು, ಹುಡುಗನ ಕಡೆಯವರು ಮುನ್ನಾದಿನ ಸಂಜೆಯೇ ಹೊರಟಿದ್ದಾರೆ. ಅಜಾಮ್ ಘರ್ ಜಿಲ್ಲೆಯ ಕೊತ್ವಾಲಿ ನಗರದ ಕಾನ್ಶೀರಾಮ್ ಕಾಲನಿಯಿಂದ ಹೊರಟಿದ್ದು ಸರಿಯಾದ ಸಮಯಕ್ಕೇ ತಲುಪಿದ್ದರು. ಆದರೆ, ಹುಡುಗಿ ಮನೆಯನ್ನು ಪತ್ತೆ ಮಾಡಲು ಸಾಧ್ಯವಾಗಲಿಲ್ಲ. ಸಂಬಂಧ ಕುದುರಿಸಿದ್ದ ಮಹಿಳೆಯೂ ನಾಪತ್ತೆಯಾಗಿದ್ದಳು. ರಾತ್ರಿಯಿಡೀ ರಾಣಿಪುರ ಗ್ರಾಮದಲ್ಲಿ ಹುಡುಕಾಡಿ, ಮರುದಿನ ಬೆಳಗ್ಗೆ ಹುಡುಗನ ಸಂಬಂಧಿಕರು ಪೆಚ್ಚು ಮೋರೆ ಹಾಕ್ಕೊಂಡು ಮರಳಿದ್ದಾರೆ.
ಮನೆಗೆ ಆಗಮಿಸಿ, ಸಂಬಂಧ ಕುದುರಿಸಿದ್ದ ಮಹಿಳೆಯ ವಿರುದ್ಧ ಕೊತ್ವಾಲಿ ನಗರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಮಧ್ಯ ಪ್ರವೇಶ ಮಾಡಿದ್ದು, ಮಹಿಳೆ ಮತ್ತು ಹುಡುಗನ ಕಡೆಯವರನ್ನು ಕರೆಸಿ ವಿಚಾರಣೆ ನಡೆಸುತ್ತಿದ್ದಾರೆ.
A wedding procession of a bridegroom that reached Ranipur in Mau district from Kanshi Ram Colony in Kotwali town of Uttar Pradesh's Azamgarh district, could not find the address of the bride
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm