ಬ್ರೇಕಿಂಗ್ ನ್ಯೂಸ್
17-03-25 09:43 pm HK News Desk ದೇಶ - ವಿದೇಶ
ನವದೆಹಲಿ, ಮಾ.17: ಜಮ್ಮು ಕಾಶ್ಮೀರದ ವೈಷ್ಣೋದೇವಿ ಮಂದಿರದ ಬಳಿಯ ತಪ್ಪಲಿನಲ್ಲಿ ಬಾಲಿವುಡ್ ನಟ- ನಟಿಯರು ಡ್ರಗ್ಸ್ ಪಾರ್ಟಿ ಮಾಡಿರುವ ಬಗ್ಗೆ ಜಮ್ಮು ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಬಾಲಿವುಡ್ಡಿನ ಫೇಮಸ್ ಇನ್ ಫ್ಲುವೆನ್ಸರ್, ಓರ್ರಿ ಎಂದೇ ಹೆಸರಾಗಿರುವ ಓರ್ಹಾನ್ ಅವಾತ್ರಮಣಿ ಸೇರಿ ಏಳು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಜಮ್ಮು ಪೊಲೀಸರು ನೆಲದ ಕಾನೂನು ರಕ್ಷಣೆ ಮತ್ತು ಧಾರ್ಮಿಕ ಭಾವನೆಗಳಿಗೆ ಅಗೌರವ ತೋರಿಸಿದರೆ ಸಹಿಸುವುದಿಲ್ಲ. ಪವಿತ್ರ ಜಾಗದಲ್ಲಿ ಡ್ರಗ್ಸ್, ಆಲ್ಕೋಹಾಲ್ ಸೇವನೆ ಮಾಡಿದರೆ ಕಠಿಣ ಕಾನೂನು ಖಚಿತ ಎಂಬ ಸಂದೇಶ ರವಾನಿಸಿದ್ದೇವೆ ಎಂದು ಹೇಳಿದ್ದಾರೆ.

ಕತ್ರಾ ಪೊಲೀಸ್ ಠಾಣೆಯಲ್ಲಿ ಮಾರ್ಚ್ 15ರಂದು ದೂರು ದಾಖಲಾಗಿದ್ದು, ಅದರ ಬೆನ್ನಲ್ಲೇ ನಾವು ಕ್ರಮ ಜರುಗಿಸಿದ್ದೇವೆ. ವೈಷ್ಣೋದೇವಿ ಯಾತ್ರೆ ಆರಂಭಗೊಳ್ಳುವ ಕತ್ರಾ ತಪ್ಪಲಿನ ಹೊಟೇಲಿನಲ್ಲಿ ಮದ್ಯ ಸೇವನೆ ಮಾಡಿದ್ದರು. ತಂಡದಲ್ಲಿ ಆರು ಮಂದಿ ಭಾರತೀಯರು ಮತ್ತು ಇನ್ನೊಬ್ಬ ರಷ್ಯನ್ ಪ್ರವಾಸಿಗ ಇದ್ದರು. ಓರ್ಹಾನ್ ಅವಾತ್ರಮಣಿ, ದರ್ಶನ್ ಸಿಂಗ್, ಪಾರ್ಥ್ ರೈನಾ, ರಿತಿಕ್ ಸಿಂಗ್, ರಾಶಿ ದತ್ತಾ, ರಕ್ಷಿತಾ ಭೋಗಾಲ್, ಶಗುನ್ ಕೋಹ್ಲಿ ಮತ್ತು ರಷ್ಯ ಮೂಲದ ಅನಾಸ್ತಸಿಲಾ ಅರ್ಜಾಮ್ ಸ್ಕಿನಾ ಅವರು ಮದ್ಯ-ಡ್ರಗ್ಸ್ ಸೇವನೆ, ನಾನ್ ವೆಜ್ ಬಳಕೆಗೆ ನಿಷೇಧ ಇದ್ದರೂ ಪಾರ್ಟಿ ಮಾಡಿದ್ದಾರೆ. ವೈಷ್ಣೋದೇವಿ ಯಾತ್ರಾ ಸ್ಥಳದಲ್ಲಿ ಇಂತಹ ಅಗೌರವ ನಾವು ಒಪ್ಪುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ರೀತಿಯ ವರ್ತನೆಯನ್ನು ಸಹಿಸುವುದಿಲ್ಲ ಎಂದು ಪ್ರವಾಸಿಗರಿಗೆ ಸಂದೇಶ ನೀಡುವುದಕ್ಕಾಗಿ ಕ್ರಮ ಜರುಗಿಸಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಓರಿ ಬಾಲಿವುಡ್ಡಿನ ಹೆಸರಾಂತ ಸೆಲೆಬ್ರಿಟಿಯಾಗಿದ್ದು, ಜೊತೆಗಿದ್ದವರು ಕೂಡ ನಟ- ನಟಿಯರಾಗಿದ್ದಾರೆ. ಬಾಲಿವುಡ್ ಮಂದಿ ಇದೇ ಜಾಗದಲ್ಲಿ ಪಾರ್ಟಿಗಳನ್ನು ಹಮ್ಮಿಕೊಳ್ಳುತ್ತಿದ್ದು, ಈ ಬಗ್ಗೆ ಕಠಿಣ ಸಂದೇಶ ರವಾನಿಸಲು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ.
Police said that alcohol and non-vegetarian diet is not allowed inside Cottage Suite as it is strictly prohibited at divine places like Mata Vaishno devi temple.
06-03-26 03:50 pm
HK News Staffer
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 04:08 pm
HK News Staffer
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm