ಬ್ರೇಕಿಂಗ್ ನ್ಯೂಸ್
17-03-25 10:57 pm HK News Desk ದೇಶ - ವಿದೇಶ
ಮುಂಬೈ, ಮಾ.17 : ಛತ್ರಪತಿ ಶಿವಾಜಿ ಮಹಾರಾಜ ಪುತ್ರ ಸಂಭಾಜಿ ಕುರಿತ 'ಛಾವಾ' ಚಿತ್ರ ಧೂಳೆಬ್ಬಿಸಿದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಶಿವಾಜಿ ಪರ ಕಿಚ್ಚು ಎದ್ದಿದೆ. ಶಿವಾಜಿ ಮಹಾರಾಜರ ಜನ್ಮ ದಿನಾಚರಣೆಯ ಸಂದರ್ಭದಲ್ಲೇ ಮೊಘಲ್ ರಾಜ ಔರಂಗಜೇಬನ ಸಮಾಧಿಯನ್ನು ಕೆಡವಬೇಕೆಂದು ಒತ್ತಾಯಿಸಿ ಹಿಂದೂಪರ ಸಂಘಟನೆಗಳು ಅಭಿಯಾನ ಆರಂಭಿಸಿವೆ.
ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ನೇತೃತ್ವದ ಸಂಘಟನೆಗಳು ಸಂಭಾಜಿ ನಗರದಲ್ಲಿ ಪ್ರಾಚ್ಯವಸ್ತು ಇಲಾಖೆ ವ್ಯಾಪ್ತಿಯಲ್ಲಿರುವ ಔರಂಗಜೇಬನ ಸಮಾಧಿಯನ್ನು ಕೆಡವಲು ಒತ್ತಾಯಿಸಿ ಬಾಬರಿ ಮಸೀದಿ ಮಾದರಿ ಆಂದೋಲನವನ್ನು ಪ್ರಾರಂಭಿಸಿವೆ. ಇದಕ್ಕೆ ಆಡಳಿತಾರೂಢ ಬಿಜೆಪಿ ನಾಯಕರಿಂದ ಬೆಂಬಲ ವ್ಯಕ್ತವಾಗಿದ್ದು ಮಹಾರಾಷ್ಟ್ರ ವಿಧಾನಸಭೆಯ ಅಧಿವೇಶನದಲ್ಲು ಪ್ರಸ್ತಾಪಗೊಂಡು ಭಾರಿ ಚರ್ಚೆಗೆ ಗ್ರಾಸವಾಗಿದೆ.
ಹಿಂದೂಪರ ಸಂಘಟನೆಗಳು ಔರಂಗಜೇಬ್ ಸಮಾಧಿಯನ್ನು ಸರ್ಕಾರವೇ ಕೆಡವಬೇಕೆಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಗಡುವು ನೀಡಿದ್ದಾರೆ. ಇದೇ ವೇಳೆ, ಹಿಂದೂ ಜನಜಾಗೃತಿ ಸಮಿತಿ ಸಮಾಧಿ ನಿರ್ವಹಣೆಗೆ ಹಣಕಾಸಿನ ನೆರವು ನಿಲ್ಲಿಸುವಂತೆ ಸರ್ಕಾರವನ್ನು ಆಗ್ರಹಿಸಿದೆ.
ಮಹಾರಾಷ್ಟ್ರ ಮತ್ತು ಗೋವಾ ವಿಭಾಗದ ವಿಎಚ್ಪಿ ಕಾರ್ಯದರ್ಶಿ ಗೋವಿಂದ್ ಶೆಂಡೆ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಆಂದೋಲನ ನಡೆಸಲಾಗುವುದು. ಹಂತ ಹಂತವಾಗಿ ಪ್ರತಿಭಟನೆ, ಪ್ರತಿಕೃತಿ ದಹನ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗುವುದು. ಅಂತಿಮವಾಗಿ ಚಲೋ ಸಂಭಾಜಿನಗರ್ ಮಾಡುತ್ತೇವೆ ಎಂದಿದ್ದಾರೆ.
ಗೃಹ ಖಾತೆಯನ್ನೂ ಹೊಂದಿರುವ ಸಿಎಂ ದೇವೇಂದ್ರ ಫಡ್ನವೀಸ್ ಪ್ರತಿಕ್ರಿಯಿಸಿ, 'ಔರಂಗಜೇಬನ ಸಮಾಧಿ ಪುರಾತತ್ವ ಇಲಾಖೆಯ ರಕ್ಷಣೆಯಲ್ಲಿದ್ದು ಅದನ್ನು ರಕ್ಷಿಸುವುದು ರಾಜ್ಯ ಸರ್ಕಾರದ ಕರ್ತವ್ಯ. ಆದಾರೂ ಔರಂಗಜೇಬನ ವೈಭವೀಕರಣ ಸಹಿಸುವುದಿಲ್ಲ" ಎಂದು ಹೇಳಿದ್ದಾರೆ.
ಔರಂಗಜೇಬನ ಸಮಾಧಿ ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರದೊಳಗಿನ ಖುಲ್ದಾಬಾದ್ ಎಂಬಲ್ಲಿದೆ. ಇದನ್ನು ಹಿಂದೆ ಔರಂಗಾಬಾದ್ ಎಂದು ಕರೆಯುತ್ತಿದ್ದರು. ಈಗ ಔರಂಗಜೇಬನ ಕ್ರೌರ್ಯದ ಕುರಿತ ಚಿತ್ರ ಛಾವಾ ಬರುವುದರೊಂದಿಗೆ ಮಹಾರಾಷ್ಟ್ರದಲ್ಲಿ ಆ ರಾಜನ ವಿರೋಧಿ ಕಿಚ್ಚು ಜೋರಾಗಿದೆ.
Amid growing calls for the demolition of Mughal emperor Aurangzeb's grave, security has been tightened at the tomb in Khultabad, Chhatrapati Sambhajinagar, Maharashtra. Police have installed barricades and surveillance to prevent unrest in the area.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm