ಬ್ರೇಕಿಂಗ್ ನ್ಯೂಸ್
20-03-25 06:07 pm HK News Desk ದೇಶ - ವಿದೇಶ
ಮುಂಬೈ, ಮಾ.20 : ಬಹು ನಿರೀಕ್ಷೆಯ ಕೊಂಕಣ ರೈಲ್ವೇಯನ್ನು ಭಾರತೀಯ ರೈಲ್ವೇಯೊಂದಿಗೆ ವಿಲೀನಗೊಳಿಸಲು ಮಹಾರಾಷ್ಟ್ರ ಸರಕಾರ ಒಪ್ಪಿಗೆ ನೀಡಿದೆ. ಈ ಬಗ್ಗೆ ಮಹಾ ಸಿಎಂ ದೇವೇಂದ್ರ ಫಡ್ನವಿಸ್, ವಿಧಾನ ಪರಿಷತ್ತಿನಲ್ಲಿ ಹೇಳಿಕೆ ನೀಡಿದ್ದಾರೆ. ಇದರಿಂದ ಕೊಂಕಣ ರೈಲ್ವೇಯ ಹಣಕಾಸು ಸ್ಥಿತಿಯನ್ನು ಉತ್ತಮ ಪಡಿಸಲು ಸಾಧ್ಯವಿದೆ ಎಂದು ಫಡ್ನವಿಸ್ ಹೇಳಿದ್ದಾರೆ.
ಪ್ರಸಕ್ತ ಕೊಂಕಣ ರೈಲ್ವೇಯು ಭಾರತೀಯ ರೈಲ್ವೇ ಅಧೀನದಲ್ಲಿದ್ದರೂ, ಇತರೇ ಸಾರ್ವಜನಿಕ ರಂಗದ ಕಂಪನಿಗಳಿದ್ದ ರೀತಿ ಪ್ರತ್ಯೇಕ ಸಂಸ್ಥೆಯಾಗಿದೆ. ಮಹಾರಾಷ್ಟ್ರ ಮೇಲ್ಮನೆಯಲ್ಲಿ ಬಿಜೆಪಿ ಶಾಸಕ ಪ್ರವೀಣ್ ದರೇಕರ್ ಕೇಳಿದ ಪ್ರಶ್ನೆಗೆ, ಸಿಎಂ ಫಡ್ನವಿಸ್ ಈ ಮಾಹಿತಿ ನೀಡಿದ್ದು ಮಹಾರಾಷ್ಟ್ರ ಸರಕಾರವು ಈ ಬಗ್ಗೆ ಕೇಂದ್ರ ಸರ್ಕಾರದ ಜೊತೆಗೆ ಸಂವಹನ ನಡೆಸಲಿದೆ ಎಂದು ಹೇಳಿದ್ದಾರೆ.
ಕೊಂಕಣ ರೈಲ್ವೇಯು ಆರ್ಥಿಕವಾಗಿ ಹೀನ ಸ್ಥಿತಿಯಲ್ಲಿರುವುದರಿಂದ ಡಬಲ್ ಟ್ರ್ಯಾಕ್ ಮಾಡುವುದಾಗಲೀ, ಭೂಕುಸಿತ ಅಪಾಯ
ಇರುವಲ್ಲಿ ತಡೆಗೋಡೆ ಕಟ್ಟುವ ವಿಷಯದಲ್ಲಾಗಲೀ ಮುಂದೆ ಹೋಗುತ್ತಿಲ್ಲ. ಈ ಭಾಗದ ರೈಲ್ವೇ ಅಭಿವೃದ್ಧಿ ಬಗ್ಗೆ ಕೇಂದ್ರ ಸರಕಾರದ ಜೊತೆಗೆ ಬಹಳಷ್ಟು ಬಾರಿ ಮಾತುಕತೆ ನಡೆಸಲಾಗಿತ್ತು. ಇದಕ್ಕೆಲ್ಲ ಭಾರತೀಯ ರೈಲ್ವೇ ಜೊತೆಗೆ ವಿಲೀನಗೊಳಿಸುವುದೇ ಉತ್ತರ ಎಂದು ರೈಲ್ವೇ ಸಚಿವರು ಹೇಳಿದ್ದರು ಎಂಬುದಾಗಿ ಸಿಎಂ ತಿಳಿಸಿದ್ದಾರೆ.
ಇದಲ್ಲದೆ, ಕೊಂಕಣ ರೈಲ್ವೇ ವಿಲೀನಕ್ಕೆ ಈಗಾಗಲೇ ಕೇರಳ, ಕರ್ನಾಟಕ, ಗೋವಾ ಸರಕಾರಗಳು ತಮ್ಮ ಒಪ್ಪಿಗೆ ಸೂಚಿಸಿದ್ದು, ಕೇಂದ್ರ ಸರಕಾರ ಕೂಡಲೇ ಈ ಕುರಿತಾಗಿ ಮುಂದಿನ ಪ್ರಕ್ರಿಯೆ ನಡೆಸಬೇಕು. ಆದರೆ ಈ ಭಾಗಕ್ಕೆ ಕೊಂಕಣ ರೈಲ್ವೇ ಎಂದೇ ಹೆಸರನ್ನು ಉಳಿಸಿಕೊಳ್ಳಬೇಕು ಎಂಬುದು ನಮ್ಮ ಬೇಡಿಕೆ. ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ನಮ್ಮ ಬೇಡಿಕೆಯನ್ನು ಒಪ್ಪಿದ್ದಾರೆ. ವಿಲೀನ ಪ್ರಕ್ರಿಯೆ ಬಳಿಕ ಈ ಭಾಗದಲ್ಲಿ ಡಬಲ್ ಟ್ರ್ಯಾಕ್ ಸೇರಿದಂತೆ ರೈಲ್ವೇ ಸ್ವೇಶನ್ ಆಧುನೀಕರಣ, ಅಪಘಾತ ತಡೆಗೆ ಹೊಸ ತಂತ್ರಜ್ಞಾನ ಅಳವಡಿಕೆ ಆಗಲಿದೆ ಎಂದು ಫಡ್ನವಿಸ್ ಹೇಳಿದ್ದಾರೆ.
The Maharashtra government will give its consent to the merger of Konkan Railway Corporation Ltd with the Indian Railways, Chief Minister Devendra Fadnavis announced in the legislative council.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm