ಬ್ರೇಕಿಂಗ್ ನ್ಯೂಸ್
20-03-25 06:07 pm HK News Desk ದೇಶ - ವಿದೇಶ
ಮುಂಬೈ, ಮಾ.20 : ಬಹು ನಿರೀಕ್ಷೆಯ ಕೊಂಕಣ ರೈಲ್ವೇಯನ್ನು ಭಾರತೀಯ ರೈಲ್ವೇಯೊಂದಿಗೆ ವಿಲೀನಗೊಳಿಸಲು ಮಹಾರಾಷ್ಟ್ರ ಸರಕಾರ ಒಪ್ಪಿಗೆ ನೀಡಿದೆ. ಈ ಬಗ್ಗೆ ಮಹಾ ಸಿಎಂ ದೇವೇಂದ್ರ ಫಡ್ನವಿಸ್, ವಿಧಾನ ಪರಿಷತ್ತಿನಲ್ಲಿ ಹೇಳಿಕೆ ನೀಡಿದ್ದಾರೆ. ಇದರಿಂದ ಕೊಂಕಣ ರೈಲ್ವೇಯ ಹಣಕಾಸು ಸ್ಥಿತಿಯನ್ನು ಉತ್ತಮ ಪಡಿಸಲು ಸಾಧ್ಯವಿದೆ ಎಂದು ಫಡ್ನವಿಸ್ ಹೇಳಿದ್ದಾರೆ.
ಪ್ರಸಕ್ತ ಕೊಂಕಣ ರೈಲ್ವೇಯು ಭಾರತೀಯ ರೈಲ್ವೇ ಅಧೀನದಲ್ಲಿದ್ದರೂ, ಇತರೇ ಸಾರ್ವಜನಿಕ ರಂಗದ ಕಂಪನಿಗಳಿದ್ದ ರೀತಿ ಪ್ರತ್ಯೇಕ ಸಂಸ್ಥೆಯಾಗಿದೆ. ಮಹಾರಾಷ್ಟ್ರ ಮೇಲ್ಮನೆಯಲ್ಲಿ ಬಿಜೆಪಿ ಶಾಸಕ ಪ್ರವೀಣ್ ದರೇಕರ್ ಕೇಳಿದ ಪ್ರಶ್ನೆಗೆ, ಸಿಎಂ ಫಡ್ನವಿಸ್ ಈ ಮಾಹಿತಿ ನೀಡಿದ್ದು ಮಹಾರಾಷ್ಟ್ರ ಸರಕಾರವು ಈ ಬಗ್ಗೆ ಕೇಂದ್ರ ಸರ್ಕಾರದ ಜೊತೆಗೆ ಸಂವಹನ ನಡೆಸಲಿದೆ ಎಂದು ಹೇಳಿದ್ದಾರೆ.
ಕೊಂಕಣ ರೈಲ್ವೇಯು ಆರ್ಥಿಕವಾಗಿ ಹೀನ ಸ್ಥಿತಿಯಲ್ಲಿರುವುದರಿಂದ ಡಬಲ್ ಟ್ರ್ಯಾಕ್ ಮಾಡುವುದಾಗಲೀ, ಭೂಕುಸಿತ ಅಪಾಯ
ಇರುವಲ್ಲಿ ತಡೆಗೋಡೆ ಕಟ್ಟುವ ವಿಷಯದಲ್ಲಾಗಲೀ ಮುಂದೆ ಹೋಗುತ್ತಿಲ್ಲ. ಈ ಭಾಗದ ರೈಲ್ವೇ ಅಭಿವೃದ್ಧಿ ಬಗ್ಗೆ ಕೇಂದ್ರ ಸರಕಾರದ ಜೊತೆಗೆ ಬಹಳಷ್ಟು ಬಾರಿ ಮಾತುಕತೆ ನಡೆಸಲಾಗಿತ್ತು. ಇದಕ್ಕೆಲ್ಲ ಭಾರತೀಯ ರೈಲ್ವೇ ಜೊತೆಗೆ ವಿಲೀನಗೊಳಿಸುವುದೇ ಉತ್ತರ ಎಂದು ರೈಲ್ವೇ ಸಚಿವರು ಹೇಳಿದ್ದರು ಎಂಬುದಾಗಿ ಸಿಎಂ ತಿಳಿಸಿದ್ದಾರೆ.
ಇದಲ್ಲದೆ, ಕೊಂಕಣ ರೈಲ್ವೇ ವಿಲೀನಕ್ಕೆ ಈಗಾಗಲೇ ಕೇರಳ, ಕರ್ನಾಟಕ, ಗೋವಾ ಸರಕಾರಗಳು ತಮ್ಮ ಒಪ್ಪಿಗೆ ಸೂಚಿಸಿದ್ದು, ಕೇಂದ್ರ ಸರಕಾರ ಕೂಡಲೇ ಈ ಕುರಿತಾಗಿ ಮುಂದಿನ ಪ್ರಕ್ರಿಯೆ ನಡೆಸಬೇಕು. ಆದರೆ ಈ ಭಾಗಕ್ಕೆ ಕೊಂಕಣ ರೈಲ್ವೇ ಎಂದೇ ಹೆಸರನ್ನು ಉಳಿಸಿಕೊಳ್ಳಬೇಕು ಎಂಬುದು ನಮ್ಮ ಬೇಡಿಕೆ. ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ನಮ್ಮ ಬೇಡಿಕೆಯನ್ನು ಒಪ್ಪಿದ್ದಾರೆ. ವಿಲೀನ ಪ್ರಕ್ರಿಯೆ ಬಳಿಕ ಈ ಭಾಗದಲ್ಲಿ ಡಬಲ್ ಟ್ರ್ಯಾಕ್ ಸೇರಿದಂತೆ ರೈಲ್ವೇ ಸ್ವೇಶನ್ ಆಧುನೀಕರಣ, ಅಪಘಾತ ತಡೆಗೆ ಹೊಸ ತಂತ್ರಜ್ಞಾನ ಅಳವಡಿಕೆ ಆಗಲಿದೆ ಎಂದು ಫಡ್ನವಿಸ್ ಹೇಳಿದ್ದಾರೆ.
The Maharashtra government will give its consent to the merger of Konkan Railway Corporation Ltd with the Indian Railways, Chief Minister Devendra Fadnavis announced in the legislative council.
06-03-26 03:50 pm
HK News Staffer
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 04:08 pm
HK News Staffer
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm