ಬ್ರೇಕಿಂಗ್ ನ್ಯೂಸ್
20-03-25 06:07 pm HK News Desk ದೇಶ - ವಿದೇಶ
ಮುಂಬೈ, ಮಾ.20 : ಬಹು ನಿರೀಕ್ಷೆಯ ಕೊಂಕಣ ರೈಲ್ವೇಯನ್ನು ಭಾರತೀಯ ರೈಲ್ವೇಯೊಂದಿಗೆ ವಿಲೀನಗೊಳಿಸಲು ಮಹಾರಾಷ್ಟ್ರ ಸರಕಾರ ಒಪ್ಪಿಗೆ ನೀಡಿದೆ. ಈ ಬಗ್ಗೆ ಮಹಾ ಸಿಎಂ ದೇವೇಂದ್ರ ಫಡ್ನವಿಸ್, ವಿಧಾನ ಪರಿಷತ್ತಿನಲ್ಲಿ ಹೇಳಿಕೆ ನೀಡಿದ್ದಾರೆ. ಇದರಿಂದ ಕೊಂಕಣ ರೈಲ್ವೇಯ ಹಣಕಾಸು ಸ್ಥಿತಿಯನ್ನು ಉತ್ತಮ ಪಡಿಸಲು ಸಾಧ್ಯವಿದೆ ಎಂದು ಫಡ್ನವಿಸ್ ಹೇಳಿದ್ದಾರೆ.
ಪ್ರಸಕ್ತ ಕೊಂಕಣ ರೈಲ್ವೇಯು ಭಾರತೀಯ ರೈಲ್ವೇ ಅಧೀನದಲ್ಲಿದ್ದರೂ, ಇತರೇ ಸಾರ್ವಜನಿಕ ರಂಗದ ಕಂಪನಿಗಳಿದ್ದ ರೀತಿ ಪ್ರತ್ಯೇಕ ಸಂಸ್ಥೆಯಾಗಿದೆ. ಮಹಾರಾಷ್ಟ್ರ ಮೇಲ್ಮನೆಯಲ್ಲಿ ಬಿಜೆಪಿ ಶಾಸಕ ಪ್ರವೀಣ್ ದರೇಕರ್ ಕೇಳಿದ ಪ್ರಶ್ನೆಗೆ, ಸಿಎಂ ಫಡ್ನವಿಸ್ ಈ ಮಾಹಿತಿ ನೀಡಿದ್ದು ಮಹಾರಾಷ್ಟ್ರ ಸರಕಾರವು ಈ ಬಗ್ಗೆ ಕೇಂದ್ರ ಸರ್ಕಾರದ ಜೊತೆಗೆ ಸಂವಹನ ನಡೆಸಲಿದೆ ಎಂದು ಹೇಳಿದ್ದಾರೆ.
ಕೊಂಕಣ ರೈಲ್ವೇಯು ಆರ್ಥಿಕವಾಗಿ ಹೀನ ಸ್ಥಿತಿಯಲ್ಲಿರುವುದರಿಂದ ಡಬಲ್ ಟ್ರ್ಯಾಕ್ ಮಾಡುವುದಾಗಲೀ, ಭೂಕುಸಿತ ಅಪಾಯ
ಇರುವಲ್ಲಿ ತಡೆಗೋಡೆ ಕಟ್ಟುವ ವಿಷಯದಲ್ಲಾಗಲೀ ಮುಂದೆ ಹೋಗುತ್ತಿಲ್ಲ. ಈ ಭಾಗದ ರೈಲ್ವೇ ಅಭಿವೃದ್ಧಿ ಬಗ್ಗೆ ಕೇಂದ್ರ ಸರಕಾರದ ಜೊತೆಗೆ ಬಹಳಷ್ಟು ಬಾರಿ ಮಾತುಕತೆ ನಡೆಸಲಾಗಿತ್ತು. ಇದಕ್ಕೆಲ್ಲ ಭಾರತೀಯ ರೈಲ್ವೇ ಜೊತೆಗೆ ವಿಲೀನಗೊಳಿಸುವುದೇ ಉತ್ತರ ಎಂದು ರೈಲ್ವೇ ಸಚಿವರು ಹೇಳಿದ್ದರು ಎಂಬುದಾಗಿ ಸಿಎಂ ತಿಳಿಸಿದ್ದಾರೆ.
ಇದಲ್ಲದೆ, ಕೊಂಕಣ ರೈಲ್ವೇ ವಿಲೀನಕ್ಕೆ ಈಗಾಗಲೇ ಕೇರಳ, ಕರ್ನಾಟಕ, ಗೋವಾ ಸರಕಾರಗಳು ತಮ್ಮ ಒಪ್ಪಿಗೆ ಸೂಚಿಸಿದ್ದು, ಕೇಂದ್ರ ಸರಕಾರ ಕೂಡಲೇ ಈ ಕುರಿತಾಗಿ ಮುಂದಿನ ಪ್ರಕ್ರಿಯೆ ನಡೆಸಬೇಕು. ಆದರೆ ಈ ಭಾಗಕ್ಕೆ ಕೊಂಕಣ ರೈಲ್ವೇ ಎಂದೇ ಹೆಸರನ್ನು ಉಳಿಸಿಕೊಳ್ಳಬೇಕು ಎಂಬುದು ನಮ್ಮ ಬೇಡಿಕೆ. ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ನಮ್ಮ ಬೇಡಿಕೆಯನ್ನು ಒಪ್ಪಿದ್ದಾರೆ. ವಿಲೀನ ಪ್ರಕ್ರಿಯೆ ಬಳಿಕ ಈ ಭಾಗದಲ್ಲಿ ಡಬಲ್ ಟ್ರ್ಯಾಕ್ ಸೇರಿದಂತೆ ರೈಲ್ವೇ ಸ್ವೇಶನ್ ಆಧುನೀಕರಣ, ಅಪಘಾತ ತಡೆಗೆ ಹೊಸ ತಂತ್ರಜ್ಞಾನ ಅಳವಡಿಕೆ ಆಗಲಿದೆ ಎಂದು ಫಡ್ನವಿಸ್ ಹೇಳಿದ್ದಾರೆ.
The Maharashtra government will give its consent to the merger of Konkan Railway Corporation Ltd with the Indian Railways, Chief Minister Devendra Fadnavis announced in the legislative council.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am