ಬ್ರೇಕಿಂಗ್ ನ್ಯೂಸ್
23-03-25 02:40 pm HK News Desk ದೇಶ - ವಿದೇಶ
ನವದೆಹಲಿ, ಮಾ.23: ದೆಹಲಿ ಹೈಕೋರ್ಟ್ ಜಡ್ಜ್ ಯಶವಂತ್ ವರ್ಮಾ ಮನೆಯಲ್ಲಿ ಅಪಾರ ಪ್ರಮಾಣದ ನಗದು ಹಣ ಸುಟ್ಟು ಹೋಗಿರುವುದು ಪತ್ತೆಯಾಗಿದೆ. ಆದರೂ 15 ಕೋಟಿಗೂ ಹೆಚ್ಚು ನಗದು ಹಣ ಸಿಕ್ಕಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಸುಪ್ರೀಂ ಕೋರ್ಟ್ ಗೆ 25 ಪುಟಗಳ ವರದಿ ಸಲ್ಲಿಸಿದ್ದಾರೆ.
ಅಲ್ಲದೆ, ಮನೆಯಲ್ಲಿ ಪತ್ತೆಯಾದ ಹಣದ ಬಗ್ಗೆ ವಿಸ್ತೃತ ತನಿಖೆ ನಡೆಸುವ ಅಗತ್ಯವಿದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ. ದೆಹಲಿ ಹೈಕೋರ್ಟ್ ಸಿಜೆ ನೀಡಿರುವ ತನಿಖಾ ವರದಿಯನ್ನು ಸುಪ್ರೀಂ ಕೋರ್ಟ್ ಶನಿವಾರ ತಡರಾತ್ರಿ ತನ್ನ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದೆ.
ಆದರೆ ಈ ವರದಿಯಲ್ಲಿರುವ ತಮ್ಮ ವಿರುದ್ಧದ ಎಲ್ಲ ಆರೋಪಗಳನ್ನು ಆರೋಪಿತ ಜಡ್ಜ್ ಯಶವಂತ್ ವರ್ಮಾ ನಿರಾಕರಿಸಿದ್ದಾರೆ. ಬೆಂಕಿ ಹೊತ್ತಿಕೊಂಡ ಮತ್ತು ನಗದು ಪತ್ತೆಯಾಗಿದೆ ಎಂದು ಹೇಳಲಾದ ಕೊಠಡಿ ಔಟ್ಹೌಸ್ ಆಗಿತ್ತು, ನ್ಯಾಯಾಧೀಶರು ಮತ್ತು ಕುಟುಂಬ ವಾಸಿಸುವ ಮುಖ್ಯ ಕಟ್ಟಡವಲ್ಲ ಎಂದವರು ಹೇಳಿಕೊಂಡಿದ್ದಾರೆ.
ನಾನು ಅಥವಾ ನನ್ನ ಕುಟುಂಬದ ಯಾವುದೇ ಸದಸ್ಯರು ಆ ಸ್ಟೋರ್ ರೂಂನಲ್ಲಿ ಯಾವುದೇ ಹಣವನ್ನು ಇಟ್ಟಿಲ್ಲ. ಆಪಾದಿತ ನಗದು ನಮಗೆ ಸೇರಿದೆ ಎಂಬ ವಿಷಯವನ್ನು ಖಂಡಿಸುತ್ತೇನೆ. ಈ ಹಣವನ್ನು ನಾವು ಇಟ್ಟುಕೊಂಡಿದ್ದೇವೆ ಎಂಬ ಕಲ್ಪನೆಯೇ ಸಂಪೂರ್ಣ ಅಸಂಬದ್ಧ. ಕ್ವಾರ್ಟರ್ಸ್ ಬಳಿ ಅಥವಾ ಔಟ್ಹೌಸ್ ಗೆ ಯಾರಾದರೂ ಮುಕ್ತವಾಗಿ ಪ್ರವೇಶಿಸಬಹುದಾಗಿದೆ. ಪತ್ರಿಕೆಗಳು ಹಾಗೂ ಮಾಧ್ಯಮಗಳು ದೋಷಾರೋಪಣೆ ಮಾಡುವ ಮುನ್ನ ಸ್ವಲ್ಪ ವಿಚಾರಣೆ ನಡೆಸಬೇಕು ಎಂದು ನ್ಯಾಯಮೂರ್ತಿ ವರ್ಮಾ ತಮ್ಮ ಉತ್ತರದಲ್ಲಿ ತಿಳಿಸಿದ್ದಾರೆ.
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಗೆ ಸೇರಿರುವ ಮನೆಯಲ್ಲಿ ಪತ್ತೆಯಾದ ಸುಟ್ಟ ಕರೆನ್ಸಿ ನೋಟುಗಳು ಮತ್ತು ಇತರರ ದಾಖಲೆಯ ಚಿತ್ರಗಳು ಮತ್ತು ವೀಡಿಯೊಗಳನ್ನು ಸಹ ತನಿಖಾ ವರದಿಯ ಜೊತೆಗೆ ಸಲ್ಲಿಸಲಾಗಿದೆ. ಆದರೆ ಆರೋಪಿತ ನ್ಯಾಯಾಧೀಶ, ನನ್ನ ವಿರುದ್ಧ ಹೊರಿಸಲಾದ ಆಧಾರರಹಿತ ಆರೋಪಗಳು ಮತ್ತು ಪತ್ತೆಯಾದ ನಗದು ನನಗೆ ಸೇರಿದ್ದು ಎಂಬುದು ಕೇವಲ ಊಹಾಪೋಹ ಅಷ್ಟೇ ಎಂದು ಹೇಳಿ ಆರೋಪದಿಂದ ಮುಕ್ತರಾಗಲು ಯತ್ನಿಸಿದ್ದಾರೆ.
Delhi High Court judge Yashwant Varma has strongly denounced the allegations in the currency recovery row at his official residence here and said no cash was ever placed in the storeroom either by him or any of my family members.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am