ಬ್ರೇಕಿಂಗ್ ನ್ಯೂಸ್
27-03-25 04:07 pm HK News Desk ದೇಶ - ವಿದೇಶ
ನವದೆಹಲಿ, ಮಾ.27 : ಶೀಘ್ರದಲ್ಲಿಯೇ ದೇಶದಲ್ಲಿ ಸಹಕಾರಿ ವ್ಯವಸ್ಥೆಯಡಿ ಟ್ಯಾಕ್ಸಿ ಸೇವೆ ಆರಂಭಿಸಲಾಗುವುದು ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಘೋಷಣೆ ಮಾಡಿದ್ದಾರೆ. ಓಲಾ, ಊಬರ್ ರೀತಿಯಲ್ಲೇ ಈ ಸೇವೆ ಕೆಲಸ ಮಾಡಲಿದ್ದು ಇದರ ಬೆನಿಫಿಟ್ ನೇರವಾಗಿ ಚಾಲಕರಿಗೆ ಸಿಗಲಿದೆ ಎಂದು ತಿಳಿಸಿದ್ದಾರೆ.
ಇದಲ್ಲದೆ, ಮುಂದಿನ ದಿನಗಳಲ್ಲಿ ಟ್ಯಾಕ್ಸಿ ಚಾಲಕರಿಗಾಗಿ ರಾಷ್ಟ್ರೀಯ ಮಟ್ಟದ ಸಹಕಾರಿ ಸಂಘಟನೆಯನ್ನು ಸ್ಥಾಪಿಸಲಾಗುವುದು ಎಂದು ಅಮಿತ್ ಷಾ ತಿಳಿಸಿದ್ದಾರೆ. ಓಲಾ ಮತ್ತು ಉಬರ್ ನಂತಹ ಪ್ಲಾಟ್ಫಾರ್ಮ್ ಮಾದರಿಯನ್ನು ಅನುಸರಿಸಿ ಚಾಲಕರಿಗೆ ಉದ್ಯೋಗ ಭದ್ರತೆ, ನ್ಯಾಯಯುತ ವೇತನ ಮತ್ತು ರಚನಾತ್ಮಕ ಪ್ರಯೋಜನಗಳನ್ನು ಒದಗಿಸುವ ಗುರಿಯನ್ನು ಈ ಉಪಕ್ರಮ ಹೊಂದಿದೆ.
ಸಹಕಾರದಿಂದ ಸಮೃದ್ದಿ ಎಂದು ಪ್ರಧಾನಿ ಹೇಳಿರುವುದು ಬರೀ ಘೋಷಣೆಯಲ್ಲ. ಮುಂದಿನ ದಿನಗಳಲ್ಲಿ ಓಲಾ, ಉಬರ್ ರೀತಿಯಲ್ಲಿ ಸಹಕಾರಿ ಟ್ಯಾಕ್ಸಿ ಸೇವೆಯೂ ಆರಂಭವಾಗಲಿದೆ. ಇದರಲ್ಲಿ ದ್ವಿಚಕ್ರ ವಾಹನವನ್ನೂ ಅದರಲ್ಲಿ ಟ್ಯಾಕ್ಸಿಯಾಗಿ ರಿಜಿಷ್ಟ್ರೇಷನ್ ಮಾಡಿಕೊಳ್ಳಬಹುದು. ರಿಕ್ಷಾ, ಕಾರಿನಂತಹ ವಾಹನಗಳನ್ನು ಅದರಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಇದರ ಯಾವುದೇ ಲಾಭಗಳು ಮೂರನೇ ವ್ಯಕ್ತಿಯ ಪಾಲಾಗೋದಿಲ್ಲ. ಅದು ನೇರವಾಗಿ ಚಾಲಕನಿಗೆ ಸೇರಲಿದೆ. ಅದರೊಂದಿಗೆ ಸಹಕಾರಿ ವಿಮೆ ಕೂಡ ಶೀಘ್ರದಲ್ಲಿ ಬರಲಿದೆ ಎಂದು ಸಂಸತ್ತಿನಲ್ಲಿ ಗೃಹ ಸಚಿವರು ತಿಳಿಸಿದ್ದಾರೆ.
ಸಹಕಾರಿ ಚೌಕಟ್ಟನ್ನು ಬಳಸಿಕೊಳ್ಳುವ ಮೂಲಕ, ಈ ಸಂಸ್ಥೆಯು ಭಾರತದಾದ್ಯಂತ ಚಾಲಕರಿಗೆ ಹೆಚ್ಚಿನ ಆರ್ಥಿಕ ಸ್ಥಿರತೆ ಖಚಿತಪಡಿಸಲಿದೆ. ಸಹಕಾರಿ ವಲಯವನ್ನು ವಿವಿಧ ಅಗತ್ಯ ಸೇವೆಗಳಾಗಿ ವಿಸ್ತರಿಸುವ ಸರ್ಕಾರದ ಬದ್ಧತೆಯನ್ನು ಅಮಿತ್ ಶಾ ಒತ್ತಿ ಹೇಳಿದರು. ಇದರಲ್ಲಿ ಪೆಟ್ರೋಲ್ ಪಂಪ್ಗಳು, ಅನಿಲ ವಿತರಣೆ, ಪಡಿತರ ಅಂಗಡಿಗಳು, ಔಷಧ ಅಂಗಡಿಗಳು, ಗೋದಾಮುಗಳು, ನೀರಿನ ನಿರ್ವಹಣೆ, ಬೀಜ ಉತ್ಪಾದನೆ ಮತ್ತು ಸಾವಯವ ಕೃಷಿಯೂ ಸೇರಿರುತ್ತವೆ.
Union Home Minister Amit Shah announced in Parliament that the government is set to introduce 'Sahkar Taxi', a cooperative-based ride-hailing service designed to benefit drivers directly. The initiative, modelled after app-based services like Ola and Uber, will allow cooperative societies to register two-wheelers, taxis, rickshaws, and four-wheelers without intermediaries taking a cut from drivers' earnings.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm