ಬ್ರೇಕಿಂಗ್ ನ್ಯೂಸ್
04-04-25 09:29 pm HK News Desk ದೇಶ - ವಿದೇಶ
ಚೆನ್ನೈ, ಎ.4 : ನಿರೀಕ್ಷೆಯಂತೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆ. ಅಣ್ಣಾಮಲೈ ಕೆಳಗಿಳಿಯಲು ನಿರ್ಧರಿಸಿದ್ದಾರೆ. ಅಣ್ಣಾಮಲೈ ಅವರ ಅವಧಿ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ ಹೊಸ ನಾಯಕನನ್ನು ಆಯ್ಕೆ ಮಾಡಲಾಗುವುದು ಮತ್ತು ನಾನು ಆ ಹುದ್ದೆಯ ರೇಸಿನಲ್ಲಿ ಇಲ್ಲ ಎಂದು ಸ್ವತಃ ಸ್ಪಷ್ಟನೆ ನೀಡಿದ್ದಾರೆ.
ಕೊಯಮತ್ತೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅಣ್ಣಾಮಲೈ, ತಮಿಳುನಾಡು ಬಿಜೆಪಿಯಲ್ಲಿ ಯಾವುದೇ ಸ್ಪರ್ಧೆ ಇಲ್ಲ. ನಾವು ಸರ್ವಾನುಮತದಿಂದ ನಾಯಕನನ್ನು ಆಯ್ಕೆ ಮಾಡುತ್ತೇವೆ. ರಾಜ್ಯ ಬಿಜೆಪಿ ನಾಯಕತ್ವದ ರೇಸ್ನಲ್ಲಿ ನಾನಿಲ್ಲ ಎಂದು ಹೇಳುವ ಮೂಲಕ ರಾಜ್ಯಾಧ್ಯಕ್ಷ ಸ್ಥಾನ ತ್ಯಜಿಸುವ ಸುಳಿವು ನೀಡಿದ್ದಾರೆ.
ಎಐಎಡಿಎಂಕೆ ಷರತ್ತಿಗೆ ಒಪ್ಪಿಗೆ
ಅಣ್ಣಾಮಲೈ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಎಐಎಡಿಎಂಕೆ ನಾಯಕರು ಬಿಜೆಪಿ ಹೈಕಮಾಂಡಿಗೆ ಷರತ್ತು ವಿಧಿಸಿದ್ದೇ ಕಾರಣವೆಂದು ಹೇಳಲಾಗುತ್ತಿದೆ. 2026ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿ ಆಗಬೇಕಿದ್ದರೆ ಅಣ್ಣಾಮಲೈ ಆ ಸ್ಥಾನದಲ್ಲಿ ಇರಬಾರದು ಎಂದು ಇತ್ತೀಚೆಗೆ, ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಷರತ್ತು ಹಾಕಿದ್ದಾರೆ ಎನ್ನುವ ಮಾತು ಕೇಳಿಬಂದಿದೆ.
2021ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿಕೂಟದಲ್ಲಿ ಸ್ಪರ್ಧಿಸಿದ್ದರಿಂದ ಬಿಜೆಪಿ ನಾಲ್ಕು ಸ್ಥಾನಗಳನ್ನು ಪಡೆದಿತ್ತು. ಆದರೆ, 2024ರ ಲೋಕಸಭಾ ಚುನಾವಣೆ ವೇಳೆಗೆ, ಅಣ್ಣಾಮಲೈ ತಮ್ಮ ಪಕ್ಷದ ನಾಯಕರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಎಐಎಡಿಎಂಕೆ ಮೈತ್ರಿಯನ್ನು ಮುರಿದಿತ್ತು. ಚುನಾವಣೆಯಲ್ಲಿ ಬಿಜೆಪಿ ಪೈಪೋಟಿ ನೀಡಿದರೂ ಒಂದು ಸ್ಥಾನವನ್ನು ಗೆಲ್ಲಲೂ ಸಾಧ್ಯವಾಗಿರಲಿಲ್ಲ. ಇತ್ತ ಎಐಎಡಿಎಂಕೆಯೂ ಏಕಾಂಗಿ ಸ್ಪರ್ಧೆಯಿಂದ ವೈಫಲ್ಯವನ್ನೇ ಕಂಡಿತ್ತು.
ಇದೀಗ ಮತ್ತೆ ಮೈತ್ರಿ ಮಾತುಕತೆ ನಡೆದಿದ್ದು ತಮಿಳುನಾಡಿನಲ್ಲಿ ಜನಪ್ರಿಯತೆ ಪಡೆಯುತ್ತಿರುವ ಅಣ್ಣಾಮಲೈ ಹೊರಗಿಡಲು ಎಐಎಡಿಎಂಕೆ ನಾಯಕರು ಒಳ ಸಂಚು ಹೂಡಿದ್ದಾರೆ. ಅಲ್ಪ ಸಮಯದಲ್ಲಿ ಅಣ್ಣಾಮಲೈ ಜನಪ್ರಿಯರಾಗಿದ್ದು ಮತ್ತು ಅವರ ಬಿರುಸಿನ ವೇಗಕ್ಕೆ ಜನಬೆಂಬಲವೂ ಸಿಗುತ್ತಿದೆ. ಆದರೆ ಬಿಜೆಪಿಗೂ ಮೈತ್ರಿ ಅನಿವಾರ್ಯ ಆಗಿರುವುದರಿಂದ ಅಣ್ಣಾಮಲೈ ಅವಧಿಯೂ ಮುಗಿದಿರುವುದರಿಂದ ಎರಡನೇ ಬಾರಿಗೆ ಮುಂದುವರಿಸದಿರಲು ನಿರ್ಧರಿಸಿದೆ.
ಪಳನಿಸ್ವಾಮಿ ಮತ್ತು ಅಣ್ಣಾಮಲೈ ಇಬ್ಬರೂ ಗೌಂಡರ್ ಜಾತಿಗೆ ಸೇರಿದವರಾಗಿದ್ದು ಅಣ್ಣಾಮಲೈ ಪೈಪೋಟಿ ತನ್ನ ಸ್ಥಾನಕ್ಕೆ ಕುಂದು ತರಬಹುದು ಎಂಬ ಲೆಕ್ಕಾಚಾರದಲ್ಲಿ ಪಳನಿಸ್ವಾಮಿ ಇದ್ದಾರೆ. ಇವರಿಬ್ಬರೂ ಪಶ್ಚಿಮ ತಮಿಳುನಾಡಿನ ಒಂದೇ ಪ್ರದೇಶದವರು. ಅಣ್ಣಾಮಲೈ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸುವುದಕ್ಕ ಇದೂ ಒಂದು ಕಾರಣ ಆಗಿರಬಹುದು. ಇದಲ್ಲದೆ, ಇಬ್ಬರೂ ಒಂದೇ ಜಾತಿಯವರು ಮುನ್ನೆಲೆಯಲ್ಲಿ ಬೇಡ. ಬೇರೆ ಜಾತಿಯ ನಾಯಕನನ್ನು ಬಿಜೆಪಿಗೆ ನೇಮಿಸುವುದರಿಂದ ಚುನಾವಣೆಯಲ್ಲಿ ಅನುಕೂಲ ಆಗಬಹುದು ಎಂಬ ಲೆಕ್ಕವನ್ನೂ ಬಿಜೆಪಿ ಮುಂದಿಡಲಾಗಿದೆ. ಪ್ರಸ್ತುತ, ಬಿಜೆಪಿ ಅಧ್ಯಕ್ಷ ಹುದ್ದೆಗೆ ತೇವರ್ ಜನಾಂಗದ ನಾಗೇಂದ್ರನ್ ನಾಯನಾರ್ , ದಲಿತ ನಾಯಕ ಮತ್ತು ಕೇಂದ್ರ ಸಚಿವ ಎಲ್. ಮುರುಗನ್ ಮತ್ತು ನಾದರ್ ಜಾತಿಯ ತಮಿಳಿಸೈ ಸೌಂದರರಾಜನ್ ಸೇರಿದಂತೆ ಹಲವರ ಹೆಸರು ಕೇಳಿಬರುತ್ತಿವೆ.
Tamil Nadu BJP President K Annamalai has said that he is not in the race to be the next state chief of the party. He said that there is no scope for a contest or competition in the party and the next president would be elected unanimously.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm