ಬ್ರೇಕಿಂಗ್ ನ್ಯೂಸ್
09-04-25 04:07 pm HK News Desk ದೇಶ - ವಿದೇಶ
ಮುಂಬೈ, ಎ.9 : 2008ರ 26-11ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್, ಅಮೆರಿಕದಲ್ಲಿ ಅಡಗಿರುವ ತಹಾವ್ವುರ್ ರಾಣಾನನ್ನು ವಶಕ್ಕೆ ಪಡೆಯಲು ಎನ್ಐಎ ಅಧಿಕಾರಿಗಳು ಅಮೆರಿಕ ತಲುಪಿದ್ದಾರೆ. ತಿಂಗಳ ಹಿಂದೆ ಅಮೆರಿಕಕ್ಕೆ ಪ್ರಧಾನಿ ಮೋದಿ ಹೋಗಿದ್ದ ಸಂದರ್ಭದಲ್ಲಿ ರಾಣಾನನ್ನು ಗಡೀಪಾರು ಮಾಡುವಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಮನವಿ ಮಾಡಿದ್ದರು.
ಇದರ ಬೆನ್ನಲ್ಲೇ ಜನವರಿ 21ರಂದು ಯುಎಸ್ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದ ರಾಣಾ ತನ್ನನ್ನು ಗಡೀಪಾರು ಮಾಡದಂತೆ ತಡೆ ನೀಡಲು ಮನವಿ ಮಾಡಿದ್ದ. ಆದರೆ ಕೋರ್ಟ್ ಆತನ ಮನವಿಯನ್ನು ನಿರಾಕರಿಸಿ ಅರ್ಜಿ ವಜಾಗೊಳಿಸಿತ್ತು. ಎನ್ಐಎ ಐಜಿಪಿ ಆಶಿಷ್ ಬಾತ್ರಾ ನೇತೃತ್ವದ ಮೂವರು ಅಧಿಕಾರಿಗಳ ತಂಡ ಅಮೆರಿಕ ತಲುಪಿದ್ದು, ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ನನ್ನು ಇನ್ನೆರಡು ದಿನದಲ್ಲಿ ವಶಕ್ಕೆ ಪಡೆಯಲಿದ್ದಾರೆ. ಅಮೆರಿಕ ನ್ಯಾಯಾಲಯದಿಂದ ಸರೆಂಡರ್ ವಾರೆಂಟ್ ಪಡೆದ ಬಳಿಕ ಭಾನುವಾರ ಹೊತ್ತಿಗೆ ಅಧಿಕಾರಿಗಳು ಭಾರತಕ್ಕೆ ಹಿಂತಿರುಗಲಿದ್ದಾರೆ ಎನ್ನಲಾಗುತ್ತಿದೆ.
ರಾಣಾನನ್ನು ನೇರವಾಗಿ ದೆಹಲಿಗೆ ಕರೆತಂದ ಬಳಿಕ 2008ರ ಮುಂಬೈ ದಾಳಿಯ ಸಂಚಿನ ಬಗ್ಗೆ ಎನ್ಐಎ ಪ್ರಧಾನ ಕಚೇರಿಯಲ್ಲಿ ಅಧಿಕಾರಿಗಳು ವಿಚಾರಣೆ ಮಾಡಲಿದ್ದಾರೆ. ಅಲ್ಲದೆ, ಆತನನ್ನು ಇರಿಸಿಕೊಳ್ಳಲು ತಿಹಾರ್ ಜೈಲಿನಲ್ಲಿ ವಿಶೇಷ ಸೆಲ್ ಮಾಡಲಾಗಿದ್ದು, ಅದಕ್ಕೆ ಭದ್ರತೆಯನ್ನೂ ಹೆಚ್ಚಿಸಲಾಗಿದೆ. ಸೆಲ್ ಒಳಗಡೆಯೇ ಬಾತ್ ರೂಮ್ ಸೌಲಭ್ಯ ಮತ್ತು ಸಿಸಿಟಿವಿಯೂ ಇರಲಿದ್ದು, 24 ಗಂಟೆ ಪ್ರತ್ಯೇಕ ಕಾವಲಿಗೆ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಮುಬೈ ದಾಳಿಯಲ್ಲಿ ವಿದೇಶಿ ಪ್ರಜೆಗಳು ಸೇರಿದಂತೆ 166 ಮಂದಿ ಮಡಿದಿದ್ದರು. ಭಾರತದ ವಾಣಿಜ್ಯ ರಾಜಧಾನಿಗೆ ನೇರವಾಗಿ ಹೊಡೆತ ಬಿದ್ದ ಘಟನೆಯಾಗಿತ್ತು.
ತಹಾವುರ್ ರಾಣಾ 64 ವಯಸ್ಸಿನ ವ್ಯಕ್ತಿಯಾಗಿದ್ದು, ಮೂಲತಃ ಪಾಕಿಸ್ತಾನ ಪ್ರಜೆ. ಸದ್ಯ ಆತನನ್ನು ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ ಮೆಟ್ರೋಪಾಲಿಟನ್ ಡಿಟೆನ್ಶನ್ ಸೆಂಟರ್ ನಲ್ಲಿ ಇರಿಸಲಾಗಿದೆ. ರಾಣಾ, ಪಾಕಿಸ್ತಾನಿ- ಅಮೆರಿಕನ್ ಲಷ್ಕರ್ ಇ- ತೈಬಾ ಉಗ್ರ ಡೇವಿಡ್ ಕೋಲ್ಮನ್ ಸಹಚರನಾಗಿದ್ದು, ಮುಂಬೈ ದಾಳಿಯನ್ನು ಇಬ್ಬರು ಸೇರಿ ಸಂಚು ನಡೆಸಿದ್ದರು. ಕಳೆದ ಜನವರಿಯಲ್ಲಿ ಅಮೆರಿಕದಲ್ಲಿ ಅಕ್ರಮ ವಲಸಿಗರನ್ನು ಗಡೀಪಾರು ಮಾಡುವ ಉದ್ದೇಶದಿಂದ ಅವರನ್ನು ವಶಕ್ಕೆ ಪಡೆದು ನಿಗಾ ಕೇಂದ್ರಕ್ಕೆ ಹಾಕಲಾಗಿತ್ತು. ಅದೇ ಸಂದರ್ಭದಲ್ಲಿ ಭಾರತದ ಗೃಹ ಸಚಿವಾಲಯ ಮತ್ತು ಎನ್ಐಎ ಅಧಿಕಾರಿಗಳು ರಾಣಾನನ್ನು ತಮ್ಮ ವಶಕ್ಕೆ ನೀಡುವಂತೆ ಕೋರಿಕೆ ಇಟ್ಟಿದ್ದರು.
Tahawwur Rana, an accused in the 2008 Mumbai terror attacks, is being brought to India in a special plane after he exhausted his legal options in the US, sources have said. The plane would need refuelling and is expected to touch down tonight or early tomorrow.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm