ಬ್ರೇಕಿಂಗ್ ನ್ಯೂಸ್
10-04-25 09:10 pm HK News Desk ದೇಶ - ವಿದೇಶ
ಹೈದರಾಬಾದ್, ಎ.10 : 2013ರಲ್ಲಿ ನಡೆದ ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಆರೋಪಿ ಯಾಸಿನ್ ಭಟ್ಕಳ್ ಸೇರಿ ಐವರು ಅಪರಾಧಿಗಳಿಗೆ ನೀಡಿದ್ದ ಮರಣದಂಡನೆ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಎತ್ತಿಹಿಡಿದಿದೆ. ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಐವರು ಭಯೋತ್ಪಾದಕರ ಮರಣದಂಡನೆ ಶಿಕ್ಷೆಯನ್ನು ಹೈಕೋರ್ಟ್ ಎತ್ತಿಹಿಡಿದಿದೆ.
2013ರಲ್ಲಿ ನಡೆದ ಹೈದರಾಬಾದ್ ಬಾಂಬ್ ಸ್ಫೋಟ ಘಟನೆಯಲ್ಲಿ 18 ಜನರು ಸಾವನ್ನಪ್ಪಿದ್ದು 131 ಜನರು ಗಾಯಗೊಂಡಿದ್ದರು. ಹೈಕೋರ್ಟ್ ನ್ಯಾಯಮೂರ್ತಿಗಳಾದ ಲಕ್ಷ್ಮಣ್ ಮತ್ತು ಪಿ. ಶ್ರೀಸುಧಾ ಅವರಿದ್ದ ಪೀಠವು, ಭಯೋತ್ಪಾದಕರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿ, ಎನ್ಐಎ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ.
ಇದಕ್ಕೂ ಹಿಂದೆ ಡಿಸೆಂಬರ್ 13, 2016 ರಂದು ಇಂಡಿಯನ್ ಮುಜಾಹಿದೀನ್ ಸಂಸ್ಥಾಪಕರಲ್ಲಿ ಒಬ್ಬನಾದ ಮೊಹಮ್ಮದ್ ಅಹ್ಮದ್ ಸಿದ್ದಿಬಾಪಾ ಅಲಿಯಾಸ್ ಯಾಸಿನ್ ಭಟ್ಕಳ್, ಪಾಕಿಸ್ತಾನಿ ಪ್ರಜೆ ಜಿಯಾ-ಉರ್-ರೆಹಮಾನ್ ಅಲಿಯಾಸ್ ವಕಾಸ್, ಅಸಾದುಲ್ಲಾ ಅಖ್ತರ್ ಅಲಿಯಾಸ್ ಮೊನ್ಜಾ ಹದ್ದಿ ಸೇರಿದಂತೆ ಐವರು ಉಗ್ರರನ್ನು ಎನ್ಐಎ ನ್ಯಾಯಾಲಯ ದೋಷಿ ಎಂದು ಘೋಷಿಸಿತ್ತು.
ಫೆಬ್ರವರಿ 21, 2013 ರಂದು ಹೈದರಾಬಾದ್ ನಗರದ ಜನದಟ್ಟಣೆ ಪ್ರದೇಶ ದಿಲ್ಸುಖ್ ನಗರದಲ್ಲಿ ಎರಡು ಬಾಂಬ್ ಸ್ಫೋಟಗಳು ಸಂಭವಿಸಿದ್ದವು. ಮೊದಲ ಸ್ಫೋಟ ಬಸ್ ನಿಲ್ದಾಣದಲ್ಲಿ ಮತ್ತು ಎರಡನೆಯದು ದಿಲ್ಸುಖ್ ನಗರದ ತಿನಿಸು ಮಳಿಗೆ (ಎ1 ಮಿರ್ಚಿ ಸೆಂಟರ್) ಬಳಿ ಸಂಭವಿಸಿತ್ತು. ಎನ್ಐಎ ವಿಶೇಷ ತನಿಖಾ ತಂಡ ತನಿಖೆ ನಡೆಸಿ ನಾಲ್ಕು ಸಾವಿರ ಪುಟಗಳ ದೋಷಾರೋಪ ವರದಿ ನೀಡಿತ್ತು. ಪ್ರಮುಖ ಆರೋಪಿ ರಿಯಾಜ್ ಭಟ್ಕಳ್ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿದ್ದಾನೆ.
On 8th April 2025, the Telangana High Court upheld the death sentences awarded to five convicts in the 2013 Dilsukhnagar twin bomb blasts case. The Division Bench comprising Justice K Lakshman and Justice P Sree Sudha dismissed the criminal appeal filed by the convicts, who are linked to the Pakistan-based terror outfit. Founder of the terror organisation Indian Mujahideen, Yasin Bhatkal, is one of the convicts sentenced to death.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm