ಬ್ರೇಕಿಂಗ್ ನ್ಯೂಸ್
22-04-25 07:13 pm HK News Desk ದೇಶ - ವಿದೇಶ
ನವದೆಹಲಿ, ಎ.22 : ವಿದೇಶಕ್ಕೆ ಹೋಗಿ ಭಾರತದ ಸಾಂವಿಧಾನಿಕ ಸಂಸ್ಥೆಗಳನ್ನು ಟೀಕಿಸುವ ನಡೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಮುಂದುವರಿಸಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿದ್ದು ಚುನಾವಣಾ ಆಯೋಗ ವ್ಯವಸ್ಥೆಯಲ್ಲಿ ರಾಜಿ ಮಾಡಿಕೊಂಡಿದೆ ಎಂದು ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಬೋಸ್ಟನ್ನಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿ, ‘ಮಹಾರಾಷ್ಟ್ರ ಚುನಾವಣೆಯಲ್ಲಿ ರಾಜ್ಯದೊಳಗಿನ ವಯಸ್ಕ ಮತದಾರರ ಸಂಖ್ಯೆಗಿಂತ ಹೆಚ್ಚು ಮತಗಳು ಚಲಾವಣೆಯಾಗಿದ್ದವು. ಚುನಾವಣಾ ಆಯೋಗ ನೀಡಿದ ಮಾಹಿತಿ ಪ್ರಕಾರ ಸಂಜೆ 5.30ರಿಂದ 7.30ರ ನಡುವಿನ ಕೇವಲ 2 ತಾಸಿನ ಅವಧಿಯಲ್ಲಿ 65 ಲಕ್ಷ ಮತಗಳು ಚಲಾವಣೆಯಾಗಿದ್ದವು. ಒಬ್ಬ ಮತದಾರನಿಗೆ ಮತ ಹಾಕಲು ಅಂದಾಜು 3 ನಿಮಿಷಗಳಾದರೂ ಬೇಕು. ಹೀಗೆ ಲೆಕ್ಕ ಹಾಕಿದರೆ, ಮರುದಿನ ನಸುಕಿನ 2 ಗಂಟೆಯವರೆಗೂ ಮತದಾನಕ್ಕೆ ಜನರು ಸರದಿಯಲ್ಲಿ ಇರಬೇಕಿತ್ತು. ಆದರೆ ಹಾಗಾಗಿಲ್ಲ. ಕೇವಲ 2 ತಾಸಿನಲ್ಲಿ 65 ಲಕ್ಷ ಜನ ಮತ ಚಲಾಯಿಸಿದ್ದಾರೆ ಎಂದು ಆಯೋಗ ಹೇಳಿದೆ’ ಎಂದರು.
ಹೀಗಾಗಿ ನಾವು ಸಂದೇಹ ಬಗೆಹರಿಸಿಕೊಳ್ಳಲು ಮತದಾನ ಪ್ರಕ್ರಿಯೆ ವಿಡಿಯೋ ಕೇಳಿದೆವು. ಆಯೋಗ ಅದನ್ನು ಕೊಡಲು ನಿರಾಕರಿಸಿದ್ದಲ್ಲದೆ, ಅದನ್ನು ಕೇಳಲು ಅವಕಾಶವೇ ಇರದಂತೆ ಕಾನೂನನ್ನೇ ಬದಲಿಸಿತು. ಈ ವ್ಯವಸ್ಥೆಯಲ್ಲಿ ಸಮಸ್ಯೆ ಇರುವುದು ಸ್ಪಷ್ಟ. ಚುನಾವಣಾ ಆಯೋಗ ಬಿಜೆಪಿ ಜೊತೆಗೆ ರಾಜಿ ಮಾಡಿಕೊಳ್ಳುತ್ತಿದೆ. ಇದನ್ನು ನಾನು ಅನೇಕ ಬಾರಿ ಹೇಳಿದ್ದೇನೆ ಎಂದು ರಾಹುಲ್ ಆಪಾದಿಸಿದರು. ಅಮೆರಿಕದ ಬ್ರೌನ್ ವಿವಿ ಹಾಗೂ ಇನ್ನೂ ಕೆಲವು ಕಡೆ ಏ.21 ಹಾಗೂ 22ರಂದು ರಾಹುಲ್ ಮಾತನಾಡಲಿದ್ದಾರೆ. ವಿದೇಶದಲ್ಲಿ ನಿಂತು ದೇಶದ ಆಂತರಿಕ ವಿಷಯಗಳನ್ನು ಬಹಿರಂಗವಾಗಿ ಟೀಕಿಸಿ, ರಾಹುಲ್ ಈ ಹಿಂದೆಯೂ ಹಲವು ಬಾರಿ ದೇಶವಾಸಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ರಾಹುಲ್ ದ್ರೋಹಿ-ಬಿಜೆಪಿ ಕಿಡಿ
ಚುನಾವಣಾ ಆಯೋಗದ ವಿರುದ್ಧ ರಾಹುಲ್ ಮಾಡಿದ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಭಿತ್ ಪಾತ್ರಾ, ‘ವಿದೇಶಿ ನೆಲದಲ್ಲಿ ಭಾರತೀಯ ಸಂಸ್ಥೆಗಳು ಮತ್ತು ಪ್ರಜಾಪ್ರಭುತ್ವವನ್ನು ಅವಮಾನಿಸಿದ ನೀವು (ರಾಹುಲ್) ಒಬ್ಬ ದೇಶದ್ರೋಹಿ’ ಎಂದು ಕಿಡಿಕಾರಿದ್ದಾರೆ. ‘ನೀವು ಮತ್ತು ನಿಮ್ಮ ತಾಯಿ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೇಶದ ದುಡ್ಡನ್ನು ದುರುಪಯೋಗ ಪಡಿಸಿಕೊಂಡಿದ್ದೀರಿ. ಅದರ ವಿರುದ್ಧ ಜಾರಿ ನಿರ್ದೇಶನಾಲಯ ತೆಗೆದುಕೊಂಡ ಕ್ರಮದಿಂದ ಕೋಪಗೊಂಡು ಹೀಗೆಲ್ಲಾ ಮಾತನಾಡುತ್ತಿದ್ದೀರಿ. ಆದರೂ ನೀವಿಬ್ಬರು ಬಚಾವಾಗಲು ಸಾಧ್ಯವಿಲ್ಲ’ ಎಂದು ಕಿಡಿಕಾರಿದ್ದಾರೆ.
Rahul Gandhi, Congress MP and Leader of the Opposition in the Lok Sabha, during an address to the Indian diaspora in Boston on Sunday raised concerns about the integrity of India’s electoral process, drawing a sharp attack from the ruling BJP.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am