ಬ್ರೇಕಿಂಗ್ ನ್ಯೂಸ್
24-04-25 12:46 pm HK News Desk ದೇಶ - ವಿದೇಶ
ನವದೆಹಲಿ, ಎ.24 : ಜಮ್ಮು ಕಾಶ್ಮೀರ ಭಯೋತ್ಪಾದಕ ದಾಳಿ ಬೆನ್ನಲ್ಲೇ ಸೌದಿ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ ಆಗಮಿಸಿದ್ದು ತುರ್ತಾಗಿ ಹಿರಿಯ ಅಧಿಕಾರಿಗಳು ಮತ್ತು ಸಂಪುಟ ಸಹೋದ್ಯೋಗಿಗಳ ಸಭೆ ನಡೆಸಿದ್ದಾರೆ. ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದು, ಎರಡು ದೇಶಗಳಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಇದರಂತೆ, ಪಾಕಿಸ್ತಾನಿಯರಿಗೆ ಭಾರತ ಪ್ರವೇಶವನ್ನು ನಿಷೇಧಿಸಿದ್ದಾರೆ.
ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಇತರ ಹಿರಿಯ ಸಚಿವರು ಭಾಗವಹಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದ ಕಾರ್ಯತಂತ್ರದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.
ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ಸಂಪೂರ್ಣ ನಿಲ್ಲಿಸುವ ವರೆಗೆ 1960ರ ಸಿಂಧೂ ಜಲ ಒಪ್ಪಂದವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲಾಗುತ್ತದೆ. ಇದಲ್ಲದೆ, ಉಭಯ ದೇಶಗಳ ನಡುವಿನ ರಸ್ತೆ ಸಂಚಾರದ ಅಟ್ಟಾರಿ- ವಾಘಾ ಚೆಕ್ ಪೋಸ್ಟ್ ಮುಚ್ಚಲಾಗುವುದು. ಭಾರತಕ್ಕೆ ಪಾಕಿಸ್ತಾನಿ ಪ್ರಜೆಗಳಿಗೆ ಪ್ರವೇಶ ರದ್ದು. ಪಾಕಿಸ್ತಾನೀಯರಿಗೆ ವೀಸಾ ನೀಡುವುದಿಲ್ಲ. ಈಗಾಗಲೇ ಭಾರತಕ್ಕೆ ಬಂದಿರುವ ಪಾಕಿಸ್ತಾನಿ ಪ್ರಜೆಗೆ ಭಾರತವನ್ನು ತೊರೆಯಲು 48 ಗಂಟೆಗಳ ಕಾಲಾವಕಾಶ ಇರುತ್ತದೆ.
ನವದೆಹಲಿಯ ಪಾಕಿಸ್ತಾನಿ ಹೈಕಮಿಷನ್ನಲ್ಲಿರುವ ರಕ್ಷಣಾ, ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರು ಭಾರತವನ್ನು ಬಿಟ್ಟು ಹೋಗುವಂತೆ ಸೂಚಿಸಲಾಗಿದೆ. ಭಾರತದ ಕಡೆಯಿಂದ ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ಇರಿಸಿರುವ ಭಾರತೀಯ ಹೈಕಮಿಷನ್ ಕಚೇರಿಯ ರಕ್ಷಣಾ, ನೌಕಾಪಡೆ ಮತ್ತು ವಾಯು ಸಲಹೆಗಾರರನ್ನು ಭಾರತ ವಾಪಾಸ್ ಕರೆಸಿಕೊಳ್ಳಲಿದೆ.
The Cabinet Committee on Security or CCS - the country's highest-decision making body on national security has taken some strict and punishing measures against Pakistan over the "cross-border linkages" that have surfaced in the investigation over the dastardly terror attack in Jammu and Kashmir's Pahalgam, in which 26 people, including one foreign national, were killed.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm