ಬ್ರೇಕಿಂಗ್ ನ್ಯೂಸ್
25-04-25 06:37 pm HK News Desk ದೇಶ - ವಿದೇಶ
ಕುಮಟಾ, ಏ 25: ತಮಿಳುನಾಡಿನ ತಿರುಚಿಯ ಎಸ್.ಆರ್.ಎಂ ಮೆಡಿಕಲ್ ಕಾಲೇಜಿನ ಎಂಬಿಬಿಎಸ್ ಅಂತಿಮ ವರ್ಷದ ಇಬ್ಬರು ವಿದ್ಯಾರ್ಥಿನಿಯರು ಗೋಕರ್ಣದ ಜಟಾಯುತೀರ್ಥ ಗುಡ್ಡದ ಬಳಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.
ಕನ್ನಿಮೋಳಿ ಈಶ್ವರನ್(23) ಮತ್ತು ಹಿಂದುಜಾ ನಟರಾಜನ್(23) ಪ್ರಾಣ ಕಳೆದುಕೊಂಡ ವಿದ್ಯಾರ್ಥಿನಿಯರು.
ತಿರುಚಿಯ ಎಸ್.ಆರ್.ಎಂ ಮೆಡಿಕಲ್ ಕಾಲೇಜಿನ 23 ವಿದ್ಯಾರ್ಥಿನಿಯರು ಚೆನ್ನೈನ ವೆಟ್ರಿ ಟೂರ್ಸ್ & ಟ್ರಾವೆಲ್ಸ್ ಮೂಲಕ ದಾಂಡೇಲಿ, ಗೋಕರ್ಣ ಮತ್ತು ಮುರ್ಡೇಶ್ವರ ಪ್ರವಾಸಕ್ಕೆ ಬಂದಿದ್ದರು. ಗುರುವಾರ ದಾಂಡೇಲಿಯಿಂದ ತೆರಳಿ ಅಂಕೋಲಾದ ವಿಭೂತಿ ಫಾಲ್ಸ್ ನೋಡಿದ್ದರು. ನಂತರ ಸಂಜೆ ಗೋಕರ್ಣ ತಲುಪಿದ್ದರು. ಅಲ್ಲಿನ ಟೂರ್ ಗೈಡ್ ಗಾಂಧಿ ಸಿವಕುಮಾರ್ ಸೂರ್ಯಾಸ್ತ ನೋಡಲು ಗುರುವಾರ ಕುಡ್ಲೆ ಬೀಚ್ ಬಳಿಯ ಜಟಾಯುತೀರ್ಥ ಸಮುದ್ರ ತೀರಕ್ಕೆ ವಿದ್ಯಾರ್ಥಿನಿಯರನ್ನು ಕರೆದೊಯ್ದಿದ್ದರು. ಸಂಜೆ 6:20ರ ಸುಮಾರಿಗೆ ಇಬ್ಬರು ವಿದ್ಯಾರ್ಥಿನಿಯರು ಭಾರಿ ಅಲೆಗಳಿಗೆ ಸಿಕ್ಕು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.
ಸ್ಥಳೀಯರಾದ ಮಣಿರಾಜು ರಕ್ಷಣೆಗೆ ಧಾವಿಸಿದರೂ, ಅವರೂ ಅಪಾಯಕ್ಕೆ ಸಿಲುಕಿದ್ದರು. ನಂತರ ಅಡ್ವೆಂಚರ್ ಬೋಟ್ ಮೂಲಕ ಇಬ್ಬರು ವಿದ್ಯಾರ್ಥಿನಿಯರನ್ನು ಮತ್ತು ಮಣಿರಾಜು ಅವರನ್ನು ದಡಕ್ಕೆ ತರಲಾಯಿತು. ಆದರೂ, ವಿದ್ಯಾರ್ಥಿನಿಯರಾದ ಕನ್ನಿಮೋಳಿ ಮತ್ತು ಹಿಂದುಜಾ ಪ್ರಾಣ ಕಳೆದುಕೊಂಡಿದ್ದಾರೆ. ಮಣಿರಾಜು ಆಪಾಯದಿಂದ ಪಾರಾಗಿದ್ದಾರೆ.
ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋಲ್ಡ್ ಸ್ಟೋರೇಜ್ ಸೌಲಭ್ಯ ಇಲ್ಲದಿರುವುದರಿಂದ, ಮೃತದೇಹಗಳನ್ನು ಕಾರವಾರ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ವಿದ್ಯಾರ್ಥಿನಿಯರ ಸಾವಿಗೆ ಟೂರ್ ಗೈಡ್ ಮತ್ತು ಟೂರ್ ಆಪರೇಟರ್ ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Gokarna, Karnataka – In a heartbreaking incident, two MBBS students from Tiruchi lost their lives while swimming at the popular Gokarna beach. The deceased have been identified as Kinnimoli Eshwaran and Hinduja Natranjan, both pursuing their medical degrees at a local college.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am