ಬ್ರೇಕಿಂಗ್ ನ್ಯೂಸ್
26-04-25 04:36 pm HK News Desk ದೇಶ - ವಿದೇಶ
ನವದೆಹಲಿ, ಎ.26 : ಪಹಲ್ಗಾಮ್ ಭಯೋತ್ಪಾದಕ ಕೃತ್ಯದ ನಂತರ, ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಸ್ವತಃ ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ ಕೊಟ್ಟು ನಾವು ತಪ್ಪು ಮಾಡಿದ್ದೇವೆಂದು ತಪ್ಪೊಪ್ಪಿಗೆ ಮಾತು ಹೇಳಿದ್ದಾರೆ. ಬ್ರಿಟನ್ ಮಾಧ್ಯಮ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಖವಾಜಾ ಆಸಿಫ್, ಪಾಕಿಸ್ತಾನವು ಭಯೋತ್ಪಾದನೆಯನ್ನು ಬೆಂಬಲಿಸುವ ಮತ್ತು ಅವರ ಕೃತ್ಯಗಳಿಗೆ ಹಣಕಾಸು ಒದಗಿಸುವ ದೀರ್ಘ ಇತಿಹಾಸವನ್ನು ಹೊಂದಿದೆ ಎಂದು ಒಪ್ಪಿಕೊಂಡಿದ್ದಾರೆ. ನಾವು 30 ವರ್ಷಗಳಿಂದ ಅಮೆರಿಕಕ್ಕಾಗಿ ಈ ಕೊಳಕು ಕೆಲಸವನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.
ಲಷ್ಕರ್-ಎ-ತೊಯ್ಬಾ ಉಗ್ರವಾದಿ ಸಂಘಟನೆ ಈ ಹಿಂದೆ ಪಾಕಿಸ್ತಾನದೊಂದಿಗೆ ಕೆಲವು ಸಂಪರ್ಕಗಳನ್ನು ಹೊಂದಿತ್ತು ಎಂದು ಖವಾಜಾ ಆಸಿಫ್ ಒಪ್ಪಿಕೊಂಡಿದ್ದಾರಲ್ಲದೆ, ಈಗ ಈ ಭಯೋತ್ಪಾದಕ ಸಂಘಟನೆ ಕಾರ್ಯಾಚರಣೆ ಅಂತ್ಯಗೊಂಡಿದೆ ಎಂದು ಹೇಳಿದ್ದಾರೆ. ಆದರೆ ಪಾಕಿಸ್ತಾನದಲ್ಲಿ ಲಷ್ಕರ್ ನಂಟು ಇದೆಯೆಂಬ ಮಾತ್ರಕ್ಕೆ ನಾವು ಅದಕ್ಕೆ ಸಹಾಯ ಮಾಡುತ್ತೇವೆ ಎಂದರ್ಥವಲ್ಲ ಎಂದು ಅವರು ಹೇಳಿದರು.
ಪಹಲ್ಗಾಮ್ ದಾಳಿಯ ಜವಾಬ್ದಾರಿಯನ್ನು ಲಷ್ಕರ್ ಅಂಗ ಸಂಸ್ಥೆ ವಹಿಸಿಕೊಂಡಿದೆಯಲ್ವಾ ಎಂಬ ಪ್ರಶ್ನೆಗೆ, ಮಾತೃಸಂಸ್ಥೆಯೇ ಅಸ್ತಿತ್ವದಲ್ಲಿಲ್ಲ. ಇನ್ನು ಶಾಖೆ ಎಲ್ಲಿಂದ ಬರುತ್ತದೆ ಎಂದು ಪ್ರಶ್ನಿಸಿದರು. ಏಪ್ರಿಲ್ 22ರಂದು ಭಯೋತ್ಪಾದಕರು 26 ಅಮಾಯಕ ಪ್ರವಾಸಿಗರನ್ನು ಕೊಂದ ಪಹಲ್ಗಾಮ್ ದಾಳಿಯ ಜವಾಬ್ದಾರಿಯನ್ನು ಲಷ್ಕರ್ ಅಂಗ ಸಂಸ್ಥೆ ಟಿಆರ್ಎಫ್ ವಹಿಸಿಕೊಂಡಿತ್ತು.
ಭಯೋತ್ಪಾದನೆಗೆ ಪಾಕಿಸ್ತಾನ ಕುಮ್ಮಕ್ಕು ನೀಡುತ್ತಾ ಬಂದಿದೆಯಲ್ವಾ ಎಂದು ಪತ್ರಕರ್ತ ಪ್ರಶ್ನಿಸಿದ್ದಕ್ಕೆ ಸಚಿವ ಖವಾಜಾ ಆಸಿಫ್ ಅದನ್ನು ಒಪ್ಪಿಕೊಂಡಿದ್ದಾರೆ. ನಾವು ಮೂರು ದಶಕಗಳಿಂದ ಅಮೆರಿಕ ಸಂಯುಕ್ತ ಸಂಸ್ಥಾನಕ್ಕಾಗಿ ಮತ್ತು ಬ್ರಿಟನ್ಗಾಗಿ ಈ ಕೊಳಕು ಕೆಲಸವನ್ನು ಮಾಡುತ್ತ ಬಂದಿದ್ದೇವೆ ಎಂದವರು ಹೇಳಿದರು. ನಮ್ಮ ಈ ತಪ್ಪು ನಡೆಯಿಂದಾಗಿ ಭಾರೀ ನಷ್ಟವನ್ನೂ ಅನುಭವಿಸಿದ್ದೇವೆ ಎಂದು ಖ್ವಾಜಾ ಆಸಿಫ್ ಹೇಳಿದ್ದಾರೆ. ಆಮೂಲಕ ಭಾರತದಲ್ಲಿ ನಡೆಯುತ್ತಿರುವ ಭಯೋತ್ಪಾದಕ ಕೃತ್ಯಗಳನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.
In a groundbreaking admission, Pakistan has publicly acknowledged its historical complicity in supporting terrorist organizations over the past three decades. This revelation marks a significant shift in the nation’s narrative regarding its role in regional and global terrorism, as officials affirm a commitment to rectifying past mistakes.
06-03-26 10:21 am
HK News Staffer
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm