ಬ್ರೇಕಿಂಗ್ ನ್ಯೂಸ್
27-04-25 08:42 pm HK News Desk ದೇಶ - ವಿದೇಶ
ಶ್ರೀನಗರ, ಏ 27: ಭಾರತ ಹಾಗೂ ಪಾಪಿ ಪಾಕಿಸ್ತಾನ ನಡುವೆ ಧರ್ಮ ಯುದ್ಧವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಭಾರತ ಹಾಗೂ ಪಾಕ್ನ ಪ್ರಮುಖ ನಾಯುಕರು ಯುದ್ಧಕ್ಕೆ ಕರೆ ನೀಡುತ್ತಿದ್ದಾರೆ. ಮೊನ್ನೆ ತಾನೇ ತೆಲಂಗಾಣದ ಕಾಂಗ್ರೆಸ್ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರು ಪಾಕ್ ಆಕ್ರಮೀತ ಕಾಶ್ಮೀರವನ್ನು ವಶಕ್ಕೆ ಪಡೆಯುವಂತೆ ಕೇಂದ್ರ ಸರ್ಕಾರವನ್ನ ಆಗ್ರಹಿಸಿದ್ದರು. ಇದರ ನಡುವೆ ಮತ್ತೊಂದು ಕಾಂಗ್ರೆಸ್ ಮೈತ್ರಿ ಪಕ್ಷದ ಮುಖ್ಯಮಂತ್ರಿಯು ಸಹ ಪಾಕಿಸ್ತಾನದ ವಿರುದ್ಧ ಯುದ್ದಕ್ಕೆ ಕರೆ ನೀಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿಯಾಗಿರುವ ಒಮರ್ ಅಬ್ದುಲ್ಲಾ ಅವರು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಯೋತ್ಪಾದನೆ ಮತ್ತು ಅದರ ಮೂಲದ ವಿರುದ್ಧ ನಿರ್ಣಾಯಕ ಹೋರಾಟ ನಡೆಯಬೇಕು ಎಂದಿದ್ದಾರೆ.
ಮುಂದುವರೆದು, ಕಾಶ್ಮೀರದ ಜನರು ಭಯೋತ್ಪಾದನೆ ಮತ್ತು ಅಮಾಯಕರ ಹತ್ಯೆಯ ವಿರುದ್ಧ ಮುಕ್ತವಾಗಿ ಮತ್ತು ಸ್ವಯಂಪ್ರೇರಿತವಾಗಿ ಧ್ವನಿಯೆತ್ತಿದ್ದಾರೆ. ಹಾಗಾಗಿ, ಈ ಬೆಂಬಲವನ್ನು ಬಳಸಿಕೊಂಡು, ಜನರನ್ನು ದೂರವಿಡುವ ಯಾವುದೇ ತಪ್ಪು ಕ್ರಮವನ್ನು ತಪ್ಪಿಸುವ ಸಮಯ ಇದು. ತಪ್ಪಿತಸ್ಥರನ್ನು ಶಿಕ್ಷಿಸಿ, ಅವರಿಗೆ ಯಾವುದೇ ಕರುಣೆ ತೋರಬೇಡಿ, ಆದರೆ ಅಮಾಯಕ ಜನರು ಪಾರ್ಶ್ವ ಹಾನಿಗೆ ಒಳಗಾಗದಂತೆ ಎಚ್ಚರಿಕೆ ವಹಿಸಿ ಎಂದು ಹೇಳಿದ್ದಾರೆ
ಇನ್ನು ಇದಕ್ಕೂ ಮುನ್ನ ಬಲೂಚಿಸ್ತಾನ್ ಸ್ವಾತಂತ್ರ್ಯ ಚಳವಳಿಗೆ ಬಿಜೆಪಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬೆಂಬಲ ನೀಡಿ ಪಾಕಿಸ್ತಾನ ಇಬ್ಬಾಗಕ್ಕೆ ಕರೆ ನೀಡಿದ್ದಾರೆ. ಇವರೊಂದಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ರಾಷ್ಟ್ರವು ಪಾಕಿಸ್ತಾನದ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದೆ ಮತ್ತು ಕೆಲವು ಸ್ಪಷ್ಟ ಮಿಲಿಟರಿ ಪ್ರತಿಕ್ರಿಯೆ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ
After the Pahalgam terror attack, there must be a decisive fight against terrorism and its origin. People of Kashmir have come out openly against terrorism and the murder of innocent people, they did this freely & spontaneously. It’s time to build on this support and avoid any…
— Omar Abdullah (@OmarAbdullah) April 27, 2025
Jammu and Kashmir Chief Minister Omar Abdullah has called for a resolute stance against terrorism following the devastating attack in Pahalgam that resulted in the deaths of 26 individuals, predominantly tourists.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm