ಬ್ರೇಕಿಂಗ್ ನ್ಯೂಸ್
19-12-20 06:05 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.20: ಪಕ್ಷದ ನಾಯಕತ್ವ ಮತ್ತು ಪಕ್ಷ ಸಂಘಟನೆ ವಿಚಾರದಲ್ಲಿ ಆಕ್ಷೇಪಿಸಿ ಪತ್ರ ಬರೆದಿದ್ದ ನಾಯಕರನ್ನು ಕರೆದು ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷ ಪ್ರತೀ ಚುನಾವಣೆಯಲ್ಲಿ ನೆಲೆ ಕಳಕೊಳ್ಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸೋನಿಯಾ ಗಾಂಧಿ, ಪಕ್ಷದ ಮರು ಸಂಘಟನೆಗಾಗಿ ನಾಯಕರ ಅಹವಾಲು ಕೇಳಿದ್ದಾರೆ. ಅಲ್ಲದೆ, ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಶೀಘ್ರದಲ್ಲೇ ಚುನಾವಣೆ ನಡೆಸುವುದಾಗಿ ಹೇಳಿದ್ದಾರೆ ಎನ್ನಲಾಗುತ್ತಿದೆ.
ದೇಶದಲ್ಲಿ ಕೋವಿಡ್ ನಿರ್ಬಂಧ ವಿಧಿಸಿದ ಬಳಿಕ ಸೋನಿಯಾ ಗಾಂಧಿ ಯಾರ ಭೇಟಿಯನ್ನೂ ಮಾಡುತ್ತಿರಲಿಲ್ಲ. ನಿರ್ಬಂಧ ಸಡಿಲಗೊಂಡ ಬಳಿಕ ಪಕ್ಷದ ನಾಯಕರನ್ನು ಖುದ್ದಾಗಿ ಭೇಟಿಯಾಗುತ್ತಿರುವುದು ಇದೇ ಮೊದಲು. ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ವಿಚಾರದಲ್ಲಿ ಪ್ರಮುಖ ನಾಯಕರಾದ ಕಪಿಲ್ ಸಿಬಲ್, ಗುಲಾಂ ನಬಿ ಆಜಾದ್, ಶಶಿ ತರೂರ್ ಸೇರಿದಂತೆ 40ಕ್ಕೂ ಹೆಚ್ಚು ಮಂದಿ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಅವರಲ್ಲಿ ಒಂದಷ್ಟು ಮಂದಿಯನ್ನು ಕರೆದು ಸಮಾಧಾನಿಸುವ ಪ್ರಯತ್ನ ಮಾಡಿದ್ದಾರೆ.
ಇಂದಿನ ಸಭೆಯಲ್ಲಿ ಗುಲಾಂ ನಬಿ ಆಜಾದ್, ಆನಂದ್ ಶರ್ಮಾ, ಪ್ರಥ್ವಿರಾಜ್ ಚೌಹಾಣ್, ಭೂಪಿಂದರ್ ಸಿಂಗ್ ಹೂಡಾ, ಸಂಸದರಾದ ಮನೀಶ್ ತಿವಾರ್, ವಿವೇಕ್ ತಂಖಾ, ಶಶಿ ತರೂರ್, ಮಧ್ಯಪ್ರದೇಶ ಮಾಜಿ ಸಿಎಂ ಕಮಲನಾಥ್, ಹಿರಿಯ ನಾಯಕ ಚಿದಂಬರಂ ಪಾಲ್ಗೊಂಡಿದ್ದರು. ಅಲ್ಲದೆ, ರಾಹುಲ್ ಗಾಂಧಿ ಮತ್ತು ಸೋನಿಯಾ ಆಪ್ತರು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಮುಂದಿನ ದಿನಗಳಲ್ಲಿ ಇತರ ನಾಯಕರನ್ನೂ ಭೇಟಿಯಾಗಿ ಪಕ್ಷದ ಮರು ಸಂಘಟನೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm