ಬ್ರೇಕಿಂಗ್ ನ್ಯೂಸ್
30-04-25 02:13 pm HK News Desk ದೇಶ - ವಿದೇಶ
ನವದೆಹಲಿ, ಎ.30 : ಪಹಲ್ಗಾಮ್ ಉಗ್ರರ ದಾಳಿ ಕೃತ್ಯದ ಬಳಿಕ ಭಾರತದ ಪ್ರತೀಕಾರ ಭೀತಿಯಲ್ಲಿರುವ ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್ ಮತ್ತು ಲಾಹೋರ್ ವ್ಯಾಪ್ತಿಯಲ್ಲಿ ನೋ ಫ್ಲೈ ಝೋನ್ (ವಿಮಾನ ಹಾರಾಟ ನಿಷೇಧ ವಲಯ) ಘೋಷಣೆ ಮಾಡಿದೆ.
ಮೇ 2 ರವರೆಗೆ ಇಸ್ಲಾಮಾಬಾದ್ ಮತ್ತು ಲಾಹೋರ್ ಪ್ರದೇಶದಲ್ಲಿ ವಾಯುಪಡೆಗೆ ಹಾರಾಟ ನಿಷೇಧ ಬಗ್ಗೆ ನೋಟಿಸ್ ನೀಡಲಾಗಿದೆ. ಹೀಗಾಗಿ ಈ ಭಾಗದ ವಾಯು ಪ್ರದೇಶದಲ್ಲಿ ಯಾವುದೇ ವಿಮಾನಗಳು ಕಾರ್ಯ ನಿರ್ವಹಿಸಲು ಅವಕಾಶ ಇರುವುದಿಲ್ಲ.
ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿನ ಭಯೋತ್ಪಾದಕ ದಾಳಿಗೆ ಭಾರತ ಬಲವಾದ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಆತಂಕಕ್ಕೀಡಾಗಿದ್ದು, ಇದರಂತೆ ಇಸ್ಲಾಮಾಬಾದ್ ಮತ್ತು ಲಾಹೋರ್ ವಾಯು ಪ್ರದೇಶದಲ್ಲಿ ವಿಮಾನ ಹಾರಾಟಕ್ಕೆ ನಿರ್ಬಂಧ ಮಾಡಿದೆ.
ಮಾಹಿತಿ ಸಚಿವಾಲಯದ ಹೇಳಿಕೆಯಲ್ಲಿ "ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಪಾಕಿಸ್ತಾನ ಭಾಗಿಯಾಗಿದೆ ಎಂಬ ಆಧಾರ ರಹಿತ ಆರೋಪಗಳ ನೆಪದಲ್ಲಿ ಭಾರತ ಮುಂದಿನ 24-36 ಗಂಟೆಗಳಲ್ಲಿ ಪಾಕಿಸ್ತಾನ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಲು ಉದ್ದೇಶಿಸಿದೆ ಎಂಬ ವಿಶ್ವಾಸಾರ್ಹ ಗುಪ್ತಚರ ಮಾಹಿತಿ ಪಾಕಿಸ್ತಾನಕ್ಕೆ ಇದೆ" ಎಂದು ಹೇಳಿದ್ದರು. ಈ ಸೂಚನೆ ಹಿನ್ನೆಲೆಯಲ್ಲಿ ಯಾವುದೇ ಇತರ ದೇಶಗಳ ವಿಮಾನ ಪತ್ತೆಯಾದಲ್ಲಿ ವಾಯುಪಡೆ ಹೊಡೆದುರುಳಿಸಲು ಅವಕಾಶ ಇರುತ್ತದೆ.
As the tensions between India and Pakistan rise in the aftermath of the Pahalgam terror attack that killed 26 tourists, Pakistan has declared no-fly zone in Islamabad, Lahore. The no to airmen (NOTAM) notice has been imposed on Islamabad and Lahore until May 2, implying that no aircraft will be allowed to operate in the designated airspace.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm