ಬ್ರೇಕಿಂಗ್ ನ್ಯೂಸ್
30-04-25 03:14 pm HK News Desk ದೇಶ - ವಿದೇಶ
ನವದೆಹಲಿ, ಎ.30 : ಭಾರತೀಯ ಸೇನಾಪಡೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಾಳಿ ವಿಚಾರದಲ್ಲಿ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ. ಮಿಲಿಟರಿ ಪ್ರತಿಕ್ರಿಯೆಯ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಸಶಸ್ತ್ರ ಪಡೆಗಳಿಗೆ ಪರಮಾಧಿಕಾರ ನೀಡಿದ್ದಾರೆ. ಹೀಗಾಗಿ ಯಾವುದೇ ಸಂದರ್ಭದಲ್ಲಿ ದಾಳಿ ಎಸಗುವ ಸಾಧ್ಯತೆಯಿದೆ.
ಪ್ರಧಾನಿ ನಿವಾಸದಲ್ಲಿ ಐದು ಗಂಟೆಗಳ ಕಾಲ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನವನ್ನು ಪ್ರಧಾನಿ ಮೋದಿ ಪ್ರಕಟಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಮತ್ತು ತ್ರಿವಳಿ ಪಡೆಗಳ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಅವರ ಜೊತೆಗೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ ಬಳಿಕ ಈ ನಿರ್ಧಾರ ಪ್ರಕಟಿಸಲಾಗಿದೆ.
ಮೋದಿ ನಿರ್ಧಾರ ಬೆನ್ನಲ್ಲೇ ಭಾರತವು ಮುಂದಿನ 24 ರಿಂದ 36 ಗಂಟೆಗಳಲ್ಲಿ ತನ್ನ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಲು ಯೋಜಿಸುತ್ತಿದೆ ಎಂದು ಪಾಕ್ ಸಚಿವ ಅತ್ತೌಲ್ಲಾ ತರಾರ್ ತನ್ನ ದೇಶದ ಸೇನಾಪಡೆಗಳಿಗೆ ಎಚ್ಚರಿಕೆ ನೀಡಿದ್ದಾರೆ.
"ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಪಾಕಿಸ್ತಾನ ಭಾಗಿಯಾಗಿದೆ ಎಂಬ ನೆಪದಲ್ಲಿ ಭಾರತ ಮುಂದಿನ 24-36 ಗಂಟೆಗಳಲ್ಲಿ ಪಾಕಿಸ್ತಾನದ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಲು ಉದ್ದೇಶಿಸಿದೆ ಎಂಬ ವಿಶ್ವಾಸಾರ್ಹ ಗುಪ್ತಚರ ಮಾಹಿತಿ ಪಾಕಿಸ್ತಾನಕ್ಕೆ ಇದೆ" ಎಂದು ಅತ್ತೌಲ್ಲಾ ತರಾರ್ ಸೋಶಿಯಲ್ ಮೀಡಿಯಾ ಎಕ್ಸ್ನಲ್ಲಿ ಬರೆದಿದ್ದು, ವಿಡಿಯೋ ಮೂಲಕ ಎಚ್ಚರಿಕೆ ನೀಡಿದ್ದಾರೆ. ಪಹಲ್ಗಾಮ್ ದಾಳಿಯ ಕುರಿತು "ತಟಸ್ಥ ಆಯೋಗದಿಂದ ವಿಶ್ವಾಸಾರ್ಹ, ಪಾರದರ್ಶಕ ಮತ್ತು ಸ್ವತಂತ್ರ ತನಿಖೆಗೆ" ಇಸ್ಲಾಮಾಬಾದ್ ಸಹಕರಿಸಲು ಸಿದ್ಧವಾಗಿದೆ ಎಂದು ಸಚಿವ ಹೇಳಿದ್ದು, ಭಾರತದ ಯಾವುದೇ ಮಿಲಿಟರಿ ಸಾಹಸಕ್ಕೆ ನಿರ್ಣಾಯಕವಾಗಿ ಪ್ರತಿಕ್ರಿಯಿಸಲಾಗುವುದು ಎಂದು ಪಾಕಿಸ್ತಾನ ಪುನರುಚ್ಚರಿಸುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
Pakistan on Wednesday (April 30, 2025), citing “credible intelligence”, claimed that India was planning to carry out military action against it within the next 24 to 36 hours and warned New Delhi that consequences will follow.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am