ಬ್ರೇಕಿಂಗ್ ನ್ಯೂಸ್
30-04-25 03:14 pm HK News Desk ದೇಶ - ವಿದೇಶ
ನವದೆಹಲಿ, ಎ.30 : ಭಾರತೀಯ ಸೇನಾಪಡೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಾಳಿ ವಿಚಾರದಲ್ಲಿ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ. ಮಿಲಿಟರಿ ಪ್ರತಿಕ್ರಿಯೆಯ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಸಶಸ್ತ್ರ ಪಡೆಗಳಿಗೆ ಪರಮಾಧಿಕಾರ ನೀಡಿದ್ದಾರೆ. ಹೀಗಾಗಿ ಯಾವುದೇ ಸಂದರ್ಭದಲ್ಲಿ ದಾಳಿ ಎಸಗುವ ಸಾಧ್ಯತೆಯಿದೆ.
ಪ್ರಧಾನಿ ನಿವಾಸದಲ್ಲಿ ಐದು ಗಂಟೆಗಳ ಕಾಲ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನವನ್ನು ಪ್ರಧಾನಿ ಮೋದಿ ಪ್ರಕಟಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಮತ್ತು ತ್ರಿವಳಿ ಪಡೆಗಳ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಅವರ ಜೊತೆಗೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ ಬಳಿಕ ಈ ನಿರ್ಧಾರ ಪ್ರಕಟಿಸಲಾಗಿದೆ.
ಮೋದಿ ನಿರ್ಧಾರ ಬೆನ್ನಲ್ಲೇ ಭಾರತವು ಮುಂದಿನ 24 ರಿಂದ 36 ಗಂಟೆಗಳಲ್ಲಿ ತನ್ನ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಲು ಯೋಜಿಸುತ್ತಿದೆ ಎಂದು ಪಾಕ್ ಸಚಿವ ಅತ್ತೌಲ್ಲಾ ತರಾರ್ ತನ್ನ ದೇಶದ ಸೇನಾಪಡೆಗಳಿಗೆ ಎಚ್ಚರಿಕೆ ನೀಡಿದ್ದಾರೆ.
"ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಪಾಕಿಸ್ತಾನ ಭಾಗಿಯಾಗಿದೆ ಎಂಬ ನೆಪದಲ್ಲಿ ಭಾರತ ಮುಂದಿನ 24-36 ಗಂಟೆಗಳಲ್ಲಿ ಪಾಕಿಸ್ತಾನದ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಲು ಉದ್ದೇಶಿಸಿದೆ ಎಂಬ ವಿಶ್ವಾಸಾರ್ಹ ಗುಪ್ತಚರ ಮಾಹಿತಿ ಪಾಕಿಸ್ತಾನಕ್ಕೆ ಇದೆ" ಎಂದು ಅತ್ತೌಲ್ಲಾ ತರಾರ್ ಸೋಶಿಯಲ್ ಮೀಡಿಯಾ ಎಕ್ಸ್ನಲ್ಲಿ ಬರೆದಿದ್ದು, ವಿಡಿಯೋ ಮೂಲಕ ಎಚ್ಚರಿಕೆ ನೀಡಿದ್ದಾರೆ. ಪಹಲ್ಗಾಮ್ ದಾಳಿಯ ಕುರಿತು "ತಟಸ್ಥ ಆಯೋಗದಿಂದ ವಿಶ್ವಾಸಾರ್ಹ, ಪಾರದರ್ಶಕ ಮತ್ತು ಸ್ವತಂತ್ರ ತನಿಖೆಗೆ" ಇಸ್ಲಾಮಾಬಾದ್ ಸಹಕರಿಸಲು ಸಿದ್ಧವಾಗಿದೆ ಎಂದು ಸಚಿವ ಹೇಳಿದ್ದು, ಭಾರತದ ಯಾವುದೇ ಮಿಲಿಟರಿ ಸಾಹಸಕ್ಕೆ ನಿರ್ಣಾಯಕವಾಗಿ ಪ್ರತಿಕ್ರಿಯಿಸಲಾಗುವುದು ಎಂದು ಪಾಕಿಸ್ತಾನ ಪುನರುಚ್ಚರಿಸುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
Pakistan on Wednesday (April 30, 2025), citing “credible intelligence”, claimed that India was planning to carry out military action against it within the next 24 to 36 hours and warned New Delhi that consequences will follow.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm