ಬ್ರೇಕಿಂಗ್ ನ್ಯೂಸ್
08-05-25 12:47 pm HK News Desk ದೇಶ - ವಿದೇಶ
ತಿರುವನಂತಪುರಂ, ಮೇ 8 : ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ ಭೇಟಿ ನೀಡಲಿದ್ದು ಇರುಮುಡಿ ಹೊತ್ತು ಅಯ್ಯಪ್ಪ ದರ್ಶನ ಪಡೆಯಲಿದ್ದಾರೆ. ದೇಶದ ಅತ್ಯುನ್ನತ ಹುದ್ದೆಯಲ್ಲಿರುವ ರಾಷ್ಟ್ರಪತಿ ಶಬರಿಮಲೆಗೆ ಬರುತ್ತಿರುವುದು ಇದೇ ಮೊದಲು.
ದ್ರೌಪದಿ ಮುರ್ಮು ಅವರು ಸಂಪ್ರದಾಯದಂತೆ, ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿ ಬೆಟ್ಟವನ್ನು ಏರುವ ಸಾಧ್ಯತೆಯಿದೆ. ಹಿಂದೆ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ಶಬರಿಮಲೆ ಬೆಟ್ಟ ಏರುವ ಬಯಕೆ ವ್ಯಕ್ತಪಡಿಸಿದ್ದರು. ಪ್ರಧಾನಿ ಭದ್ರತಾ ಇಲಾಖೆ ಇಂದಿರಾ ಗಾಂಧಿ ನೇರವಾಗಿ ಸನ್ನಿಧಾನದಲ್ಲಿ ಇಳಿಯಲು ಹೆಲಿಪ್ಯಾಡ್ ನಿರ್ಮಿಸಲು ಯೋಜಿಸಿತ್ತು. ಆದರೆ ಆ ರೀತಿ ಬರುವುದಕ್ಕೆ ವಿರೋಧ ಕೇಳಿಬಂದಿದ್ದರಿಂದ ಅಂತಹ ಆಲೋಚನೆ ಕೈಬಿಡಲಾಗಿತ್ತು.
ಈ ಕುರಿತು ತಿರುವಾಂಕೂರು ದೇವಸ್ವಂ ಮಂಡಳಿಗೆ ರಾಷ್ಟ್ರಪತಿ ಭವನದಿಂದ ಸೂಚನೆ ಬಂದಿದೆ. ಆಗಮನ ಮತ್ತು ನಿರ್ಗಮನದ ವೇಳಾಪಟ್ಟಿಯನ್ನೂ ನೀಡಲಾಗಿದೆ. ಅದರ ಪ್ರಕಾರ ದ್ರೌಪದಿ ಮುರ್ಮು ಅವರು ಮೇ 18 ರಂದು ಪಾಲಾದ ಸೇಂಟ್ ಥಾಮಸ್ ಕಾಲೇಜಿನ ಜಯಂತಿ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮೇ 19 ರಂದು ಪಂಪಾಗೆ ಪ್ರಯಾಣ ಬೆಳೆಸಲಿದ್ದಾರೆ.
ದೇವಾಲಯದ ಬಳಿಯಿರುವ ನೀಲಕ್ಕಲ್ ಹೆಲಿಪ್ಯಾಡ್ಗೆ ಪ್ರಯಾಣಿಸಿ ಪಂಪಾ ಬೇಸ್ ಕ್ಯಾಂಪ್ಗೆ ತೆರಳುತ್ತಾರೆ. ಯಾತ್ರಿಕರಂತೆ 4.25 ಕಿಮೀ ಎತ್ತರದ ಹಾದಿಯಲ್ಲಿ ನಡೆದು ಸಾಗುತ್ತಾರೆ. ಇವರೊಂದಿಗೆ ಎಸ್ಪಿಜಿ ಯೋಧರು ಕೂಡ ಭದ್ರತೆಯಲ್ಲಿ ಕಡಿದಾದ ರಸ್ತೆಯಲ್ಲಿ ನಡೆದು ಸಾಗಲಿದ್ದಾರೆ. ಪ್ರವಾಸ ಸಂದರ್ಭದಲ್ಲಿ ಮುರ್ಮು ಅವರು ಕೊಟ್ಟಾಯಂ ಮತ್ತು ಕುಮಾರಕೋಮ್ ನಲ್ಲಿ ಉಳಿದುಕೊಳ್ಳುವ ನಿರೀಕ್ಷೆಯಿದೆ. ರಾಷ್ಟ್ರಪತಿಯ ಭದ್ರತೆ ಮತ್ತು ವಸತಿಗಾಗಿ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡುವಂತೆ ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.
President Droupadi Murmu is set to make history on May 19 by becoming the first sitting President of India to offer prayers at the Sabarimala Sree Ayyappa Temple in Kerala. The Travancore Devaswom Board (TDB), which manages the shrine, confirmed her upcoming visit, calling it a landmark moment for the temple and the nation.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm