ಬ್ರೇಕಿಂಗ್ ನ್ಯೂಸ್
10-05-25 11:05 pm HK News Desk ದೇಶ - ವಿದೇಶ
ನವದೆಹಲಿ, ಮೇ 10 : ಪಾಕಿಸ್ತಾನ ಮತ್ತು ಅಲ್ಲಿನ ಭಯೋತ್ಪಾದಕರು ತಮ್ಮ ನರಿ ಬುದ್ಧಿ ಬಿಟ್ಟಿಲ್ಲ. ಭಾರತ ಕದನ ವಿರಾಮ ಘೋಷಣೆ ಮಾಡಿದ್ದರೂ ಕೆಲವೇ ಗಂಟೆಗಳಲ್ಲಿ ಗಡಿಭಾಗದ ಉದ್ದಕ್ಕೂ ಗುಂಡಿನ ಸದ್ದು ಕೇಳಿಬಂದಿದೆ. ಡ್ರೋಣ್ ಹಾರಾಟವೂ ಅಲ್ಲಲ್ಲಿ ಆಗತೊಡಗಿದೆ. ಜಮ್ಮು ಕಾಶ್ಮೀರದ ಉರಿ, ಪೂಂಛ್, ರಜೌರಿ, ಪಂಜಾಬ್ ರಾಜ್ಯದ ಗಡಿಜಿಲ್ಲೆ ಗುರುದಾಸ್ ಪುರದಲ್ಲಿ ಡ್ರೋಣ್ ಹಾರಾಟ ಆಗಿದೆ. ಗಡಿಭಾಗದಲ್ಲಿ ಸೇನಾ ಪಡೆ ತೀವ್ರ ನಿಗಾ ಇಟ್ಟಿದ್ದು, ದಾಳಿಯಾದ್ರೆ ಪ್ರತಿದಾಳಿಗೆ ಸಿದ್ಧವಾಗಿದೆ.
ಕೆಲವು ದಿನಗಳಿಂದ ತೀವ್ರ ಶೆಲ್ ದಾಳಿಗೆ ಸಾಕ್ಷಿಯಾಗಿದ್ದ ಕಾಶ್ಮೀರದ ಗಡಿಜಿಲ್ಲೆಗಳಲ್ಲಿ ದಾಳಿಗಳು ನಿಂತಿದ್ದರೂ, ಆಗೊಮ್ಮೆ ಈಗೊಮ್ಮೆ ಎನ್ನುವಂತೆ ಗುಂಡಿನ ಸದ್ದು ಕೇಳುತ್ತಿದೆ. ಗಡಿಭಾಗದ ಜಿಲ್ಲೆಗಳು ಸತತ ನಾಲ್ಕನೇ ದಿನವೂ ಕತ್ತಲಲ್ಲೇ ಮುಳುಗಿವೆ. ಇದೇ ವೇಳೆ, ಪಂಜಾಬಿನ ಫಿರೋಜ್ ಪುರದಲ್ಲಿ ಏರ್ ಡಿಫೆನ್ಸ್ ಸಿಸ್ಟಮ್ ಸೈರನ್ ಮೊಳಗಿಸಿದೆ. ರಾಡಾರಿನಲ್ಲಿ ಶತ್ರುಗಳ ಹಾರಾಟ ಕಂಡುಬಂದರೆ ಮಾತ್ರ ಸೈರನ್ ಮೊಳಗುತ್ತದೆ.

ಪಂಜಾಬಿನ ಗುರುದಾಸ್ ಪುರ, ಫಿರೋಜ್ ಪುರ, ಪಠಾಣ್ ಕೋಟ್, ಹೊಶಿಯಾರ್ ಪುರ, ಜಲಂಧರ್ ಮತ್ತು ಫರೀದ್ ಕೋಟ್ ನಲ್ಲಿ ಡ್ರೋಣ್ ಹಾರಾಟ ಕಣ್ಣಿಗೆ ಕಂಡಿದೆ. ಪಾಕಿಸ್ತಾನಕ್ಕೆ ಹೊಂದಿಕೊಂಡ ರಾಜಸ್ಥಾನ ಗಡಿಭಾಗದಲ್ಲಿಯೂ ಪಾಕ್ ಸೈನಿಕರು ಕದನ ವಿರಾಮ ಉಲ್ಲಂಘಿಸಿದ್ದಾರೆ. ಗುಂಡಿನ ದಾಳಿ ಆಗಿರುವುದರಿಂದ ಈ ಭಾಗದಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ವಿದ್ಯುತ್ ದೀಪಗಳನ್ನು ಉರಿಸದಂತೆ ಎಲ್ಲ ಲೈಟ್ ಆಫ್ ಮಾಡಲು ಜಿಲ್ಲಾಡಳಿತಗಳು ಸೂಚನೆ ಸಾರ್ವಜನಿಕರಿಗೆ ಸೂಚನೆ ನೀಡಿವೆ. ಗುಜರಾತಿನ ಕಛ್ ಪ್ರದೇಶದಲ್ಲೂ ಡ್ರೋಣ್ ಹಾರಾಟ ಕಾಣಿಸಿಕೊಂಡಿದೆ. ಅಮೃತಸರ ಜಿಲ್ಲೆಯಲ್ಲೂ ಏರ್ ಡಿಫೆನ್ಸ್ ಸೈರನ್ ಮೊಳಗಿಸಿದೆ. ಜಮ್ಮು ಕಾಶ್ಮೀರದ ನಗ್ರೋಟಾ ಪ್ರದೇಶದಲ್ಲಿ ತೀವ್ರ ಗುಂಡಿನ ಚಕಮಕಿಯಾಗಿದ್ದು, ಉಗ್ರರು ಗಡಿಭಾಗದಲ್ಲಿ ಗುಂಡಿನ ದಾಳಿ ನಡೆಸಿದ್ದಾರೆನ್ನುವ ಮಾಹಿತಿ ಇದೆ.
ಇದೇ ವೇಳೆ, ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದು, ಕಾಶ್ಮೀರದಲ್ಲಿ ಗುಂಡಿನ ಸದ್ದು ಕೇಳುತ್ತಿದ್ದು, ಎಲ್ಲಿದೆ ಕದನ ವಿರಾಮ ಎಂದು ಪ್ರಶ್ನೆ ಮಾಡಿದ್ದಾರೆ. ಇದೇ ವೇಳೆ, ಚೀನಾ ವಿದೇಶಾಂಗ ಮಂತ್ರಿ ವಾಂಗ್ ಯೀ ಪಾಕಿಸ್ತಾನದ ವಿದೇಶ ಸಚಿವ ಇಷಾಕ್ ದಾರ್ ಜೊತೆಗೆ ಫೋನ್ ಸಂಭಾಷಣೆ ಮಾಡಿದ ವೇಳೆ, ದೇಶದ ಸ್ವಾತಂತ್ರ್ಯ, ಸಮಗ್ರತೆ, ಗಡಿಭಾಗ ಉಳಿಸಿಕೊಳ್ಳುವ ದೃಷ್ಟಿಯಿಂದ ನಿಮ್ಮ ಜೊತೆಗೆ ನಾವಿದ್ದೇವೆ ಎಂದು ವಾಗ್ದಾನ ನೀಡಿದ್ದಾರೆ. ಮೇ 10ರ ಸಂಜೆ 5 ಗಂಟೆಯಿಂದ ಭಾರತ- ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿತ್ತು.
Nuclear-armed neighbours India and Pakistan agreed to a ceasefire on Saturday after U.S. pressure and diplomacy, announcing a sudden stop to a conflict that had seemed to be spiralling alarmingly.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm