ಬ್ರೇಕಿಂಗ್ ನ್ಯೂಸ್
11-05-25 11:02 pm HK News Desk ದೇಶ - ವಿದೇಶ
ನವದೆಹಲಿ, ಮೇ 11 : ಪಾಕಿಸ್ತಾನ ತನ್ನ ಮೇಲಾಗಿರುವ ದಾಳಿ, ಅದರಿಂದ ಆಗಿರುವ ನಷ್ಟದ ಬಗ್ಗೆ ಹೇಳಿಕೊಂಡಿಲ್ಲವಾದರೂ ಅಲ್ಲಿನ ಸೇನಾ ನೆಲೆ ಹಾಗೂ ಉಗ್ರರ ಶಿಬಿರಗಳ ಮೇಲೆ ದೊಡ್ಡ ಮಟ್ಟದ ದಾಳಿ ಮಾಡಿರುವ ಕುರಿತಾಗಿ ಭಾರತದ ಮೂರು ಸೇನಾ ಪಡೆಯ ಅಧಿಕಾರಿಗಳು ಫೋಟೋ ಸಹಿತ ಸಾಕ್ಷಿ ತೋರಿಸಿದ್ದಾರೆ. ಉಗ್ರರಿಗೆ ಆಶ್ರಯ ಕೊಟ್ಟಿರುವ ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ ಮೂಲಕ ತಕ್ಕ ಉತ್ತರ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.
ಆಪರೇಷನ್ ಸಿಂಧೂರ ಕುರಿತು ಭಾರತದ ಮೂರು ಪಡೆಯ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ಏರ್ ಮಾರ್ಷಲ್ ಎ.ಕೆ ಭಾರ್ತಿ ಮಾತನಾಡಿ, ಖಚಿತ ಮಾಹಿತಿ ಆಧರಿಸಿ ಉಗ್ರರ ಅಡುಗುತಾಣಗಳನ್ನು ಗುರಿಯಾಗಿಸಿ ಹೊಡೆದಿದ್ದೇವೆ. ಉಗ್ರರ ನೆಲೆಗಳನ್ನು ಧ್ವಂಸ ಮಾಡುವಲ್ಲಿ ಭಾರತ ಯಶಸ್ವಿಯಾಗಿದೆ. ನಮ್ಮ ದಾಳಿಯಿಂದ ಹೆದರಿ ಉಗ್ರರು ತಮ್ಮ ನೆಲೆಗಳಿಂದ ಕಾಲ್ಕಿತ್ತಿದ್ದಾರೆ ಎಂದು ಹೇಳಿದ್ದಾರೆ.


ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ನಮ್ಮ ಗುರಿ ಭಯೋತ್ಪಾದಕರ ತಾಣಗಳೇ ಹೊರತು ನಾಗರಿಕರು ಅಲ್ಲ. ಪಾಕಿಸ್ತಾನ ಹಲವು ಉಗ್ರರಿಗೆ ಆಶ್ರಯ ಕೊಟ್ಟಿದೆ. ಉಗ್ರರ ತರಬೇತಿ ಕೇಂದ್ರಗಳನ್ನು ಧ್ವಂಸ ಮಾಡಲಾಗಿದೆ. ಇದರ ಜೊತೆ ಪ್ರಮುಖ ಉಗ್ರ ಎಂದು ಗುರುತಿಸಲಾದ ಅಬ್ದುಲ್ ಮಲೀಕ್ನನ್ನು ಹೊಡೆ ಹಾಕಲಾಗಿದೆ. 100ಕ್ಕೂ ಹೆಚ್ಚು ಉಗ್ರರನ್ನು ಕೊಂದು ಹಾಕಲಾಗಿದೆ ಎಂದು ಹೇಳಿದ್ದಾರೆ.
ಪಾಕಿಸ್ತಾನದ ಬಾವಲ್ಪುರ, ಮುರಿದ್ಕೆ, ಮರ್ಕಜಾ ಪ್ರದೇಶಗಳಿಗೆ ದಾಳಿ ಮಾಡಿ ಉಗ್ರ ನೆಲೆಗಳನ್ನು ಧ್ವಂಸ ಮಾಡಲಾಗಿದೆ. ವಾಯು ಪ್ರದೇಶದಿಂದ ಕ್ಷಿಪಣಿ ಹಾರಿಸಿ ದಾಳಿ ಮಾಡಿದ್ದೇವೆ. ಪಿಒಕೆ, ಪಾಕಿಸ್ತಾನಕ್ಕೆ ನುಗ್ಗಿ 9 ಉಗ್ರರ ನೆಲೆಗಳನ್ನು ಇನ್ನಿಲ್ಲದಂತೆ ಫಿನಿಶ್ ಮಾಡಿದ್ದೇವೆ. ಆಫರೇಷನ್ ಸಿಂಧೂರ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.
ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿರುವ ಕುರಿತು ಫೋಟೋಗಳನ್ನು ಬಿಡುಗಡೆ ಮಾಡಿದ್ದು ದಾಳಿಗೆ ಮೊದಲು ಹಾಗೂ ನಂತರದ ಉಗ್ರರ ನೆಲೆಗಳು ಹೇಗೆ ನಾಶವಾದವು ಎಂಬುದನ್ನು ಫೋಟೋದಲ್ಲಿ ತೋರಿಸಲಾಗಿದೆ. ಪಾಕಿಸ್ತಾನ ಡ್ರೋಣ್, ಫೈಟರ್ ಜೆಟ್ ಮೂಲಕ ಭಾರತದ ಮೇಲೆ ದಾಳಿಗೆ ಯತ್ನಿಸಿದೆ. ಆದರೆ ನಮ್ಮ ಯಾವುದೇ ಸೇನಾ ನೆಲೆಗೂ ತೊಂದರೆ ಎದುರಾಗಿಲ್ಲ ಎಂದು ಹೇಳಿದ್ದಾರೆ.
The Indian Armed Forces on Sunday briefed the nation about the work put into Operation Sindoor that targeted terror infrastructure in PoJK and Pakistan's Punjab province on May 7.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am