ಬ್ರೇಕಿಂಗ್ ನ್ಯೂಸ್
11-05-25 11:02 pm HK News Desk ದೇಶ - ವಿದೇಶ
ನವದೆಹಲಿ, ಮೇ 11 : ಪಾಕಿಸ್ತಾನ ತನ್ನ ಮೇಲಾಗಿರುವ ದಾಳಿ, ಅದರಿಂದ ಆಗಿರುವ ನಷ್ಟದ ಬಗ್ಗೆ ಹೇಳಿಕೊಂಡಿಲ್ಲವಾದರೂ ಅಲ್ಲಿನ ಸೇನಾ ನೆಲೆ ಹಾಗೂ ಉಗ್ರರ ಶಿಬಿರಗಳ ಮೇಲೆ ದೊಡ್ಡ ಮಟ್ಟದ ದಾಳಿ ಮಾಡಿರುವ ಕುರಿತಾಗಿ ಭಾರತದ ಮೂರು ಸೇನಾ ಪಡೆಯ ಅಧಿಕಾರಿಗಳು ಫೋಟೋ ಸಹಿತ ಸಾಕ್ಷಿ ತೋರಿಸಿದ್ದಾರೆ. ಉಗ್ರರಿಗೆ ಆಶ್ರಯ ಕೊಟ್ಟಿರುವ ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ ಮೂಲಕ ತಕ್ಕ ಉತ್ತರ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.
ಆಪರೇಷನ್ ಸಿಂಧೂರ ಕುರಿತು ಭಾರತದ ಮೂರು ಪಡೆಯ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ಏರ್ ಮಾರ್ಷಲ್ ಎ.ಕೆ ಭಾರ್ತಿ ಮಾತನಾಡಿ, ಖಚಿತ ಮಾಹಿತಿ ಆಧರಿಸಿ ಉಗ್ರರ ಅಡುಗುತಾಣಗಳನ್ನು ಗುರಿಯಾಗಿಸಿ ಹೊಡೆದಿದ್ದೇವೆ. ಉಗ್ರರ ನೆಲೆಗಳನ್ನು ಧ್ವಂಸ ಮಾಡುವಲ್ಲಿ ಭಾರತ ಯಶಸ್ವಿಯಾಗಿದೆ. ನಮ್ಮ ದಾಳಿಯಿಂದ ಹೆದರಿ ಉಗ್ರರು ತಮ್ಮ ನೆಲೆಗಳಿಂದ ಕಾಲ್ಕಿತ್ತಿದ್ದಾರೆ ಎಂದು ಹೇಳಿದ್ದಾರೆ.
ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ನಮ್ಮ ಗುರಿ ಭಯೋತ್ಪಾದಕರ ತಾಣಗಳೇ ಹೊರತು ನಾಗರಿಕರು ಅಲ್ಲ. ಪಾಕಿಸ್ತಾನ ಹಲವು ಉಗ್ರರಿಗೆ ಆಶ್ರಯ ಕೊಟ್ಟಿದೆ. ಉಗ್ರರ ತರಬೇತಿ ಕೇಂದ್ರಗಳನ್ನು ಧ್ವಂಸ ಮಾಡಲಾಗಿದೆ. ಇದರ ಜೊತೆ ಪ್ರಮುಖ ಉಗ್ರ ಎಂದು ಗುರುತಿಸಲಾದ ಅಬ್ದುಲ್ ಮಲೀಕ್ನನ್ನು ಹೊಡೆ ಹಾಕಲಾಗಿದೆ. 100ಕ್ಕೂ ಹೆಚ್ಚು ಉಗ್ರರನ್ನು ಕೊಂದು ಹಾಕಲಾಗಿದೆ ಎಂದು ಹೇಳಿದ್ದಾರೆ.
ಪಾಕಿಸ್ತಾನದ ಬಾವಲ್ಪುರ, ಮುರಿದ್ಕೆ, ಮರ್ಕಜಾ ಪ್ರದೇಶಗಳಿಗೆ ದಾಳಿ ಮಾಡಿ ಉಗ್ರ ನೆಲೆಗಳನ್ನು ಧ್ವಂಸ ಮಾಡಲಾಗಿದೆ. ವಾಯು ಪ್ರದೇಶದಿಂದ ಕ್ಷಿಪಣಿ ಹಾರಿಸಿ ದಾಳಿ ಮಾಡಿದ್ದೇವೆ. ಪಿಒಕೆ, ಪಾಕಿಸ್ತಾನಕ್ಕೆ ನುಗ್ಗಿ 9 ಉಗ್ರರ ನೆಲೆಗಳನ್ನು ಇನ್ನಿಲ್ಲದಂತೆ ಫಿನಿಶ್ ಮಾಡಿದ್ದೇವೆ. ಆಫರೇಷನ್ ಸಿಂಧೂರ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.
ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿರುವ ಕುರಿತು ಫೋಟೋಗಳನ್ನು ಬಿಡುಗಡೆ ಮಾಡಿದ್ದು ದಾಳಿಗೆ ಮೊದಲು ಹಾಗೂ ನಂತರದ ಉಗ್ರರ ನೆಲೆಗಳು ಹೇಗೆ ನಾಶವಾದವು ಎಂಬುದನ್ನು ಫೋಟೋದಲ್ಲಿ ತೋರಿಸಲಾಗಿದೆ. ಪಾಕಿಸ್ತಾನ ಡ್ರೋಣ್, ಫೈಟರ್ ಜೆಟ್ ಮೂಲಕ ಭಾರತದ ಮೇಲೆ ದಾಳಿಗೆ ಯತ್ನಿಸಿದೆ. ಆದರೆ ನಮ್ಮ ಯಾವುದೇ ಸೇನಾ ನೆಲೆಗೂ ತೊಂದರೆ ಎದುರಾಗಿಲ್ಲ ಎಂದು ಹೇಳಿದ್ದಾರೆ.
The Indian Armed Forces on Sunday briefed the nation about the work put into Operation Sindoor that targeted terror infrastructure in PoJK and Pakistan's Punjab province on May 7.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm