ಬ್ರೇಕಿಂಗ್ ನ್ಯೂಸ್
21-05-25 12:57 pm HK News Desk ದೇಶ - ವಿದೇಶ
ನವದೆಹಲಿ, ಮೇ 21 : ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಸ್ಥಗಿತಗೊಳಿಸಿರುವ ಪಾಕ್ ಜೊತೆಗಿನ ಸಿಂಧೂ ಜಲ ಒಪ್ಪಂದ ಕುರಿತಾಗಿ ಮರು ಪರಿಶೀಲನೆಗೆ ಭಾರತ ಸರ್ಕಾರ ಮುಂದಾಗಿದೆ. ಹಳೆಯ ಷರತ್ತುಗಳನ್ನು ಪರಿಗಣಿಸದೆ ತಗ್ಗು ಪ್ರದೇಶಗಳಿಗೆ ನೀರು ಒದಗಿಸಬೇಕೆಂಬ ಅಂತರಾಷ್ಟ್ರೀಯ ನಿಯಮಗಳಡಿ ಒಪ್ಪಂದವನ್ನು ಪುನರ್ ರೂಪಿಸಲು ಭಾರತ ಬಯಸುತ್ತಿದೆ.
ಸಿಂಧೂ ನದಿಯ ನೀರು ಬಿಡುವುದಕ್ಕಾಗಿ ಜಲ ಒಪ್ಪಂದವನ್ನು ಪುನರ್ ಸ್ಥಾಪಿಸಲು ಪಾಕಿಸ್ತಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಗ್ರಹ ಮಾಡುತ್ತಿದೆ. ಆದರೆ ಹಿಂದ ಇದ್ದ ರೀತಿಯಲ್ಲೇ ಒಪ್ಪಂದ ಮಾಡಿಕೊಳ್ಳದೆ ಹಳೆ ನಿಯಮಗಳ ಬಗ್ಗೆ ಪುನರ್ ಪರಿಶೀಲಿಸುವ ಕೆಲಸ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಪಾಕಿಸ್ತಾನ ಭಾರತವನ್ನು ಮನವಿ ಮಾಡಿಕೊಂಡ ನಂತರ ಈ ಬೆಳವಣಿಗೆ ನಡೆದಿದೆ.
ಸೆಪ್ಟೆಂಬರ್ 1960 ರಲ್ಲಿ ಸೌಹಾರ್ದ ನೆಲೆಯಲ್ಲಿ ಮಾಡಲ್ಪಟ್ಟ ಈ ಒಪ್ಪಂದವು ಪಾಕಿಸ್ತಾನದ ಕಡೆಗೆ ಬಹಳ ಉದಾರವಾಗಿತ್ತು ಎಂದು ಭಾರತ ಸರ್ಕಾರ ಹೇಳುತ್ತಿದೆ. ಕಳೆದ ಮೂರು ದಶಕಗಳಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸುವ ಮೂಲಕ ಪಾಕಿಸ್ತಾನ, ಭಾರತದ ಜೊತೆಗಿನ ಸ್ನೇಹ ಮತ್ತು ಸೌಹಾರ್ದತೆ ಮುರಿದಿದೆ. ಹೀಗಾಗಿ ಭಾರತ ಅಂತರರಾಷ್ಟ್ರೀಯ ನಿಯಮಗಳನ್ನು ಉಲ್ಲಂಘಿಸದೆ ಪಾಕ್ ಕಡೆಗೆ ಹರಿಯುವ ನೀರಿನ ಮೇಲೆ ಅಂಕುಶ ಹಾಕಲಿದೆ ಎಂದು ಹೇಳಲಾಗುತ್ತಿದೆ.
50 ಮತ್ತು 60 ರ ದಶಕದಲ್ಲಿ ರೂಪಿಸಲಾದ ಮೂಲ ಒಪ್ಪಂದಕ್ಕಿಂತ ಭಿನ್ನವಾಗಿ, ಪ್ರಸ್ತುತ ಅಗತ್ಯಗಳು, ಹವಾಮಾನ ಬದಲಾವಣೆ, ಹಿಮನದಿಗಳ ಕರಗುವಿಕೆ, ನದಿಗಳಲ್ಲಿ ಲಭ್ಯವಿರುವ ನೀರಿನ ಪ್ರಮಾಣ, ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಶುದ್ಧ ಇಂಧನವನ್ನು ಗಮನದಲ್ಲಿಟ್ಟು ಒಪ್ಪಂದವನ್ನು ಮರು ಸ್ಥಿರೀಕರಿಸುವ ಸಾಧ್ಯತೆಯಿದೆ.
India Keen to Review Indus Water Treaty, Possibility of Amending Old Rules on Water Sharing with Pakistan.
31-07-25 11:20 pm
Bangalore Correspondent
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
Pranab Mohanty, SIT, Dharmasthala; ಎಡಿಜಿಪಿ ಪ್...
30-07-25 06:28 pm
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
31-07-25 10:08 pm
HK News Desk
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
31-07-25 11:16 pm
Mangalore Correspondent
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
Human Skull, Multiple Bones, Dharmasthala, SI...
31-07-25 08:45 pm
31-07-25 06:04 pm
Mangalore Correspondent
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm