ಬ್ರೇಕಿಂಗ್ ನ್ಯೂಸ್
25-05-25 02:14 pm HK News Desk ದೇಶ - ವಿದೇಶ
ಕೊಚ್ಚಿ, ಮೇ.25: ಭಾರತೀಯ ನೌಕಾಪಡೆ ಮತ್ತು ಕರಾವಳಿ ಕಾವಲುಪಡೆಯ ಪ್ರಯತ್ನ ಹೊರತಾಗಿಯೂ ಕೊಚ್ಚಿ ಬಳಿಯ ಸಮುದ್ರ ಮಧ್ಯದಲ್ಲಿ ಬೃಹತ್ ಕಂಟೇನರ್ ಹಡಗೊಂದು ಮುಳುಗಡೆಯಾಗಿದೆ. ಕೋಸ್ಟ್ ಗಾರ್ಡ್ ಹಡಗು ICGS ಸಕ್ಷಮ್ ಮೂಲಕ ಹಡಗಿನ ರಕ್ಷಣೆಗಾಗಿ ಮತ್ತು ತೈಲ ಸೋರಿಕೆಯನ್ನು ನಿಯಂತ್ರಿಸಲು ಪ್ರಯತ್ನ ನಡೆಸಿತ್ತು. ಸರಕುಗಳನ್ನು ಹೊಂದಿದ್ದ ಕಂಟೇನರ್ ಹಡಗು ಶನಿವಾರ ಮಧ್ಯಾಹ್ನದ ವೇಳೆಗೆ 26 ಡಿಗ್ರಿಗಳಷ್ಟು ವಾಲಿತ್ತು.
ಹಡಗಿನಲ್ಲಿ 24 ಮಂದಿ ಸಿಬ್ಬಂದಿ ಇದ್ದರು. ಈ ಪೈಕಿ 21 ಜನರನ್ನು ನಿನ್ನೆ ಸಂಜೆ ಕರಾವಳಿ ಕಾವಲು ಪಡೆ ರಕ್ಷಿಸಿತ್ತು. ಹಡಗು ಮುಳುಗಲು ಪ್ರಾರಂಭಿಸುತ್ತಿದ್ದಂತೆ ನೌಕಾಪಡೆ ಉಳಿದ ಮೂವರನ್ನು ಇಂದು ಬೆಳಗ್ಗೆ ರಕ್ಷಿಸಿ ಸ್ಥಳಾಂತರಿಸಿತು. ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಕೊಚ್ಚಿಯ ಕೋಸ್ಟ್ ಗಾರ್ಡ್ ಪ್ರಧಾನ ಕಚೇರಿಗೆ ಸ್ಥಳಾಂತರಿಸಿದ್ದು, ಕ್ಯಾಪ್ಟನ್ ಮತ್ತು ಇಬ್ಬರು ಎಂಜಿನಿಯರ್ಗಳನ್ನು ಕೊಚ್ಚಿ ನೌಕಾ ನೆಲೆಗೆ ಕರೆದೊಯ್ಯಲಾಗಿದೆ. ಮಾಹಿತಿ ಪ್ರಕಾರ, ಹಡಗು 640 ಕಂಟೇನರ್ ಗಳನ್ನು ಹೊತ್ತೊಯ್ಯುತ್ತಿತ್ತು. ಅಲ್ಲದೆ, 13 ಕಂಟೇನರ್ ಗಳಲ್ಲಿ ಅತ್ಯಂತ ಕಲುಷಿತ ರಾಸಾಯನಿಕಗಳಿದ್ದವು. 84 ಟನ್ ಡೀಸೆಲ್ ಹಾಗೂ 367 ಮೆಟ್ರಿಕ್ ಟನ್ ಫರ್ನೆನ್ಸ್ ಆಯಿಲ್ ಇತ್ತು. ಮಳೆ ಮತ್ತು ಪ್ರವಾಹದಿಂದಾಗಿ ಅವುಗಳೀಗ ಕೇರಳ ಕರಾವಳಿ ಕಡೆಗೆ ಚಲಿಸುವ ಸಾಧ್ಯತೆಯಿದೆ. ಕಡಲ ತೀರ ಮಾಲಿನ್ಯಗೊಳ್ಳುವ ಸಾಧ್ಯತೆ ಇರುವುದರಿಂದ ಮೀನುಗಾರರು ಆತಂಕಗೊಂಡಿದ್ದು ಕೇರಳ ಸರ್ಕಾರ ಮುನ್ನೆಚ್ಚರಿಕೆಯನ್ನೂ ವಹಿಸಿದೆ.




1997 ರಲ್ಲಿ ನಿರ್ಮಿಸಲಾದ ಲೈಬೀರಿಯಾ ಮೂಲದ ಕಂಟೇನರ್ ಹಡಗು MSC ಎಲ್ಸಾ, 184 ಮೀಟರ್ ಉದ್ದ ಮತ್ತು 25.3 ಮೀಟರ್ ಅಗಲವಾಗಿತ್ತು. ತಾಂತ್ರಿಕ ತಜ್ಞರನ್ನು ಹೊತ್ತ ಹಡಗನ್ನು ರಕ್ಷಣಾ ಕಾರ್ಯಾಚರಣೆಗಾಗಿ ಕಳುಹಿಸಲಾಗಿತ್ತು, ಆದರೆ ಸರಕುಗಳನ್ನು ಸ್ಥಳಾಂತರಿಸಲು ಅಥವಾ ಹಡಗನ್ನು ಎಳೆದು ತರಲು ಸಾಧ್ಯವಾಗಲಿಲ್ಲ. ಹೀಗಾಗಿ ನೌಕಾಪಡೆಯು ರಕ್ಷಣಾ ಕಾರ್ಯಾಚರಣೆ ಕೈಬಿಟ್ಟಿದೆ.
Mangalore Massive Container Ship Sinks Near Kochi, 640 Containers and 80 Tons of Diesel Spill into Sea, 24 Crew Rescued.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm