ಬ್ರೇಕಿಂಗ್ ನ್ಯೂಸ್
21-12-20 03:49 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿಸೆಂಬರ್ 21: ಭಾರತದಿಂದ ತಲೆಮರೆಸಿಕೊಂಡು ನಾಪತ್ತೆಯಾಗಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ, ತಾನು ಭಾರತಕ್ಕೆ ಹಿಂದಿರುಗದೇ ಇರುವುದಕ್ಕೆ ಜೀವ ಬೆದರಿಕೆ ಬರುತ್ತಿರುವುದಾಗಿ ಹೇಳಿಕೆ ನೀಡಿದ್ದಾನೆ.
ಈ ಕುರಿತು ವಿಡಿಯೋ ಮೂಲಕ ಹೇಳಿಕೆ ನೀಡಿರುವ ನಿತ್ಯಾನಂದ, ಭಾರತಕ್ಕೆ ತಾನು ಹಿಂದಿರುಗದ್ದಕ್ಕೆ ಜೀವ ಬೆದರಿಕೆ ಬರುತ್ತಿದೆ. ಭಾರತದಲ್ಲಿದ್ದಾಗ ನನ್ನ ವಿರುದ್ಧ ಹಲವರು ಬೆದರಿಕೆ ಹಾಕಿದ್ದರು. ಹತ್ಯೆ ಮಾಡುವ ಪ್ರಯತ್ನಗಳೂ ನಡೆದಿದ್ದವು. ಹೀಗಾಗಿ ಭಾರತವನ್ನು ತೊರೆಯಬೇಕಾಯಿತು ಎಂದು ಹೇಳಿಕೊಂಡಿದ್ದಾರೆ. ಇಷ್ಟಲ್ಲದೇ ತಾನು ಸತ್ತ ನಂತರ ತನ್ನ ಆಸ್ತಿಪಾಸ್ತಿ ಎಲ್ಲವೂ ಭಾರತಕ್ಕೇ ಸೇರುವುದಾಗಿ ತಿಳಿಸಿದ್ದು, ಹಿಂದುತ್ವವನ್ನು ಕಾಪಾಡಲು ಏನು ಬೇಕಾದರೂ ಮಾಡಲು ಸಿದ್ಧ ಎಂದು ಹೇಳಿಕೊಂಡಿದ್ದಾನೆ.

ವಾರದ ಹಿಂದಷ್ಟೆ ನಿತ್ಯಾನಂದ, ಆಸ್ಟ್ರೇಲಿಯಾದಿಂದ ತನ್ನ ಒಡೆತನದ "ಕೈಲಾಸ" ರಾಷ್ಟ್ರಕ್ಕೆ ಉಚಿತ ವಿಮಾನ ಸೇವೆ ಆರಂಭಿಸಿದ್ದಾಗಿ ಹೇಳಿದ್ದ. ಅಲ್ಲದೆ ತನ್ನ ದೇಶಕ್ಕೆ ಬರಲು ವೀಸಾ ಅರ್ಜಿ ಸಲ್ಲಿಸುವಂತೆ ಭಕ್ತರಲ್ಲಿ ಮನವಿಯನ್ನೂ ಮಾಡಿದ್ದ. ಬೆಂಗಳೂರಿನ ಬಿಡದಿಯ ಮಠದಲ್ಲಿದ್ದಾಗ ಎರಡು ವರ್ಷಗಳ ಹಿಂದೆ ನಿತ್ಯಾನಂದ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಬಳಿಕ ದಿಢೀರ್ ಭಾರತದಿಂದ ತಲೆಮರೆಸಿಕೊಂಡು ಪರಾರಿಯಾಗಿದ್ದ. ಇದೀಗ ದಕ್ಷಿಣ ಅಮೆರಿಕದ ಈಕ್ವೆಡಾರ್ ದೇಶದ ಕರಾವಳಿಯ ಒಂದು ಸಣ್ಣ ದ್ವೀಪದಲ್ಲಿ ತನ್ನ ಅನುಯಾಯಿಗಳೊಂದಿಗೆ ನೆಲೆಸಿದ್ದಾನೆ ಎನ್ನಲಾಗುತ್ತಿದೆ. ಅಲ್ಲಿಗೆ ಕೈಲಾಸ ಎಂದು ಹೆಸರಿಟ್ಟಿದ್ದು ಸ್ವಂತ ಬ್ಯಾಂಕ್ ಕೂಡ ಪ್ರಾರಂಭಿಸಿ, ಅದಕ್ಕೆ "ರಿಸರ್ವ್ ಬ್ಯಾಂಕ್ ಆಫ್ ಕೈಲಾಸ" ಎಂಬ ಹೆಸರನ್ನಿಟ್ಟ ಸುದ್ದಿಯಾಗಿದ್ದ. ಇದೀಗ ತನಗೆ ಭಾರತದಿಂದ ಜೀವ ಬೆದರಿಕೆ ಬರುತ್ತಿದೆ ಎಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ.
Fugitive godman and rape accused Nithyananda in a video claimed assassination threats for not returning to India. He said this in a new video that has recently surfaced.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm