ಬ್ರೇಕಿಂಗ್ ನ್ಯೂಸ್
21-12-20 03:49 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿಸೆಂಬರ್ 21: ಭಾರತದಿಂದ ತಲೆಮರೆಸಿಕೊಂಡು ನಾಪತ್ತೆಯಾಗಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ, ತಾನು ಭಾರತಕ್ಕೆ ಹಿಂದಿರುಗದೇ ಇರುವುದಕ್ಕೆ ಜೀವ ಬೆದರಿಕೆ ಬರುತ್ತಿರುವುದಾಗಿ ಹೇಳಿಕೆ ನೀಡಿದ್ದಾನೆ.
ಈ ಕುರಿತು ವಿಡಿಯೋ ಮೂಲಕ ಹೇಳಿಕೆ ನೀಡಿರುವ ನಿತ್ಯಾನಂದ, ಭಾರತಕ್ಕೆ ತಾನು ಹಿಂದಿರುಗದ್ದಕ್ಕೆ ಜೀವ ಬೆದರಿಕೆ ಬರುತ್ತಿದೆ. ಭಾರತದಲ್ಲಿದ್ದಾಗ ನನ್ನ ವಿರುದ್ಧ ಹಲವರು ಬೆದರಿಕೆ ಹಾಕಿದ್ದರು. ಹತ್ಯೆ ಮಾಡುವ ಪ್ರಯತ್ನಗಳೂ ನಡೆದಿದ್ದವು. ಹೀಗಾಗಿ ಭಾರತವನ್ನು ತೊರೆಯಬೇಕಾಯಿತು ಎಂದು ಹೇಳಿಕೊಂಡಿದ್ದಾರೆ. ಇಷ್ಟಲ್ಲದೇ ತಾನು ಸತ್ತ ನಂತರ ತನ್ನ ಆಸ್ತಿಪಾಸ್ತಿ ಎಲ್ಲವೂ ಭಾರತಕ್ಕೇ ಸೇರುವುದಾಗಿ ತಿಳಿಸಿದ್ದು, ಹಿಂದುತ್ವವನ್ನು ಕಾಪಾಡಲು ಏನು ಬೇಕಾದರೂ ಮಾಡಲು ಸಿದ್ಧ ಎಂದು ಹೇಳಿಕೊಂಡಿದ್ದಾನೆ.

ವಾರದ ಹಿಂದಷ್ಟೆ ನಿತ್ಯಾನಂದ, ಆಸ್ಟ್ರೇಲಿಯಾದಿಂದ ತನ್ನ ಒಡೆತನದ "ಕೈಲಾಸ" ರಾಷ್ಟ್ರಕ್ಕೆ ಉಚಿತ ವಿಮಾನ ಸೇವೆ ಆರಂಭಿಸಿದ್ದಾಗಿ ಹೇಳಿದ್ದ. ಅಲ್ಲದೆ ತನ್ನ ದೇಶಕ್ಕೆ ಬರಲು ವೀಸಾ ಅರ್ಜಿ ಸಲ್ಲಿಸುವಂತೆ ಭಕ್ತರಲ್ಲಿ ಮನವಿಯನ್ನೂ ಮಾಡಿದ್ದ. ಬೆಂಗಳೂರಿನ ಬಿಡದಿಯ ಮಠದಲ್ಲಿದ್ದಾಗ ಎರಡು ವರ್ಷಗಳ ಹಿಂದೆ ನಿತ್ಯಾನಂದ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಬಳಿಕ ದಿಢೀರ್ ಭಾರತದಿಂದ ತಲೆಮರೆಸಿಕೊಂಡು ಪರಾರಿಯಾಗಿದ್ದ. ಇದೀಗ ದಕ್ಷಿಣ ಅಮೆರಿಕದ ಈಕ್ವೆಡಾರ್ ದೇಶದ ಕರಾವಳಿಯ ಒಂದು ಸಣ್ಣ ದ್ವೀಪದಲ್ಲಿ ತನ್ನ ಅನುಯಾಯಿಗಳೊಂದಿಗೆ ನೆಲೆಸಿದ್ದಾನೆ ಎನ್ನಲಾಗುತ್ತಿದೆ. ಅಲ್ಲಿಗೆ ಕೈಲಾಸ ಎಂದು ಹೆಸರಿಟ್ಟಿದ್ದು ಸ್ವಂತ ಬ್ಯಾಂಕ್ ಕೂಡ ಪ್ರಾರಂಭಿಸಿ, ಅದಕ್ಕೆ "ರಿಸರ್ವ್ ಬ್ಯಾಂಕ್ ಆಫ್ ಕೈಲಾಸ" ಎಂಬ ಹೆಸರನ್ನಿಟ್ಟ ಸುದ್ದಿಯಾಗಿದ್ದ. ಇದೀಗ ತನಗೆ ಭಾರತದಿಂದ ಜೀವ ಬೆದರಿಕೆ ಬರುತ್ತಿದೆ ಎಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ.
Fugitive godman and rape accused Nithyananda in a video claimed assassination threats for not returning to India. He said this in a new video that has recently surfaced.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm