ಬ್ರೇಕಿಂಗ್ ನ್ಯೂಸ್
26-05-25 10:13 pm HK News Desk ದೇಶ - ವಿದೇಶ
ನವದೆಹಲಿ, ಮೇ 26 : ಭಯೋತ್ಪಾದನೆ ವಿರುದ್ಧ ಭಾರತದ ದೃಢ ಸಂಕಲ್ಪವನ್ನು ಜಾಗತಿಕವಾಗಿ ಎತ್ತಿ ಹಿಡಿಯುವ ಮೂಲಕ ಪಾಕಿಸ್ತಾನದ ನಿಜಬಣ್ಣ ಬಯಲು ಮಾಡುವುದಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ರಷ್ಯಾ ಭೇಟಿ ಬಳಿಕ ಇದೀಗ ಸ್ಲೊವೇನಿಯಾ ದೇಶದಲ್ಲಿದ್ದು, ಇಂದು ಹಲವು ಕಡೆ ಉನ್ನತ ಮಟ್ಟದ ಸಭೆ, ಅಂತಾರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದೆ.
ಸ್ಲೊವೇನಿಯಾ ದೇಶಕ್ಕೆ ಆಗಮಿಸಿದ ನಿಯೋಗವನ್ನು ಅಲ್ಲಿನ ಭಾರತೀಯ ರಾಯಭಾರಿ ಅಧಿಕಾರಿ ಅಮಿತ್ ನಾರಂಗ್ ಅವರು ಬರಮಾಡಿಕೊಂಡಿದ್ದರು. ನಂತರ ಅವರು ಸರ್ವಪಕ್ಷಗಳ ಸಂಸದೀಯ ನಿಯೋಗದ ಜತೆಗೆ ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಸ್ಲೊವೇನಿಯಾ ದೇಶವು ಭಾರತದೊಂದಿಗೆ ಬೆಂಬಲವಾಗಿ ನಿಂತಿದ್ದು, ಉಭಯ ದೇಶಗಳ ನಡುವೆ ವೃದ್ಧಿಸುತ್ತಿರುವ ಬಾಂಧವ್ಯದ ಕುರಿತು ಸಮಗ್ರ ಮಾಹಿತಿ ಹಂಚಿಕೊಂಡರು.
ಇದಾದ ಬಳಿಕ ಸರ್ವಪಕ್ಷದ ನಿಯೋಗವು ರಾಷ್ಟ್ರೀಯ ಅಸೆಂಬ್ಲಿಯ ವಿದೇಶಾಂಗ ನೀತಿ ಸಮಿತಿಯ ಅಧ್ಯಕ್ಷರಾದ ಹೆಚ್.ಇ. ಪ್ರೆಡ್ರಾಗ್ ಬಕೋವಿಕ್ ಮತ್ತು ಭಾರತ-ಸ್ಲೊವೇನಿಯಾ ಪಾರ್ಲಿಮೆಂಟರಿ ಫ್ರೆಂಡ್ ಶಿಪ್ ಗ್ರೂಪ್ ನ ಮಿರ್ಸ್ಲಾವ್ ಗ್ರೆಗೋರಿಕ್ ಅವರೊಂದಿಗೆ ಸಭೆ ನಡೆಸಿ ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ಕುರಿತ ಭಾರತದ ಬಲವಾದ ಬದ್ಧತೆ ಕುರಿತು ಮನವರಿಕೆ ಮಾಡಿಕೊಟ್ಟಿದೆ. ಭಯೋತ್ಪಾದನೆಯನ್ನು ಪೋಷಿಸುತ್ತಿರುವ ಪಾಕಿಸ್ತಾನದ ಇಬ್ಬಗೆಯ ನೀತಿಯ ಕುರಿತು ಭಾರತದ ಕಳವಳವನ್ನು ಸ್ಲೊವೇನಿಯಾದ ಜನಪ್ರತಿನಿಧಿಗಳು ಹಾಗೂ ಚಿಂತಕರಿಗೆ ಸ್ಪಷ್ಟವಾಗಿ ತಿಳಿಸಲಾಯಿತು.
ಇದಾದ ಬಳಿಕ ಸ್ಲೊವೇನಿಯಾದ ಪ್ರಧಾನ ಮಂತ್ರಿ ಕಚೇರಿಯ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಭದ್ರತಾ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ಸಂಯೋಜಕರಾದ ಎಚ್.ಇ. ವೋಜ್ಕೊ ವೋಲ್ಕ್ ಅವರೊಂದಿಗೆ ನಿಯೋಗವು ಮಹತ್ವದ ಸಭೆ ನಡೆಸಿದೆ. ನಂತರ ಸ್ಲೊವೇನಿಯಾದ ವಿದೇಶಾಂಗ ಮತ್ತು ಯುರೋಪಿಯನ್ ವ್ಯವಹಾರಗಳ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಬಾರ್ಬರ ಜ್ವೊಕೆಲ್ಜ್ ಅವರನ್ನು ನಿಯೋಗ ಭೇಟಿ ಮಾಡಿತು. ಈ ವೇಳೆ ಪಹಲ್ಗಾಮ್ ದಾಳಿಯನ್ನು ಸ್ಲೊವೇನಿಯಾ ಸ್ಪಷ್ಟವಾಗಿ ಖಂಡಿಸುವುದರ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಭಾರತವು ಭಯೋತ್ಪಾದನೆ ವಿರುದ್ಧದ ತಳೆದಿರುವ ನಿಲುವಿಗೆ ತನ್ನ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಆ ಮೂಲಕ ಭಯೋತ್ಪಾದನೆ ವಿರುದ್ಧದ ಭಾರತದ ದಿಟ್ಟ ಹೋರಾಟದಲ್ಲಿ ಎಲ್ಲ ರೀತಿಯ ಸಹಕಾರದ ಭರವಸೆಯನ್ನು ನೀಡಿದೆ.
The Indian all-party parliamentary delegation led by DMK MP Kanimozhi Karunanidhi on Monday met leaders of Slovenia, reiterating India’s resolute stance on zero tolerance towards terrorism as part of the global outreach campaign of Operation Sindoor.
05-10-25 07:57 pm
HK News Desk
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
ಮಕ್ಕಳ ಸಿರಪ್ ; ರಾಜ್ಯದಲ್ಲಿ ಪೂರೈಕೆ ಇಲ್ಲ, ಆತಂಕ ಪಡ...
04-10-25 10:54 pm
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm