ಬ್ರೇಕಿಂಗ್ ನ್ಯೂಸ್
21-12-20 04:08 pm Headline Karnataka News Network ದೇಶ - ವಿದೇಶ
ರಿಯಾದ್, ಡಿ.21 : ಬ್ರಿಟನ್ ದೇಶದಲ್ಲಿ ಮತ್ತೆ ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ಎಲ್ಲಾ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ದಿಢೀರ್ ಆಗಿ ಸ್ಥಗಿತಗೊಳಿಸಿದೆ. ಕನಿಷ್ಠ ಒಂದು ವಾರದ ತನಕ ರಸ್ತೆ ಹಾಗೂ ಸಮುದ್ರ ಮೂಲಕ ದೇಶಕ್ಕೆ ಆಗಮಿಸುವುದನ್ನು ನಿರ್ಬಂಧ ಹೇರಿದೆ.
ಈಗಾಗ್ಲೇ ಸೌದಿ ರಾಷ್ಟ್ರಕ್ಕೆ ಆಗಮಿಸಿರುವ ಮತ್ತು ತುರ್ತು ಪ್ರಕರಣಗಳನ್ನು ಹೊರತುಪಡಿಸಿ ಎಲ್ಲ ರೀತಿಯ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಒಂದು ವಾರ ಕಾಲ ರದ್ದುಪಡಿಸಲಾಗಿದ್ದು, ಈ ನಿಷೇಧ ಇನ್ನೊಂದು ವಾರಕ್ಕೆ ವಿಸ್ತರಣೆಗೊಳ್ಳಬಹುದು ಎಂದು ಅಧಿಕೃತ ಸೌದಿ ಪ್ರೆಸ್ ಏಜನ್ಸಿ ಹೇಳಿದೆ. ಆದರೆ, ಈಗಾಗ್ಲೇ ಸೌದಿಯಲ್ಲಿರುವ ಅಂತಾರಾಷ್ಟ್ರೀಯ ವಿಮಾನಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ, ಅವುಗಳಿಗೆ ದೇಶ ಬಿಟ್ಟು ತೆರಳಲು ಅನುಮತಿಸಲಾಗುವುದು ಎಂದು ಏಜನ್ಸಿ ಹೇಳಿದೆ.

ಹೊಸ ರೀತಿಯ ಕೊರೋನಾ ವೈರಸ್ ಸೋಂಕು ತೀವ್ರವಾಗಿ ಹರಡುತ್ತಿದೆ ಎಂದು ಇಂಗ್ಲೆಂಡ್ ಸರಕಾರ ಭಾನುವಾರ ಎಚ್ಚರಿಕೆ ನೀಡಿದ ನಂತರ ಹಲವು ಯುರೋಪಿಯನ್ ದೇಶಗಳು ಬ್ರಿಟನ್ಗೆ ವಿಮಾನ ಹಾರಾಟ ಸ್ಥಗಿತಗೊಳಿಸಿದ್ದು ಇದರ ಬೆನ್ನಿಗೇ ಸೌದಿ ಅರೇಬಿಯಾ ಕೂಡ ಈ ಕ್ರಮ ಕೈಗೊಂಡಿದೆ.
ಯುರೋಪ್ನಿಂದ ಅಥವಾ ಬೇರೆ ಯಾವುದೇ ದೇಶದಿಂದ ಸೌದಿ ಅರೇಬಿಯಾಗೆ ಡಿಸೆಂಬರ್ 8 ಹಾಗೂ ನಂತರದ ದಿನಗಳಲ್ಲಿ ಆಗಮಿಸಿದವರು ಎರಡು ವಾರಗಳ ಕಾಲ ಸ್ವಯಂ ಐಸೊಲೇಶನ್ ಒಳಗಾಗಬೇಕು ಮತ್ತು ಕಡ್ಡಾಯ ಕೋವಿಡ್ ಪರೀಕ್ಷೆ ಮಾಡಿಕೊಳ್ಳಬೇಕು ಎಂದು ಅಲ್ಲಿನ ಜನರಿಗೆ ಸೂಚನೆ ನೀಡಲಾಗಿದೆ.

ಕುವೈತ್ ಕೂಡ ಬ್ರಿಟನ್ನಿಂದ ಆಗಮಿಸುವ ವಿಮಾನಗಳಿಗೆ ನಿರ್ಬಂಧ ಹೇರಿದೆ.
ಬ್ರಿಟನ್ ಸೇರಿದಂತೆ ಯುರೋಪ್ ರಾಷ್ಟ್ರಗಳಲ್ಲಿ ಭಾರೀ ವೇಗವಾಗಿ ಕೊರೊನಾ ಹರಡುತ್ತಿದ್ದು ಐದು ಲಕ್ಷಕ್ಕೂ ಹೆಚ್ಚು ಮಂದಿ ಕೊರೊನಾದಿಂದ ಸಾವು ಕಂಡಿದ್ದಾರೆ. ಸೌದಿ ಅರೇಬಿಯಾದಲ್ಲಿ ಈತನಕ 3.61 ಲಕ್ಷ ಕೊರೊನಾ ಸೋಂಕಿತರು ಕಂಡುಬಂದಿದ್ದು ಕೇವಲ ಆರು ಸಾವಿರ ಮಂದಿ ಸಾವನ್ನಪ್ಪಿದ್ದಾರೆ. ಈ ನಡುವೆ, ಸೌದಿಯಲ್ಲಿ ಮೂರು ಹಂತದ ಕೋವಿಡ್ ವ್ಯಾಕ್ಸಿನೇಶನ್ ಪ್ರಯೋಗ ಆರಂಭಿಸಲಾಗಿದೆ. ಬ್ರಿಟನ್ ಮೂಲದ ಫೈಸರ್ ಬಯೋಟೆಕ್ ಅಭಿವೃದ್ಧಿ ಪಡಿಸಿರುವ ಲಸಿಕೆಯನ್ನು ಸೌದಿಗೆ ತರಿಸಿ, ನೀಡಲಾಗುತ್ತಿದೆ.
Saudi Arabia on Sunday halted international flights and suspended entry through its land and seaports for at least a week after a new fast-spreading strain of coronavirus appeared in Britain.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am