ಬ್ರೇಕಿಂಗ್ ನ್ಯೂಸ್
21-12-20 04:17 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.21: ಇಂಗ್ಲೆಂಡಿನಲ್ಲಿ ಹೊಸ ರೀತಿಯ ಕೊರೊನಾ ವೈರಸ್ ಸೋಂಕು ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಭಾರತದಿಂದ ಬ್ರಿಟನ್ ನಡುವಿನ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಡಿ.31ರ ವರೆಗೂ ಭಾರತ- ಬ್ರಿಟನ್ ನಡುವೆ ವಿಮಾನ ಮತ್ತು ಹಡಗು ಸಂಚಾರವನ್ನು ಸ್ಥಗಿತ ಮಾಡಲಾಗಿದೆ.
ಬ್ರಿಟನ್ ಸೇರಿ ಯುರೋಪಿನಲ್ಲಿ ಮ್ಯೂಟಂಟ್ ವೈರಸ್ ಪತ್ತೆಯಾಗಿದ್ದು, ಇದು ಅತಿ ವೇಗವಾಗಿ ಹರಡುತ್ತಿರುವ ಕಾರಣ ಇಂಗ್ಲೆಂಡ್ ಸರಕಾರ ಕಟ್ಟೆಚ್ಚರ ಘೋಷಣೆ ಮಾಡಿದೆ. ಅಲ್ಲದೆ, ಇಂಗ್ಲೆಂಡಿನಲ್ಲಿ ನಾಲ್ಕನೇ ಹಂತದ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸೌದಿ ಸೇರಿದಂತೆ ಜಗತ್ತಿನ 59 ರಾಷ್ಟ್ರಗಳು ಬ್ರಿಟನ್ ನಡುವಿನ ಸಂಚಾರವನ್ನು ದಿಢೀರ್ ಬಂದ್ ಮಾಡಿದೆ.
ಇದೀಗ ಪ್ಯಾಸೆಂಜರ್ ವಿಮಾನ ಮತ್ತು ಹಡಗು ಸಂಚಾರವನ್ನು ಮಾತ್ರ ಸ್ಥಗಿತಗೊಳಿಸಲಾಗಿದೆ. ಸರಕು ಸಾಗಾಟದ ವಿಮಾನ, ಹಡಗಿನ ಸಂಚಾರಕ್ಕೆ ಸದ್ಯಕ್ಕೆ ಬ್ರೇಕ್ ಹಾಕಿಲ್ಲ. ವೈರಸ್ ಮನುಷ್ಯರಿಂದ ಮನುಷ್ಯರಿಗೆ ಹರಡುತ್ತಿರುವ ಕಾರಣ ದಿಢೀರ್ ಆಗಿ ಪ್ರಯಾಣಿಕರ ಸಂಚಾರಕ್ಕೆ ಮಾತ್ರ ಬ್ರೇಕ್ ಹಾಕಲಾಗಿದೆ. ಈ ನಡುವೆ, ಬ್ರಿಟನ್ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಕೊರೊನಾ ವಿರುದ್ಧ ಲಸಿಕೆ ನೀಡಲು ಆರಂಭಿಸಲಾಗಿದೆ.
ಭಾರತದಲ್ಲಿ ಕೂಡ ಲಸಿಕೆ ನೀಡುವುದಕ್ಕೆ ಸಿದ್ಧತೆ ನಡೆಸಲಾಗಿದೆ. ಜನವರಿಯಿಂದಲೇ ಮೊದಲ ಹಂತದ ಲಸಿಕೆ ನೀಡಲಾಗುವುದು ಎಂದು ಈಗಾಗ್ಲೇ ಕೇಂದ್ರ ಸರಕಾರ ಹೇಳಿದೆ. ಇದಲ್ಲದೆ, ಮ್ಯೂಟಂಟ್ ಕೊರೊನಾ ವೈರಸ್ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ಇದನ್ನೂ ಓದಿ: ಇಂಗ್ಲೆಂಡಿನಲ್ಲಿ ಮತ್ತೆ ಕೊರೊನಾ ಆರ್ಭಟ ; ಸೌದಿಯಿಂದ ಎಲ್ಲ ಅಂತಾರಾಷ್ಟ್ರೀಯ ಸಂಚಾರ ಸ್ಥಗಿತ !!
Flights to and from the UK have been banned till December 31 over a new fast-spreading strain of the coronavirus in that country, the government said today as several countries announced similar moves.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 11:06 pm
Mangalore Correspondent
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm