ಬ್ರೇಕಿಂಗ್ ನ್ಯೂಸ್
21-12-20 04:17 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.21: ಇಂಗ್ಲೆಂಡಿನಲ್ಲಿ ಹೊಸ ರೀತಿಯ ಕೊರೊನಾ ವೈರಸ್ ಸೋಂಕು ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಭಾರತದಿಂದ ಬ್ರಿಟನ್ ನಡುವಿನ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಡಿ.31ರ ವರೆಗೂ ಭಾರತ- ಬ್ರಿಟನ್ ನಡುವೆ ವಿಮಾನ ಮತ್ತು ಹಡಗು ಸಂಚಾರವನ್ನು ಸ್ಥಗಿತ ಮಾಡಲಾಗಿದೆ.
ಬ್ರಿಟನ್ ಸೇರಿ ಯುರೋಪಿನಲ್ಲಿ ಮ್ಯೂಟಂಟ್ ವೈರಸ್ ಪತ್ತೆಯಾಗಿದ್ದು, ಇದು ಅತಿ ವೇಗವಾಗಿ ಹರಡುತ್ತಿರುವ ಕಾರಣ ಇಂಗ್ಲೆಂಡ್ ಸರಕಾರ ಕಟ್ಟೆಚ್ಚರ ಘೋಷಣೆ ಮಾಡಿದೆ. ಅಲ್ಲದೆ, ಇಂಗ್ಲೆಂಡಿನಲ್ಲಿ ನಾಲ್ಕನೇ ಹಂತದ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸೌದಿ ಸೇರಿದಂತೆ ಜಗತ್ತಿನ 59 ರಾಷ್ಟ್ರಗಳು ಬ್ರಿಟನ್ ನಡುವಿನ ಸಂಚಾರವನ್ನು ದಿಢೀರ್ ಬಂದ್ ಮಾಡಿದೆ.

ಇದೀಗ ಪ್ಯಾಸೆಂಜರ್ ವಿಮಾನ ಮತ್ತು ಹಡಗು ಸಂಚಾರವನ್ನು ಮಾತ್ರ ಸ್ಥಗಿತಗೊಳಿಸಲಾಗಿದೆ. ಸರಕು ಸಾಗಾಟದ ವಿಮಾನ, ಹಡಗಿನ ಸಂಚಾರಕ್ಕೆ ಸದ್ಯಕ್ಕೆ ಬ್ರೇಕ್ ಹಾಕಿಲ್ಲ. ವೈರಸ್ ಮನುಷ್ಯರಿಂದ ಮನುಷ್ಯರಿಗೆ ಹರಡುತ್ತಿರುವ ಕಾರಣ ದಿಢೀರ್ ಆಗಿ ಪ್ರಯಾಣಿಕರ ಸಂಚಾರಕ್ಕೆ ಮಾತ್ರ ಬ್ರೇಕ್ ಹಾಕಲಾಗಿದೆ. ಈ ನಡುವೆ, ಬ್ರಿಟನ್ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಕೊರೊನಾ ವಿರುದ್ಧ ಲಸಿಕೆ ನೀಡಲು ಆರಂಭಿಸಲಾಗಿದೆ.

ಭಾರತದಲ್ಲಿ ಕೂಡ ಲಸಿಕೆ ನೀಡುವುದಕ್ಕೆ ಸಿದ್ಧತೆ ನಡೆಸಲಾಗಿದೆ. ಜನವರಿಯಿಂದಲೇ ಮೊದಲ ಹಂತದ ಲಸಿಕೆ ನೀಡಲಾಗುವುದು ಎಂದು ಈಗಾಗ್ಲೇ ಕೇಂದ್ರ ಸರಕಾರ ಹೇಳಿದೆ. ಇದಲ್ಲದೆ, ಮ್ಯೂಟಂಟ್ ಕೊರೊನಾ ವೈರಸ್ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ಇದನ್ನೂ ಓದಿ: ಇಂಗ್ಲೆಂಡಿನಲ್ಲಿ ಮತ್ತೆ ಕೊರೊನಾ ಆರ್ಭಟ ; ಸೌದಿಯಿಂದ ಎಲ್ಲ ಅಂತಾರಾಷ್ಟ್ರೀಯ ಸಂಚಾರ ಸ್ಥಗಿತ !!
Flights to and from the UK have been banned till December 31 over a new fast-spreading strain of the coronavirus in that country, the government said today as several countries announced similar moves.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
06-03-26 09:50 am
HK News Staffer
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm