ಬ್ರೇಕಿಂಗ್ ನ್ಯೂಸ್
06-06-25 11:08 pm HK News Desk ದೇಶ - ವಿದೇಶ
ಶ್ರೀನಗರ, ಜೂನ್ 6 : ಕಾಶ್ಮೀರ ಕಣಿವೆಯನ್ನು ಜಮ್ಮುವಿಗೆ ಸಂಪರ್ಕಿಸುವ ಜಗತ್ತಿನ ಅತಿ ಎತ್ತರದ ಚೆನಾಬ್ ನದಿಯ ಮೇಲಿನ ರೈಲ್ವೇ ಸೇತುವೆಯನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದ್ದಾರೆ. ಇದೇ ವೇಳೆ, ಮೋದಿಯವರು ತ್ರಿವರ್ಣ ಧ್ವಜ ಹಿಡಿದು ಸೇತುವೆಯಲ್ಲಿ ನಡೆದುಕೊಂಡು ಹೋಗಿ ಗಮನ ಸೆಳೆದರು. ಉದ್ಘಾಟನೆಗು ಮುನ್ನ ರೈಲು ಇಂಜಿನ್ನಲ್ಲಿ ಪ್ರಯಾಣಿಸಿ ಮೋದಿ ಅಲ್ಲಿಗೆ ತಲುಪಿದರು.
ಚೆನಾಬ್ ನದಿಗೆ ನಿರ್ಮಿಸಿರುವ ಈ ಸೇತುವೆಯು 272 ಕಿಮೀ ಉದ್ದದ ಉಧಂಪುರ- ಶ್ರೀನಗರ - ಬಾರಾಮುಲ್ಲಾ ರೈಲ್ವೇ ಲಿಂಕ್ ಭಾಗವಾಗಿದೆ. ಈ ಯೋಜನೆಯನ್ನು 43,780 ಕೋಟಿ ವೆಚ್ಚದಲ್ಲಿ ಕಾರ್ಯಗತ ಮಾಡಲಾಗುತ್ತಿದೆ.
ಕತ್ರಾದಿಂದ ಶ್ರೀನಗರಕ್ಕೆ ಮೊದಲ ವಂದೇ ಭಾರತ್ ರೈಲು ಇದಾಗಿದ್ದು ಈ ಸೇತುವೆ ಉದ್ಘಾಟಿಸಿದ್ದಕ್ಕೆ ಪ್ರಧಾನಿ ಮೋದಿ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹರ್ಷ ವ್ಯಕ್ತಪಡಿಸಿದ್ದಾರೆ.
ಕತ್ರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೊಂದಿಗೆ ಸಂವಾದ ನಡೆಸಿದರು. ಈ ವೇಳೆ, ಒಮರ್ ಅಬ್ದುಲ್ಲಾ ಮಾತನಾಡಿ, "ಈ ರೈಲು ಸೇವೆಯ ಬಗ್ಗೆ ಅನೇಕ ಜನರು ಕನಸು ಕಂಡಿದ್ದರು. ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು ನೀವು ಪೂರ್ಣಗೊಳಿಸಿದ್ದೀರಿ, ಮತ್ತು ಕಾಶ್ಮೀರ ಕಣಿವೆ ಈಗ ದೇಶದ ಉಳಿದ ಭಾಗಗಳೊಂದಿಗೆ ನೇರ ಸಂಪರ್ಕ ಪಡೆಯುವಂತಾಗಿದೆ. ಈ ಸಂದರ್ಭದಲ್ಲಿ, ನಾನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಉಲ್ಲೇಖಿಸಿ ಧನ್ಯವಾದ ಹೇಳದಿದ್ದರೆ ಅದು ತಪ್ಪಾಗುತ್ತದೆ.. ಈ ಯೋಜನೆಗೆ ಅಡಿಪಾಯ ಹಾಕಿದಾಗ ನಾನು 8 ನೇ ತರಗತಿಯಲ್ಲಿ ಓದುತ್ತಿದ್ದೆ. ಈಗ ನನಗೆ 55 ವರ್ಷ, ಮತ್ತು ಇದನ್ನು ಅಂತಿಮವಾಗಿ ಉದ್ಘಾಟಿಸಲಾಗಿದೆ. ಅಟಲ್ ಬಿಹಾರಿ ವಾಜಪೇಯಿ ಇದಕ್ಕೆ 'ರಾಷ್ಟ್ರೀಯ ಮಹತ್ವದ ಯೋಜನೆ' ಸ್ಥಾನಮಾನವನ್ನು ನೀಡಿದ್ದು ಮತ್ತು ಅದರ ಬಜೆಟ್ ಹೆಚ್ಚಿಸಿದ್ದಕ್ಕಾಗಿ ಇದು ಸಾಧ್ಯವಾಗಿದೆ. ಇದು ಜಮ್ಮು ಮತ್ತು ಕಾಶ್ಮೀರದ ಜನರಿಗೆ ಎಲ್ಲ ರೀತಿಯಲ್ಲೂ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ.
Prime Minister Narendra Modi on Friday said Jammu and Kashmir Chief Minister Omar Abdullah's childhood dream has been fulfilled with the completion of the Udhampur-Srinagar-Baramulla Rail Link (USBRL) project.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm