ಬ್ರೇಕಿಂಗ್ ನ್ಯೂಸ್
15-06-25 10:29 pm HK News Desk ದೇಶ - ವಿದೇಶ
ಉತ್ತರಾಖಂಡ, ಜೂ 15 : ಇಂದು ಬೆಳ್ಳಂಬೆಳಗ್ಗೆ ಉತ್ತರಾಖಂಡದ ಕೇದಾರ್ನಾಥ್ ಬಳಿ ದುರಂತ ಸಂಭವಿಸಿದೆ. ಹೆಲಿಕಾಪ್ಟರ್ ಪತನಗೊಂಡು ಪೈಲಟ್ ಸೇರಿ ಕನಿಷ್ಠ ಏಳು ಜನರು ಮೃತಪಟ್ಟಿದ್ದಾರೆ.
ಆರ್ಯನ್ ಏವಿಯೇಷನ್ ಪ್ರೈವೇಟ್ ಲಿಮಿಟೆಡ್ಗೆ ಸೇರಿದ ಹೆಲಿಕಾಪ್ಟರ್ ಗೌರಿಕುಂಡ್ ಮತ್ತು ತ್ರಿಜುಗಿನಾರಾಯಣದ ನಡುವೆ ಕೆಡಾರ್ಘಾತಿಯಲ್ಲಿ ಬಿದ್ದಿದೆ. ಹೆಲಿಕಾಪ್ಟರ್ ಬೆಂಕಿಗೆ ಆಹುತಿಯಾಗಿದೆ. ವ್ಯತಿರಿಕ್ತ ಹವಾಮಾನದಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.






ಉತ್ತರಾಖಂಡ ಸಿವಿಲ್ ಏವಿಯೇಷನ್ ಡೆವಲಪ್ಮೆಂಟ್ ಅಥಾರಿಟಿ (UCADA) ಮಾಹಿತಿ ಪ್ರಕಾರ, ಹೆಲಿಕಾಪ್ಟರ್ ಬೆಳಿಗ್ಗೆ 5.30ಕ್ಕೆ ಕೇದಾರನಾಥದಿಂದ ಗುಪ್ತಕಾಶಿಗೆ ಹೊರಟಿತ್ತು. ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಪತನಗೊಂಡಿದೆ ಎಂದು ರುದ್ರಪ್ರಯಾಗ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಹವಾಮಾನ ಸರಿಯಿಲ್ಲದ ಕಾರಣ ಈ ಅಪಘಾತವಾಗಿದ್ದು, ದಟ್ಟವಾದ ಮಂಜು ಕವಿದ ವಾತಾವರಣ ಇತ್ತು ಎಂದು ಹೇಳಿದ್ದಾರೆ.
ಕೇದಾರನಾಥನ ದರ್ಶನ ಮುಗಿಸಿ ಕೇವಲ 10 ನಿಮಿಷದಲ್ಲಿ ಗುಪ್ತಕಾಶಿ ಸೇರಬೇಕಿದ್ದ ಯಾತ್ರಾರ್ಥಿಗಳು ದುರಂತ ಅಂತ್ಯ ಕಂಡಿದ್ದಾರೆ. ದುರ್ಗಮ ಕಾಡಿನಲ್ಲಿ ಬಿದ್ದು ಹೊತ್ತಿ ಉರಿಯುತ್ತಿದ್ದ ಹೆಲಿಕಾಪ್ಟರನ್ನು ಸ್ಥಳೀಯರು ತಮ್ಮ ಜಾನುವಾರುಗಳಿಗೆ ಮೇವು ಕೊಯ್ಯಲು ಹೋದಾಗ ನೋಡಿದ್ದಾರೆ. ಕಳೆದ ಮೇ 2ರಂದು ಕೇದಾರನಾಥ ಮಂದಿರ ತೆರೆದಿದ್ದು, ಈವರೆಗೂ ಲಕ್ಷಾಂತರ ಜನರು ಕೇದಾರನಾಥ ಯಾತ್ರೆ ನಡೆಸಿದ್ದಾರೆ.
ಇನ್ನು ಹೆಲಿಕಾಪ್ಟರ್ನ ಪೈಲಟ್ ಕ್ಯಾಪ್ಟನ್ ರಾಜ್ವೀರ್ ಸಿಂಗ್ ಚೌಹಾಣ್ (37) ಭಾರತೀಯ ವಾಯು ಸೇನೆಯಲ್ಲಿ 15ಕ್ಕೂ ಹೆಚ್ಚು ವರ್ಷಗಳ ಕಾಲ ಸೇವೆಸಲ್ಲಿಸಿದ್ದರು. ಅವರಿಗೆ ವಿವಿಧ ಭೂ ಪ್ರದೇಶಗಳ ಮೇಲೆ ಹೆಲಿಕಾಪ್ಟರ್ ಹಾರಾಟ ನಡೆಸಿದ್ದ ಅನುಭವ ಇತ್ತು ಎಂದು ತಿಳಿದು ಬಂದಿದೆ.
ರಾಜಾವೀರ್ ಸಿಂಗ್ ಅವರ ತಂದೆ ಗೋವಿಂದ್ ಸಿಂಗ್ ಮಗನ ಬಗ್ಗೆ ಮಾತನಾಡಿ, ಹೆಲಿಕಾಪ್ಟರ್ ದುರಂತದ ಮಾಹಿತಿ ಅವರ ಸಹೋದ್ಯೋಗಿಗಳಿಂದ ಸಿಕ್ಕಿದೆ. ನನ್ನ ಮಗ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ. ನನ್ನ ಸೊಸೆ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿದ್ದಾರೆ. ಅವರಿಗೆ ನಾಲ್ಕು ತಿಂಗಳ ಅವಳಿ ಮಕ್ಕಳಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
A helicopter operated by Aryan Aviation crashed in Uttarakhand’s Gaurikund forest area early Sunday morning, killing all seven people on board, including the pilot. The helicopter was flying from Kedarnath Dham to Guptkashi. This marks the fifth helicopter crash in Uttarakhand in just six weeks.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm