ಬ್ರೇಕಿಂಗ್ ನ್ಯೂಸ್
16-06-25 05:29 pm HK News Desk ದೇಶ - ವಿದೇಶ
ಹೈದರಾಬಾದ್, ಜೂನ್ 16 : ಜರ್ಮನಿಯ ಫ್ರಾಂಕ್ ಫರ್ಟ್ ನಿಂದ ಹೈದ್ರಾಬಾದ್ ಬರುತ್ತಿದ್ದ ಲುಫ್ತಾನ್ಸಾ ಏರ್ಲೈನ್ಸ್ ವಿಮಾನವು ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ಭಾರತ ಪ್ರವೇಶ ಮಾಡುವ ಬದಲು ವಾಯು ಮಾರ್ಗದಲ್ಲೇ ಹಿಂತಿರುಗಿ ಜರ್ಮನಿಗೆ ತೆರಳಿದ ವಿದ್ಯಮಾನ ನಡೆದಿದೆ.
ಎಲ್ಎಚ್ 752 ನಂಬರಿನ ಬೋಯಿಂಗ್ 787-09 ಡ್ರೀಮ್ ಲೈನರ್ ವಿಮಾನವು ಜರ್ಮನಿಯ ಕಾಲಮಾನ ಭಾನುವಾರ ಮಧ್ಯಾಹ್ನ 2.30ಕ್ಕೆ ಹೊರಟಿತ್ತು. ಮಧ್ಯರಾತ್ರಿ 1.20ಕ್ಕೆ ಹೈದರಾಬಾದ್ ರಾಜೀವ ಗಾಂಧಿ ಏರ್ಪೋರ್ಟ್ ನಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಜರ್ಮನಿಯಿಂದ ಭಾರತಕ್ಕೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇದೆಯೆಂದು ವಿಮಾನ ನಿಲ್ದಾಣಕ್ಕೆ ಇಮೇಲ್ ಸಂದೇಶ ಬಂದಿದ್ದರಿಂದ, ವಿಮಾನಕ್ಕೆ ಲ್ಯಾಂಡ್ ಆಗಲು ಅನುಮತಿ ನೀಡುವುದಿಲ್ಲ ಎಂದು ಹೈದರಾಬಾದ್ ಏರ್ಪೋರ್ಟ್ ಅಧಿಕಾರಿಗಳು ಸದ್ರಿ ವಿಮಾನ ಸಂಸ್ಥೆಗೆ ಸಂದೇಶ ಕಳುಹಿಸಿದ್ದರು.
ಹಾಗಾಗಿ ಲುಫ್ತಾನ್ಸಾ ಸಂಸ್ಥೆಯವರು ಜರ್ಮನಿ ವಿಮಾನ ಭಾರತೀಯ ವಾಯು ಪ್ರದೇಶ ಪ್ರವೇಶಿಸುವ ಮೊದಲೇ ಡೈವರ್ಟ್ ಮಾಡಿದ್ದರು. ಹೈದ್ರಾಬಾದ್ ಏರ್ಪೋರ್ಟಿಗೆ ಭಾನುವಾರ ಸಂಜೆ 6 ಗಂಟೆ ವೇಳೆಗೆ ಜರ್ಮನಿಯಿಂದ ಬರುತ್ತಿರುವ ವಿಮಾನದಲ್ಲಿ ಬಾಂಬ್ ಇದೆಯೆಂದು ಇಮೇಲ್ ಸಂದೇಶ ಬಂದಿತ್ತು. ಇದರ ಬೆನ್ನಲ್ಲೇ ಬಾಂಬ್ ಬೆದರಿಕೆ ನಿರ್ವಹಣಾ ಸಮಿತಿಯನ್ನು ರೂಪಿಸಿ, ಎಲ್ಲ ಮಾದರಿಯ ಸಿದ್ಧತಾ ಪ್ರಕ್ರಿಯೆಗಳನ್ನು ನಡೆಸಲಾಗಿತ್ತು. ಹೀಗಾಗಿ ಹತ್ತಿರದ ಬೇರಾವುದೇ ಏರ್ಪೋರ್ಟ್ ಅಥವಾ ಹಿಂತಿರುಗಿ ಬಂದಲ್ಲಿಗೇ ತೆರಳುವಂತೆ ಸೂಚಿಸಲಾಗಿತ್ತು.
ಆನಂತರ, ಮರಳಿ ಫ್ರಾಂಕ್ ಫರ್ಟ್ ನಗರಕ್ಕೇ ವಿಮಾನವನ್ನು ಹಿಂತಿರುಗಿಸಲಾಗಿತ್ತು. ನಮಗೆ ಪ್ರಯಾಣಿಕರ ಭದ್ರತೆ ಮೊದಲ ಆದ್ಯತೆಯಾಗಿದ್ದು, ತೊಂದರೆಗೊಳಗಾದ ಪ್ರಯಾಣಿಕರಿಗೆ ಫ್ರಾಂಕ್ ಫರ್ಟ್ ನಲ್ಲಿ ಉಳಿಯುವುದಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೆ, ಎಲ್ಲ ತಪಾಸಣೆ ಮುಗಿಸಿದ ಬಳಿಕ ಇವತ್ತು ಮತ್ತೆ ವಿಮಾನ ಹೈದ್ರಾಬಾದ್ ಗೆ ಮರಳಲಿದೆ ಎಂದು ಲುಫ್ತಾನ್ಸಾ ಕಂಪನಿಯ ವಕ್ತಾರ ತಿಳಿಸಿದ್ದಾರೆ. ಇತ್ತೀಚೆಗೆ ಜರ್ಮನಿಯ ಫುಕೆಟ್ ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೂ ಇದೇ ರೀತಿಯ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಆನಂತರ, ಆ ವಿಮಾನವನ್ನೂ ಮರಳಿ ಫುಕೆಟ್ ಗೆ ಒಯ್ಯಲಾಗಿತ್ತು.
A Lufthansa flight enroute to Hyderabad from Frankfurt was forced to return to its origin on Sunday (June 15) evening following a bomb threat, prompting a full-scale security response.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm