ಬ್ರೇಕಿಂಗ್ ನ್ಯೂಸ್
16-06-25 05:29 pm HK News Desk ದೇಶ - ವಿದೇಶ
ಹೈದರಾಬಾದ್, ಜೂನ್ 16 : ಜರ್ಮನಿಯ ಫ್ರಾಂಕ್ ಫರ್ಟ್ ನಿಂದ ಹೈದ್ರಾಬಾದ್ ಬರುತ್ತಿದ್ದ ಲುಫ್ತಾನ್ಸಾ ಏರ್ಲೈನ್ಸ್ ವಿಮಾನವು ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ಭಾರತ ಪ್ರವೇಶ ಮಾಡುವ ಬದಲು ವಾಯು ಮಾರ್ಗದಲ್ಲೇ ಹಿಂತಿರುಗಿ ಜರ್ಮನಿಗೆ ತೆರಳಿದ ವಿದ್ಯಮಾನ ನಡೆದಿದೆ.
ಎಲ್ಎಚ್ 752 ನಂಬರಿನ ಬೋಯಿಂಗ್ 787-09 ಡ್ರೀಮ್ ಲೈನರ್ ವಿಮಾನವು ಜರ್ಮನಿಯ ಕಾಲಮಾನ ಭಾನುವಾರ ಮಧ್ಯಾಹ್ನ 2.30ಕ್ಕೆ ಹೊರಟಿತ್ತು. ಮಧ್ಯರಾತ್ರಿ 1.20ಕ್ಕೆ ಹೈದರಾಬಾದ್ ರಾಜೀವ ಗಾಂಧಿ ಏರ್ಪೋರ್ಟ್ ನಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಜರ್ಮನಿಯಿಂದ ಭಾರತಕ್ಕೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇದೆಯೆಂದು ವಿಮಾನ ನಿಲ್ದಾಣಕ್ಕೆ ಇಮೇಲ್ ಸಂದೇಶ ಬಂದಿದ್ದರಿಂದ, ವಿಮಾನಕ್ಕೆ ಲ್ಯಾಂಡ್ ಆಗಲು ಅನುಮತಿ ನೀಡುವುದಿಲ್ಲ ಎಂದು ಹೈದರಾಬಾದ್ ಏರ್ಪೋರ್ಟ್ ಅಧಿಕಾರಿಗಳು ಸದ್ರಿ ವಿಮಾನ ಸಂಸ್ಥೆಗೆ ಸಂದೇಶ ಕಳುಹಿಸಿದ್ದರು.
ಹಾಗಾಗಿ ಲುಫ್ತಾನ್ಸಾ ಸಂಸ್ಥೆಯವರು ಜರ್ಮನಿ ವಿಮಾನ ಭಾರತೀಯ ವಾಯು ಪ್ರದೇಶ ಪ್ರವೇಶಿಸುವ ಮೊದಲೇ ಡೈವರ್ಟ್ ಮಾಡಿದ್ದರು. ಹೈದ್ರಾಬಾದ್ ಏರ್ಪೋರ್ಟಿಗೆ ಭಾನುವಾರ ಸಂಜೆ 6 ಗಂಟೆ ವೇಳೆಗೆ ಜರ್ಮನಿಯಿಂದ ಬರುತ್ತಿರುವ ವಿಮಾನದಲ್ಲಿ ಬಾಂಬ್ ಇದೆಯೆಂದು ಇಮೇಲ್ ಸಂದೇಶ ಬಂದಿತ್ತು. ಇದರ ಬೆನ್ನಲ್ಲೇ ಬಾಂಬ್ ಬೆದರಿಕೆ ನಿರ್ವಹಣಾ ಸಮಿತಿಯನ್ನು ರೂಪಿಸಿ, ಎಲ್ಲ ಮಾದರಿಯ ಸಿದ್ಧತಾ ಪ್ರಕ್ರಿಯೆಗಳನ್ನು ನಡೆಸಲಾಗಿತ್ತು. ಹೀಗಾಗಿ ಹತ್ತಿರದ ಬೇರಾವುದೇ ಏರ್ಪೋರ್ಟ್ ಅಥವಾ ಹಿಂತಿರುಗಿ ಬಂದಲ್ಲಿಗೇ ತೆರಳುವಂತೆ ಸೂಚಿಸಲಾಗಿತ್ತು.
ಆನಂತರ, ಮರಳಿ ಫ್ರಾಂಕ್ ಫರ್ಟ್ ನಗರಕ್ಕೇ ವಿಮಾನವನ್ನು ಹಿಂತಿರುಗಿಸಲಾಗಿತ್ತು. ನಮಗೆ ಪ್ರಯಾಣಿಕರ ಭದ್ರತೆ ಮೊದಲ ಆದ್ಯತೆಯಾಗಿದ್ದು, ತೊಂದರೆಗೊಳಗಾದ ಪ್ರಯಾಣಿಕರಿಗೆ ಫ್ರಾಂಕ್ ಫರ್ಟ್ ನಲ್ಲಿ ಉಳಿಯುವುದಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೆ, ಎಲ್ಲ ತಪಾಸಣೆ ಮುಗಿಸಿದ ಬಳಿಕ ಇವತ್ತು ಮತ್ತೆ ವಿಮಾನ ಹೈದ್ರಾಬಾದ್ ಗೆ ಮರಳಲಿದೆ ಎಂದು ಲುಫ್ತಾನ್ಸಾ ಕಂಪನಿಯ ವಕ್ತಾರ ತಿಳಿಸಿದ್ದಾರೆ. ಇತ್ತೀಚೆಗೆ ಜರ್ಮನಿಯ ಫುಕೆಟ್ ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೂ ಇದೇ ರೀತಿಯ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಆನಂತರ, ಆ ವಿಮಾನವನ್ನೂ ಮರಳಿ ಫುಕೆಟ್ ಗೆ ಒಯ್ಯಲಾಗಿತ್ತು.
A Lufthansa flight enroute to Hyderabad from Frankfurt was forced to return to its origin on Sunday (June 15) evening following a bomb threat, prompting a full-scale security response.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am