ಬ್ರೇಕಿಂಗ್ ನ್ಯೂಸ್
25-06-25 11:10 am HK News Desk ದೇಶ - ವಿದೇಶ
ನವದೆಹಲಿ, ಜೂನ್ 24 : ಇಸ್ರೇಲ್ ಮತ್ತು ಇರಾನ್ ಮಧ್ಯೆ ಕದನ ವಿರಾಮ ಘೋಷಿಸಿದ್ದರೂ ಉಭಯ ದೇಶಗಳು ಯುದ್ಧದಲ್ಲಿ ತೊಡಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕೂಡಲೇ ಸೇನಾ ಕಾರ್ಯಾಚರಣೆ ನಿಲ್ಲಿಸಿ ಎಂದು ಇಸ್ರೇಲ್ ಗೆ ಎಚ್ಚರಿಕೆ ನೀಡಿದ್ದಾರೆ.
12 ದಿನಗಳ ಇಸ್ರೇಲ್ ಮತ್ತು ಇರಾನ್ ಯುದ್ಧಕ್ಕೆ ಮಂಗಳವಾರ ಬೆಳಗ್ಗೆ ಅಮೆರಿಕ ಕದನ ವಿರಾಮ ಘೋಷಣೆ ಮಾಡಿತ್ತು. ಘೋಷಣೆಯ ಬೆನ್ನಲ್ಲೇ ಇರಾನ್ ಅದನ್ನು ಉಲ್ಲಂಘಿಸಿದ್ದು ಇಸ್ರೇಲ್ ಮೇಲೆ ಅಟ್ಯಾಕ್ ಮಾಡಿತ್ತು. ಇದೇ ನೆಪವೊಡ್ಡಿ ಇಸ್ರೇಲ್ ಮರು ದಾಳಿಗೆ ಮುಂದಾಗಿದ್ದು ತಕ್ಕ ಪ್ರತ್ಯುತ್ತರ ನೀಡುವಂತೆ ಸೇನಾ ಪಡೆಗೆ ಸೂಚಿಸಿದೆ. ದಕ್ಷಿಣ ಇಸ್ರೇಲಿನ ಬೀರ್ ಶೆವಾದ ಮೇಲೆ ಕ್ಷಿಪಣಿ ದಾಳಿಯಾಗಿದ್ದರಿಂದ ಏಳು ಮಂದಿ ಸಾವು ಕಂಡಿದ್ದಾರೆ.
ಈ ಮಧ್ಯೆ ಇರಾನ್ ಮೇಲೆ ಬಾಂಬ್ ದಾಳಿ ನಡೆಸದಂತೆ ಇಸ್ರೇಲ್ಗೆ ತಮ್ಮ ಟ್ರುತ್ ಸೋಶಿಯಲ್ ಪೋಸ್ಟ್ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾಕೀತು ಮಾಡಿದ್ದಾರೆ. ನೀವು ಈಗ ಇರಾನ್ ಮೇಲೆ ಬಾಂಬ್ ದಾಳಿ ನಡೆಸಿದರೆ, ಬಹುದೊಡ್ಡ ಯುದ್ಧ ವಿರಾಮ ಉಲ್ಲಂಘನೆಯಾಗಲಿದೆ. ನಿಮ್ಮ ವಿಮಾನಗಳನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದು ಟ್ರಂಪ್ ಸೂಚಿಸಿದ್ದಾರೆ.
ಅಮೆರಿಕ ಕದನ ವಿರಾಮ ಘೋಷಣೆ ಮಾಡಿದ್ದರೂ, ಈ ಬಗ್ಗೆ ಯಾವುದೇ ಅಧಿಕೃತ ಒಡಂಬಡಿಕೆ ಆಗಿಲ್ಲ. ಟೆಹ್ರಾನ್ ಕಡೆಯಿಂದ ಬೆಳಗ್ಗೆ ನಾಲ್ಕು ಗಂಟೆಯಿಂದ ಯಾವುದೇ ದಾಳಿ ಆಗಿಲ್ಲ. ಇಸ್ರೇಲ್ ಇದನ್ನು ಉಲ್ಲಂಘಿಸಿ ದಾಳಿ ನಡೆಸಿದರೆ ನಾವು ಪ್ರತ್ಯುತ್ತರ ನೀಡಲು ಮುಕ್ತವಾಗಿದ್ದೇವೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಹೇಳಿದ್ದಾರೆ. ಇರಾನ್ ಮಾತುಕತೆ ಮೂಲಕ ಬಗೆಹರಿಸಲು ರೆಡಿಯಾಗಿದೆ ಎಂಬುದನ್ನು ಈ ಮೂಲಕ ತಿಳಿಸುತ್ತೇವೆ ಎಂದು ಅರಾಗ್ಚಿ ಹೇಳಿದ್ದಾರೆ.
Despite the announcement of a ceasefire between Israel and Iran, hostilities continue to escalate, drawing sharp criticism from U.S. President Donald Trump, who has urged Israel to halt military operations immediately.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm