ಬ್ರೇಕಿಂಗ್ ನ್ಯೂಸ್
25-06-25 11:10 am HK News Desk ದೇಶ - ವಿದೇಶ
ನವದೆಹಲಿ, ಜೂನ್ 24 : ಇಸ್ರೇಲ್ ಮತ್ತು ಇರಾನ್ ಮಧ್ಯೆ ಕದನ ವಿರಾಮ ಘೋಷಿಸಿದ್ದರೂ ಉಭಯ ದೇಶಗಳು ಯುದ್ಧದಲ್ಲಿ ತೊಡಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕೂಡಲೇ ಸೇನಾ ಕಾರ್ಯಾಚರಣೆ ನಿಲ್ಲಿಸಿ ಎಂದು ಇಸ್ರೇಲ್ ಗೆ ಎಚ್ಚರಿಕೆ ನೀಡಿದ್ದಾರೆ.
12 ದಿನಗಳ ಇಸ್ರೇಲ್ ಮತ್ತು ಇರಾನ್ ಯುದ್ಧಕ್ಕೆ ಮಂಗಳವಾರ ಬೆಳಗ್ಗೆ ಅಮೆರಿಕ ಕದನ ವಿರಾಮ ಘೋಷಣೆ ಮಾಡಿತ್ತು. ಘೋಷಣೆಯ ಬೆನ್ನಲ್ಲೇ ಇರಾನ್ ಅದನ್ನು ಉಲ್ಲಂಘಿಸಿದ್ದು ಇಸ್ರೇಲ್ ಮೇಲೆ ಅಟ್ಯಾಕ್ ಮಾಡಿತ್ತು. ಇದೇ ನೆಪವೊಡ್ಡಿ ಇಸ್ರೇಲ್ ಮರು ದಾಳಿಗೆ ಮುಂದಾಗಿದ್ದು ತಕ್ಕ ಪ್ರತ್ಯುತ್ತರ ನೀಡುವಂತೆ ಸೇನಾ ಪಡೆಗೆ ಸೂಚಿಸಿದೆ. ದಕ್ಷಿಣ ಇಸ್ರೇಲಿನ ಬೀರ್ ಶೆವಾದ ಮೇಲೆ ಕ್ಷಿಪಣಿ ದಾಳಿಯಾಗಿದ್ದರಿಂದ ಏಳು ಮಂದಿ ಸಾವು ಕಂಡಿದ್ದಾರೆ.
ಈ ಮಧ್ಯೆ ಇರಾನ್ ಮೇಲೆ ಬಾಂಬ್ ದಾಳಿ ನಡೆಸದಂತೆ ಇಸ್ರೇಲ್ಗೆ ತಮ್ಮ ಟ್ರುತ್ ಸೋಶಿಯಲ್ ಪೋಸ್ಟ್ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾಕೀತು ಮಾಡಿದ್ದಾರೆ. ನೀವು ಈಗ ಇರಾನ್ ಮೇಲೆ ಬಾಂಬ್ ದಾಳಿ ನಡೆಸಿದರೆ, ಬಹುದೊಡ್ಡ ಯುದ್ಧ ವಿರಾಮ ಉಲ್ಲಂಘನೆಯಾಗಲಿದೆ. ನಿಮ್ಮ ವಿಮಾನಗಳನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದು ಟ್ರಂಪ್ ಸೂಚಿಸಿದ್ದಾರೆ.
ಅಮೆರಿಕ ಕದನ ವಿರಾಮ ಘೋಷಣೆ ಮಾಡಿದ್ದರೂ, ಈ ಬಗ್ಗೆ ಯಾವುದೇ ಅಧಿಕೃತ ಒಡಂಬಡಿಕೆ ಆಗಿಲ್ಲ. ಟೆಹ್ರಾನ್ ಕಡೆಯಿಂದ ಬೆಳಗ್ಗೆ ನಾಲ್ಕು ಗಂಟೆಯಿಂದ ಯಾವುದೇ ದಾಳಿ ಆಗಿಲ್ಲ. ಇಸ್ರೇಲ್ ಇದನ್ನು ಉಲ್ಲಂಘಿಸಿ ದಾಳಿ ನಡೆಸಿದರೆ ನಾವು ಪ್ರತ್ಯುತ್ತರ ನೀಡಲು ಮುಕ್ತವಾಗಿದ್ದೇವೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಹೇಳಿದ್ದಾರೆ. ಇರಾನ್ ಮಾತುಕತೆ ಮೂಲಕ ಬಗೆಹರಿಸಲು ರೆಡಿಯಾಗಿದೆ ಎಂಬುದನ್ನು ಈ ಮೂಲಕ ತಿಳಿಸುತ್ತೇವೆ ಎಂದು ಅರಾಗ್ಚಿ ಹೇಳಿದ್ದಾರೆ.
Despite the announcement of a ceasefire between Israel and Iran, hostilities continue to escalate, drawing sharp criticism from U.S. President Donald Trump, who has urged Israel to halt military operations immediately.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am