ಬ್ರೇಕಿಂಗ್ ನ್ಯೂಸ್
25-06-25 11:10 am HK News Desk ದೇಶ - ವಿದೇಶ
ನವದೆಹಲಿ, ಜೂನ್ 24 : ಇಸ್ರೇಲ್ ಮತ್ತು ಇರಾನ್ ಮಧ್ಯೆ ಕದನ ವಿರಾಮ ಘೋಷಿಸಿದ್ದರೂ ಉಭಯ ದೇಶಗಳು ಯುದ್ಧದಲ್ಲಿ ತೊಡಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕೂಡಲೇ ಸೇನಾ ಕಾರ್ಯಾಚರಣೆ ನಿಲ್ಲಿಸಿ ಎಂದು ಇಸ್ರೇಲ್ ಗೆ ಎಚ್ಚರಿಕೆ ನೀಡಿದ್ದಾರೆ.
12 ದಿನಗಳ ಇಸ್ರೇಲ್ ಮತ್ತು ಇರಾನ್ ಯುದ್ಧಕ್ಕೆ ಮಂಗಳವಾರ ಬೆಳಗ್ಗೆ ಅಮೆರಿಕ ಕದನ ವಿರಾಮ ಘೋಷಣೆ ಮಾಡಿತ್ತು. ಘೋಷಣೆಯ ಬೆನ್ನಲ್ಲೇ ಇರಾನ್ ಅದನ್ನು ಉಲ್ಲಂಘಿಸಿದ್ದು ಇಸ್ರೇಲ್ ಮೇಲೆ ಅಟ್ಯಾಕ್ ಮಾಡಿತ್ತು. ಇದೇ ನೆಪವೊಡ್ಡಿ ಇಸ್ರೇಲ್ ಮರು ದಾಳಿಗೆ ಮುಂದಾಗಿದ್ದು ತಕ್ಕ ಪ್ರತ್ಯುತ್ತರ ನೀಡುವಂತೆ ಸೇನಾ ಪಡೆಗೆ ಸೂಚಿಸಿದೆ. ದಕ್ಷಿಣ ಇಸ್ರೇಲಿನ ಬೀರ್ ಶೆವಾದ ಮೇಲೆ ಕ್ಷಿಪಣಿ ದಾಳಿಯಾಗಿದ್ದರಿಂದ ಏಳು ಮಂದಿ ಸಾವು ಕಂಡಿದ್ದಾರೆ.
ಈ ಮಧ್ಯೆ ಇರಾನ್ ಮೇಲೆ ಬಾಂಬ್ ದಾಳಿ ನಡೆಸದಂತೆ ಇಸ್ರೇಲ್ಗೆ ತಮ್ಮ ಟ್ರುತ್ ಸೋಶಿಯಲ್ ಪೋಸ್ಟ್ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾಕೀತು ಮಾಡಿದ್ದಾರೆ. ನೀವು ಈಗ ಇರಾನ್ ಮೇಲೆ ಬಾಂಬ್ ದಾಳಿ ನಡೆಸಿದರೆ, ಬಹುದೊಡ್ಡ ಯುದ್ಧ ವಿರಾಮ ಉಲ್ಲಂಘನೆಯಾಗಲಿದೆ. ನಿಮ್ಮ ವಿಮಾನಗಳನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದು ಟ್ರಂಪ್ ಸೂಚಿಸಿದ್ದಾರೆ.
ಅಮೆರಿಕ ಕದನ ವಿರಾಮ ಘೋಷಣೆ ಮಾಡಿದ್ದರೂ, ಈ ಬಗ್ಗೆ ಯಾವುದೇ ಅಧಿಕೃತ ಒಡಂಬಡಿಕೆ ಆಗಿಲ್ಲ. ಟೆಹ್ರಾನ್ ಕಡೆಯಿಂದ ಬೆಳಗ್ಗೆ ನಾಲ್ಕು ಗಂಟೆಯಿಂದ ಯಾವುದೇ ದಾಳಿ ಆಗಿಲ್ಲ. ಇಸ್ರೇಲ್ ಇದನ್ನು ಉಲ್ಲಂಘಿಸಿ ದಾಳಿ ನಡೆಸಿದರೆ ನಾವು ಪ್ರತ್ಯುತ್ತರ ನೀಡಲು ಮುಕ್ತವಾಗಿದ್ದೇವೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಹೇಳಿದ್ದಾರೆ. ಇರಾನ್ ಮಾತುಕತೆ ಮೂಲಕ ಬಗೆಹರಿಸಲು ರೆಡಿಯಾಗಿದೆ ಎಂಬುದನ್ನು ಈ ಮೂಲಕ ತಿಳಿಸುತ್ತೇವೆ ಎಂದು ಅರಾಗ್ಚಿ ಹೇಳಿದ್ದಾರೆ.
Despite the announcement of a ceasefire between Israel and Iran, hostilities continue to escalate, drawing sharp criticism from U.S. President Donald Trump, who has urged Israel to halt military operations immediately.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm