ಬ್ರೇಕಿಂಗ್ ನ್ಯೂಸ್
02-07-25 11:05 pm HK News Desk ದೇಶ - ವಿದೇಶ
ಮುಂಬೈ, ಜುಲೈ 2 : PES ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಿಲ್ಲ ಎಂದು ಪ್ರಾಂಶುಪಾಲರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ 6 ಮಂದಿಯ ವಿರುದ್ದ ಪ್ರಕರಣ ದಾಖಲಾಗಿದೆ.
ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿರುವ ಪೀಪಲ್ಸ್ ಎಜುಕೇಶನ್ ಸೊಸೈಟಿಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಕಾಲೇಜಿನ ಪ್ರಾಂಶುಪಾಲರ ದೂರಿನ ಮೇರೆಗೆ 6 ಮಂದಿಯ ವಿರುದ್ಧ ಪೊಲೀಸರು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಿದ್ದಾರೆ.
ಸೋಮವಾರ ಪೀಪಲ್ಸ್ ಎಜುಕೇಶನ್ ಸೊಸೈಟಿಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಅಭಿಜಿತ್ ವಾಡೇಕರ್ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿಗಳ ವಿರುದ್ಧ ಬಿಎನ್ಎಸ್ ಸೆಕ್ಷನ್ 189 (2) (ಕಾನೂನುಬಾಹಿರ ಸಭೆ), 333 (ಅತಿಕ್ರಮಣ), 352 (ಶಾಂತಿ ಭಂಗವನ್ನು ಪ್ರಚೋದಿಸಲು ಉದ್ದೇಶಪೂರ್ವಕ ಅವಮಾನ) ಮತ್ತು 351 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಪೀಪಲ್ಸ್ ಎಜುಕೇಶನ್ ಸೊಸೈಟಿ (PES)ಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಅಭಿಜಿತ್ ವಾಡೇಕರ್, 'ಕಾಲೇಜು ಅಧಿಕಾರಿಗಳು ಅಂತಹ ಯಾವುದೇ ನಿಷೇಧ ಹೇರಿಲ್ಲ. ಕಾಲೇಜಿನಲ್ಲಿ ಹಿಜಾಬ್ ಗೆ ಅವಕಾಶವಿದೆ. ಪರೀಕ್ಷೆಯ ಸಮಯದಲ್ಲಿ ಮಾತ್ರ ನಿರ್ಬಂಧಗಳನ್ನು ವಿಧಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳುವಾಗ ತಮ್ಮ ಮುಖವನ್ನು ಕಾಣುವಂತೆ ಇಟ್ಟುಕೊಳ್ಳಬೇಕು ಎಂದರು.
ಪರೀಕ್ಷೆ ನಡೆಯುತ್ತಿರುವಾಗ ಮಧ್ಯಾಹ್ನ 1.45 ರ ಸುಮಾರಿಗೆ ಕಾಲೇಜಿಗೆ ಪ್ರವೇಶಿಸಿದ ಆರು ಪುರುಷರ ಗುಂಪು, "ನಮ್ಮ ಜನರಿಗೆ ಹಿಜಾಬ್ ಧರಿಸಲು ನೀವು ಏಕೆ ಅವಕಾಶ ನೀಡುತ್ತಿಲ್ಲ" ಎಂದು ಕೇಳಿದರು. ಬಳಿಕ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದ್ದಾರೆ ಮತ್ತು ಘೋಷಣೆಗಳನ್ನು ಕೂಗುತ್ತಾ ಬೆದರಿಕೆ ಹಾಕಿದ್ದಾರೆ ಎಂದರು.
An FIR has been registered against six individuals for allegedly issuing death threats to the principal of PES Engineering College in Aurangabad, Maharashtra, over the college’s examination dress code policy concerning the hijab.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am