ಬ್ರೇಕಿಂಗ್ ನ್ಯೂಸ್
10-07-25 01:00 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 10: ತನ್ನ ರಾಜಕೀಯ ನಿವೃತ್ತಿಯ ಬಳಿಕ ವೇದ, ಉಪನಿಷತ್ ಪಾರಾಯಣ ಮಾಡುತ್ತ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಕೇಂದ್ರ ಸಚಿವ ಅಮಿತ್ ಷಾ ಹೇಳಿದ್ದಾರೆ.
ರಾಜಸ್ಥಾನದಲ್ಲಿ ಸಹಕಾರ್ ಸಂವಾದ್ ಕಾರ್ಯಕ್ರಮದಲ್ಲಿ ಮಾತನಾಡಿದ ವೇಳೆ ಈ ಮಾತುಗಳನ್ನು ಹೇಳಿದ್ದಾರೆ. ನನ್ನ ನಿವೃತ್ತಿ ಜೀವನದ ಬಗೆಗೂ ಯೋಚಿಸಿದ್ದೇನೆ. ರಾಜಕೀಯದಿಂದ ನಿವೃತ್ತಿ ಪಡೆದ ಬಳಿಕ ಮುಂದಿನ ಜೀವನವನ್ನು ವೇದಗಳ ಪಠಣ, ಉಪನಿಷತ್ ಪಾರಾಯಣದಲ್ಲಿ ಕಳೆಯಬೇಕು. ಜೊತೆಗೆ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಎಂದುಕೊಂಡಿದ್ದೇನೆ ಎಂದು ಹೇಳಿದ್ದಾರೆ.
ಪುಸ್ತಕ ಓದುವ ಹವ್ಯಾಸ ಹೊಂದಿದ್ದು ಸುಮಾರು 8,000 ಪುಸ್ತಕ ನನ್ನ ಬಳಿಯಿವೆ. ಸದ್ಯ ಅವುಗಳನ್ನು ಓದಲು ಸಮಯವಿಲ್ಲ. ನಿವೃತ್ತಿ ಬಳಿಕ ಪುಸ್ತಕಗಳನ್ನು ಓದಿ ಪೂರೈಸಬೇಕು ಎಂದುಕೊಂಡಿದ್ದೇನೆ. ಜೊತೆಗೆ ಶಾಸ್ತ್ರೀಯ ಸಂಗೀತ ಕೇಳಿಕೊಂಡು ನಿವೃತ್ತ ಜೀವನ ಕಳೆಯಬೇಕು ಎಂದು ಹೇಳಿಕೊಂಡಿದ್ದಾರೆ.
ರಾಸಾಯನಿಕ ಗೊಬ್ಬರಗಳನ್ನು ಬಳಸಿ ಬೆಳೆದ ಗೋಧಿ ಮನುಷ್ಯನಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದರಿಂದ ಬಿಪಿ (ರಕ್ತದೊತ್ತಡ), ಮಧುಮೇಹ, ಥೈರಾಯ್ಡ್ ಮತ್ತು ಕ್ಯಾನ್ಸರ್ನಂತಹ ಮಾರಕ ಕಾಯಿಲೆಗಳು ಬರುತ್ತವೆ. ನೈಸರ್ಗಿಕ ಕೃಷಿ ದೇಹವನ್ನು ರೋಗ ಮುಕ್ತಗೊಳಿಸಲು ಸಹಾಯ ಮಾಡುತ್ತದೆ. ಮಾತ್ರವಲ್ಲದೆ ಔಷಧಿಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ. ಈಗಾಗಲೇ ಕೃಷಿ ಜಮೀನು ಹೊಂದಿದ್ದು ಸಾವಯವ ಕೃಷಿ ಇದೆ. ಅದನ್ನು ಮುಂದುವರಿಸುತ್ತೇನೆ ಎಂದು ಅಮಿತ್ ಷಾ ಹೇಳಿದ್ದಾರೆ.
t's often said that politicians never retire. But after a lifetime of steering political tides, even stalwarts seemingly ponder the prospect of a slower life. Union Home Minister Amit Shah, one of India's busiest and most-active politicians, on Wednesday shared an unusually personal glimpse into his post-retirement plans
11-07-25 06:36 pm
Bangalore Correspondent
ಸಿಎಂ ಬದಲಾವಣೆ ಎಲ್ಲ ಮುಗಿದ ಕಥೆ, ಸೆಪ್ಟೆಂಬರ್ನಲ್ಲಿ...
11-07-25 05:41 pm
24 ಗಂಟೆಯಲ್ಲಿ ಭಟ್ಕಳ ನಗರವನ್ನು ಸ್ಫೋಟಿಸುತ್ತೇನೆ ;...
11-07-25 04:36 pm
Heart Attack, Belagavi, Bidar: ಹೃದಯಾಘಾತ ; ರಸ್...
11-07-25 04:22 pm
ನಾನೇ ಐದು ವರ್ಷಕ್ಕೆ ಸಿಎಂ ; ದೆಹಲಿ ಅಂಗಳದಲ್ಲೂ ಹೂಂಕ...
10-07-25 09:53 pm
11-07-25 12:08 pm
HK News Desk
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
Bangle Seller, Changur Baba Arrest, Uttar Pra...
10-07-25 03:24 pm
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
11-07-25 08:55 pm
Mangalore Correspondent
Dc Mangalore, Darshan; ಯುವ ಜಿಲ್ಲಾಧಿಕಾರಿ ಚುರುಕ...
10-07-25 07:23 pm
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
11-07-25 10:10 pm
HK News Desk
ಮಂಗಳೂರಿಗೆ ಮಧ್ಯಪ್ರದೇಶ, ಮಹಾರಾಷ್ಟ್ರದಿಂದ ಡ್ರಗ್ಸ್...
11-07-25 07:13 pm
Rape case in Ramanagar: 14 ವರ್ಷದ ಬಾಲಕಿ ಮೇಲೆ ಆ...
10-07-25 08:09 pm
Kerala Couple, Chit Fund Scam; ಚಿಟ್ ಫಂಡ್ ಹೆಸರ...
10-07-25 01:05 pm
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm