ಬ್ರೇಕಿಂಗ್ ನ್ಯೂಸ್
14-07-25 03:24 pm HK News Desk ದೇಶ - ವಿದೇಶ
ಲಕ್ನೋ, ಜುಲೈ 14 : ಉತ್ತರ ಪ್ರದೇಶದಲ್ಲಿ ಸಿಕ್ಕಿಬಿದ್ದಿರುವ ಸಾಮೂಹಿಕ ಮತಾಂತರಿ ಜಮಾಲುದ್ದೀನ್ ಅಲಿಯಾಸ್ ಛಂಗೂರ್ ಬಾಬಾ, ಹಿಂದೂ ಯುವತಿಯರಿಗೆ ಬಲೆ ಬೀಸಿ ಲವ್ ಜಿಹಾದ್ ನಡೆಸಲು 1,000 ಮುಸ್ಲಿಂ ಯುವಕರನ್ನು ನೇಮಿಸಿದ್ದ ಎಂಬ ಸ್ಫೋಟಕ ವಿಷಯ ಬೆಳಕಿಗೆ ಬಂದಿದೆ.
ಬಡವರು, ವಿಧವೆಯರು ಮತ್ತು ದುರ್ಬಲ ಮನಸ್ಥಿತಿಯ ಮಹಿಳೆಯರನ್ನು ಗುರಿಯಾಗಿರಿಸಿ ಇವರ ತಂಡ ಮತಾಂತರ ನಡೆಸುತ್ತಿತ್ತು. ಇದಕ್ಕಾಗಿ ಕಳೆದ ಮೂರು ವರ್ಷಗಳಲ್ಲಿ ಮುಸ್ಲಿಂ ರಾಷ್ಟ್ರಗಳಿಂದ ಸುಮಾರು 500 ಕೋಟಿ ರೂ. ದೇಣಿಗೆ ಪಡೆದಿದ್ದ ಎಂಬ ಮಾಹಿತಿಯೂ ತನಿಖೆಯಲ್ಲಿ ಪತ್ತೆಯಾಗಿದೆ. ಯುವಕರನ್ನು ಬಳಸಿಕೊಂಡು ಬಡ ಕುಟುಂಬದ ಯುವತಿಯರಿಗೆ, ವಿಧವೆಯರಿಗೆ ಪ್ರೇಮ, ವಿವಾಹ, ಮನೆಗಳನ್ನು ನಿರ್ಮಿಸಿಕೊಡುವ ಆಸೆಗಳನ್ನು ಒಡ್ಡಿ ಮುಸ್ಲಿಂ ಆಗಿ ಮತಾಂತರ ಮಾಡುತ್ತಿದ್ದರು.
ಹಿಂದೂ ಯುವತಿಯರನ್ನು ಮತಾಂತರಿಸಿದ್ದಕ್ಕಾಗಿ ಛಂಗೂರ್ ಬಾಬಾ ಭಾರತ-ನೇಪಾಳ ಗಡಿಯಲ್ಲಿ ಉತ್ತರ ಪ್ರದೇಶದ ಏಳು ಜಿಲ್ಲೆಗಳ ಮುಸ್ಲಿಂ ಯುವಕರಿಗೆ ಹಣ ಪಾವತಿ ಮಾಡಿರೋದನ್ನೂ ಉತ್ತರ ಪ್ರದೇಶ ಎಟಿಎಸ್ ಪೊಲೀಸರು ಪತ್ತೆ ಮಾಡಿದ್ದಾರೆ. ಛಂಗೂರ್ ಬಾಬಾ ಜೊತೆಗೆ ಆತನ ಸಹಚರ ನೀತು ಅಲಿಯಾಸ್ ನಸ್ರೀನ್ನನ್ನು ಸಹ ಬಂಧಿಸಿ ಏಳು ದಿನಗಳ ಎಟಿಎಸ್ ಕಸ್ಟಡಿಗೆ ಕಳುಹಿಸಲಾಗಿದೆ. ವಿದೇಶದಿಂದ ಬಂದ ಹಣವನ್ನು ನೀತು ನಸ್ರೀನ್ ನಿರ್ವಹಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ.
ಇದಲ್ಲದೆ, ಮತಾಂತರ ಚಟುವಟಿಕೆ ಉದ್ದೇಶಕ್ಕಾಗಿ ಚಾಂಗೂರ್ ಬಾಬಾ ಕೆಲವು ಕೋಡ್ ವರ್ಡ್ ಗಳನ್ನು ಬಳಸುತ್ತಿದ್ದ. ಹೊಸ ಯುವತಿಯರನ್ನು ಬಲೆಗೆ ಹಾಕುತ್ತಿದ್ದ ಪ್ರಕ್ರಿಯೆಗೆ ಮಿಟ್ಟಿ ಪಲಾಟ್ನಾ ಎಂದು ಹೇಳುತ್ತಿದ್ದರೆ, ಆಮಿಷವೊಡ್ಡಿ ಯುವತಿಯರನ್ನು ಯಾಮಾರಿಸುತ್ತಿದ್ದುದಕ್ಕೆ ಕಾಜಲ್ ಲಗಾನಾ, ಸಂತ್ರಸ್ತ ಯುವತಿಯರಿಗೆ ಹೊಸ ಭವಿಷ್ಯ ರೂಪಿಸುವುದಕ್ಕಾಗಿ ಬಾಬಾನ ಭೇಟಿ ಮಾಡುತ್ತಿದ್ದ ಪ್ರಕ್ರಿಯೆಗೆ ದರ್ಶನ್ ಎಂದು ಕೋಡ್ ವರ್ಡ್ ಬಳಸುತ್ತಿದ್ದರು. ಒಟ್ಟು ಮತಾಂತರ ಪ್ರಕ್ರಿಯೆಯನ್ನು ಸದ್ದಿಲ್ಲದೆ, ಇಡೀ ತಂಡ ಗುಪ್ತವಾಗಿಯೇ ನಡೆಸುತ್ತಿತ್ತು.
ವಿದೇಶಿ ಫಂಡಿಂಗ್ ಪತ್ತೆಹಚ್ಚಲು ಮತ್ತು ಹೆಚ್ಚಿನ ಸಂಪರ್ಕಗಳನ್ನು ಪತ್ತೆಹಚ್ಚುವ ಸಲುವಾಗಿ ಗುಪ್ತಚರ ಬ್ಯೂರೋ (IB) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಪ್ರಕರಣದ ಬಗ್ಗೆ ಇಬ್ಬರನ್ನೂ ವಿಚಾರಣೆಗೆ ಒಳಪಡಿಸಲಿದ್ದಾರೆ. ನವೀನ್ ಅಲಿಯಾಸ್ ಜಲಾಲುದ್ದೀನ್ ಮತ್ತು ಛಂಗೂರ್ ಬಾಬಾ ಮಗ ಮೆಹಬೂಬ್ನನ್ನು ಈಗಾಗಲೇ ಬಂಧಿಸಲಾಗಿದ್ದು, ಲಕ್ನೋ ಜಿಲ್ಲಾ ಜೈಲಿನಲ್ಲಿದ್ದಾರೆ.
In a major crackdown on an alleged mass religious conversion racket, Uttar Pradesh Anti-Terrorism Squad (ATS) has arrested Jamaluddin alias Changoora Baba, who is accused of orchestrating a large-scale ‘Love Jihad’ operation with the help of 1,000 Muslim youths. The sensational revelations emerged during an ongoing probe by state security agencies.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm