ಬ್ರೇಕಿಂಗ್ ನ್ಯೂಸ್
23-12-20 05:04 pm Headline Karnataka News Network ದೇಶ - ವಿದೇಶ
ಲಕ್ನೋ, ಡಿ.23 : ಅಣೆಕಟ್ಟು ಬಳಿಯ ಕಾಲುವೆಗೆ ಬಿದ್ದ 5 ವರ್ಷದ ತನ್ನ ಮಗಳನ್ನು ರಕ್ಷಿಸಲು ಹೋದ ಶಿಕ್ಷಕಿ ಮತ್ತು ಆಕೆಯ ತಂದೆ ಇಬ್ಬರು ಕಾಲುವೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ನಾಜಿಯಾ ಶರೂನ್(31) ಮತ್ತು ಈಕೆಯ ತಂದೆ ಟಿ.ಪಿ ಹಸ್ಸೆನಾರ್(61) ಎಂದು ಗುರುತಿಸಲಾಗಿದೆ. ನಾಜಿಯಾ ಲಲಿತ್ಪುರ್ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕಿಯಾಗಿದ್ದಳು. ಈಕೆ ತಂದೆ ತಿರುವನಂತಪುರನ ಕಿಲಿಮನೋರ್ನ ಪುಲಿಮಥ್ ನಿವಾಸಿಯಾಗಿದ್ದರು.

ನಾಜಿಯಾ ತನ್ನ ಮಗಳು ಹಾಗೂ ತಂದೆ ಮೂವರು ಸೇರಿ ಲಲಿತ್ಪುರ್ ನಲ್ಲಿರುವ ಮತಾತಿಲ ಡ್ಯಾಂ ಬಳಿಯಿರುವ ಪಾರ್ಕಿಗೆ ಹೋಗಿದ್ದಾರೆ. ಈ ವೇಳೆ ಕೊಳದ ಬಳಿ ಆಟವಾಡುತ್ತಿದ್ದ ಮಗು, ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾಳೆ. ಇದನ್ನು ಗಮನಿಸಿದ ತಂದೆ- ಮಗಳು ಇಬ್ಬರು ಕಾಲುವೆಗೆ ಹಾರಿದ್ದಾರೆ. ಆದರೆ ಕಾಲುವೆಯಲ್ಲಿ ಬಿದ್ದ ಮಗುವನ್ನು ಅಲ್ಲೇ ಹತ್ತಿರದಲ್ಲಿ ಇದ್ದ ಸ್ಥಳೀಯರು ಬಂದು ರಕ್ಷಿಸಿದ್ದಾರೆ. ಇನ್ನು ತಂದೆ-ಮಗಳನ್ನು ರಕ್ಷಿಸುವಷ್ಟರಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ.
ಮುಳುಗು ತಜ್ಞರ ಸಹಾಯದಿಂದ ತಂದೆ - ಮಗಳ ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಗಿದೆ. ಇಬ್ಬರ ಮೃತದೇಹವನ್ನು ಉತ್ತರ ಪ್ರದೇಶದಿಂದ ಕೇರಳದ ಪುಲಿಮತ್ಗೆ ತಂದು ಅಂತಿಮ ಸಂಸ್ಕಾರ ನೆರವೇರಿಸಲಾಗಿದೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm