ಬ್ರೇಕಿಂಗ್ ನ್ಯೂಸ್
20-07-25 04:47 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 20 : ಸಿಆರ್ಪಿಎಫ್ ಯೋಧನೊಬ್ಬ ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಪ್ರಿಯತಮೆಯೂ, ವೃತ್ತಿಯಲ್ಲಿ ಎಎಸ್ಐ ಆಗಿದ್ದ ಯುವತಿಯನ್ನು ಇರಿದು ಕೊಂದು ಬಳಿಕ ಆಕೆ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಠಾಣೆಯಲ್ಲಿ ಶರಣಾದ ಘಟನೆ ಗುಜರಾತ್ನ ಕಚ್ ಜಿಲ್ಲೆಯ ಅಂಜಾರ್ನಲ್ಲಿ ನಡೆದಿದೆ.
ಅರುಣಾಬೆನ್ ನಟುಭಾಯಿ ಜಾದವ್ (25) ಕೊಲೆಯಾದ ಯುವತಿಯಾಗಿದ್ದು ಕಛ್ ಜಿಲ್ಲೆಯ ಅಂಜಾರ್ ಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಹತ್ಯೆಗೈದ ಆರೋಪಿ ದಿಲೀಪ್ ಡಾಂಗ್ಚಿಯಾ ಸಿಆರ್ಪಿಎಫ್ ಯೋಧನಾಗಿದ್ದು, ಇಬ್ಬರೂ ಹಲವು ವರ್ಷಗಳಿಂದ ಲಿವ್ ಇನ್ನಲ್ಲಿದ್ದರು. ಹತ್ಯೆಯ ಬಳಿಕ ಆರೋಪಿ ಆಕೆ ಕೆಲಸ ಮಾಡುತ್ತಿದ್ದ ಅಂಜಾರ್ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಶುಕ್ರವಾರ ರಾತ್ರಿ ಅರುಣಾಬೆನ್ ಮತ್ತು ಆರೋಪಿ ಮನೆಯಲ್ಲಿ ಜಗಳವಾಡಿದ್ದು ಈ ವೇಳೆ ತಾಯಿ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಕ್ಕೆ ಕೊಲೆ ಮಾಡಿರುವುದಾಗಿ ಆರೋಪಿ ಪೊಲೀಸರ ಬಳಿ ಹೇಳಿಕೊಂಡಿದ್ದಾನೆ. 2021ರಲ್ಲಿ ಇನ್ಸ್ಟಾಗ್ರಾಮ್ ಮೂಲಕ ಇಬ್ಬರು ಪರಿಚಯ ಆಗಿದ್ದರು. ಬಳಿಕ ಪರಿಚಯ ಪ್ರೇಮಕ್ಕೆ ತಿರುಗಿ, ಒಟ್ಟಿಗೆ ವಾಸವಿದ್ದರು. ಇಬ್ಬರೂ ಮುಂದೆ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಇದರ ನಡುವೆಯೇ ಇವರ ಬಾಳಲ್ಲಿ ದುರಂತ ನಡೆದುಹೋಗಿದೆ. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಇವರು ವಾಸವಿದ್ದ ಕೊಠಡಿಯಲ್ಲೇ ಸಣ್ಣ ವಿಚಾರಕ್ಕೆ ಜಗಳ ಶುರುವಾಗಿದ್ದು ದಿಲೀಪ್ ತನ್ನ ಪ್ರಿಯತಮೆಯನ್ನು ಕತ್ತು ಹಿಸುಕಿ ಕೊಂದು ಪೊಲೀಸರಿಗೆ ಶರಣಾಗಿದ್ದಾರೆ.
In a shocking incident from Anjar in Gujarat’s Kutch district, a Central Reserve Police Force (CRPF) jawan allegedly strangled his live-in partner, who was serving as an Assistant Sub-Inspector (ASI), and later surrendered at the very police station where she was posted.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm