ಬ್ರೇಕಿಂಗ್ ನ್ಯೂಸ್
23-12-20 08:51 pm Headline Karnataka News Network ದೇಶ - ವಿದೇಶ
ಇಸ್ಲಮಾಬಾದ್, ಡಿ.23: ಪಾಕಿಸ್ತಾನದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಾಗಿದೆ. ಜೊತೆಗೆ ಹಣದುಬ್ಬರವೂ ಏರಿಕೆಯಾಗಿದ್ದು, ಅಲ್ಲಿ ನಿತ್ಯವಸ್ತುಗಳ ಬೆಲೆ ಗಗನಕ್ಕೇರಿದೆ.
ಅಲ್ಲಿನ ಪರಿಸ್ಥಿತಿ ಎಲ್ಲಿಗೆ ಮುಟ್ಟಿದೆ ಅಂದ್ರೆ, ಕೋಳಿ ಮೊಟ್ಟೆಯ ದರ 30 ರೂಪಾಯಿ ಆಗಿದೆ. ಮೊಟ್ಟೆ ಸಾಮಾನ್ಯವಾಗಿ ಅತಿ ಹೆಚ್ಚು ಬಳಕೆಯಾಗುವ ವಸ್ತು. ಆದರೆ, ಜನಸಾಮಾನ್ಯರು ಅಲ್ಲೀಗ ಮೊಟ್ಟೆ ಕೊಂಡು ತಿನ್ನುವ ಹಾಗಿಲ್ಲ. ಡಜನ್ ಮೊಟ್ಟೆಯನ್ನು ಕೊಳ್ಳುವುದಾದರೆ 240 ರೂ.ಗೆ ನೀಡಲಾಗುತ್ತದೆ. ಒಂದು ಮೊಟ್ಟೆ ಖರೀದಿಸಲು ಬಂದರೆ 30 ರೂಪಾಯಿ ನೀಡಬೇಕಾಗುತ್ತದೆ.
ಇನ್ನು ಕೋಳಿ ಮಾಂಸದ ದರವೂ ವಿಪರೀತವಾಗಿ ಏರಿಕೆಯಾಗಿದೆ. ಕೋಳಿ ಮಾಂಸ ಕೇಜಿಗೆ 300 ರೂ.ಗೆ ಏರಿದ್ದು ಚಳಿಗಾಲದಲ್ಲಿ ಮಾಂಸ ಪ್ರಿಯರು ಕೈಸುಟ್ಟುಕೊಂಡಿದ್ದಾರೆ. ಇದರ ಜೊತೆ ಶುಂಠಿಯ ದರವೂ ಭಾರೀ ಏರಿಕೆ ಕಂಡಿದೆ. ಶುಂಠಿಗೆ ಕೇಜಿಗೆ ಒಂದು ಸಾವಿರಕ್ಕಿಂತಲೂ ಹೆಚ್ಚು ಬೆಲೆಯಾಗಿದೆ. ಸಾಮಾನ್ಯವಾಗಿ ಚಳಿಗಾಲದಲ್ಲಿ ಪಾಕಿಸ್ತಾನದ ಜನರು ಮೊಟ್ಟೆ ಮತ್ತು ಶುಂಠಿಯನ್ನು ಹೆಚ್ಚಾಗಿ ಬಳಸುತ್ತಾರೆ. ಇದಲ್ಲದೆ ದಿನವಹಿ ಬಳಸುವ ಬಹುತೇಕ ವಸ್ತುಗಳ ದರವೂ ದುಪ್ಪಟ್ಟಾಗಿದೆ. ಸಕ್ಕರೆ ಬೆಲೆ ಕೇಜಿಗೆ 100 ರೂ. ಗಡಿ ದಾಟಿದ್ದರೆ, ಗೋಧಿ ಬೆಲೆ ಕೇಜಿಗೆ 60 ರೂ. ಆಗಿದೆ. ಗೋಧಿ ಹಿಟ್ಟಿನ ದರ ಇನ್ನಷ್ಟು ಹೆಚ್ಚಿರುವ ಬಗ್ಗೆ ಅಲ್ಲಿನ ವರದಿಗಳು ಹೇಳುತ್ತವೆ. ಪಾಕಿಸ್ತಾನದಲ್ಲಿ ಶೇ.25ರಿಂದ 30 ಪರ್ಸೆಂಟ್ ಜನರು ಬಡತನ ರೇಖೆಗಿಂತ ಕೆಳಗಿದ್ದು ಎರಡು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಉಂಟಾಗಿದೆ.
ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಸರಕಾರ ಆಡಳಿತಕ್ಕೆ ಬಂದ ಮೇಲೆ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದೆ ಎನ್ನಲಾಗುತ್ತಿದ್ದು, ದಿನವಹಿ ವಸ್ತುಗಳ ದರ ಗಗನಮುಖಿಯಾಗುತ್ತಿರುವುದು ಬಡಜನರ ಮೇಲೆ ಬರೆ ಎಳೆದಿದೆ. ಪಾಕಿಸ್ತಾನದ ಬಹುತೇಕ ರಾಜ್ಯಗಳಲ್ಲಿ ನಿತ್ಯಸಾಮಗ್ರಿಗಳ ದರ ಏರಿಕೆಯಾಗಿದ್ಯಂತೆ.
Various poultry products are getting dearer by the day. The rate of eggs reached Rs240 per dozen mark on Wednesday, breaking all the previous records of the increase in the price in winters.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am